AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ; ಡಿ.23 ರಂದು KUWJ ಘಟಕ ಉದ್ಘಾಟನೆ

ಮಹಾರಾಷ್ಟ್ರದಲ್ಲಿ ಕನ್ನಡ ಕಂಪು ಬೆಳಗಿಸುತ್ತಿರುವ ಮುಂಬಯಿಯಲ್ಲಿ ಕೆಯುಡಬ್ಲ್ಯುಜೆ ಘಟಕ ಡಿಸೆಂಬರ್ 23ಕ್ಕೆ ಚಾಲನೆಗೊಳ್ಳಲಿದೆ. ರೋನ್ಸ್ ಬಂಟ್ವಾಳ ಮತ್ತಿತರ ಸ್ನೇಹಿತರು ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದು ಕನ್ನಡಿಗ ಪತ್ರಕರ್ತರ ಸಂಘಟನೆ ಮಾಡಿರುವುದು ವಿಶೇಷ. ಮುಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಪತ್ರಕರ್ತರ ಸಮಾವೇಶ ಮಾಡುವ ಉದ್ದೇಶವನ್ನು KUWJ ಹೊಂದಿದೆ.

ಕರ್ನಾಟಕ-ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ; ಡಿ.23 ರಂದು KUWJ ಘಟಕ ಉದ್ಘಾಟನೆ
ಕರ್ನಾಟಕ-ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ; ಡಿ.23 ರಂದು KUWJ ಘಟಕ ಉದ್ಘಾಟನೆ (ಸಾಂದರ್ಭಿಕ ಚಿತ್ರ)Image Credit source: Getty Images
TV9 Web
| Edited By: Rakesh Nayak Manchi|

Updated on: Dec 21, 2023 | 7:15 AM

Share

ಬೆಂಗಳೂರು, ಡಿ.21: ಮಹಾರಾಷ್ಟ್ರದಲ್ಲಿ ಕನ್ನಡ ಕಂಪು ಬೆಳಗಿಸುತ್ತಿರುವ ಮುಂಬಯಿಯಲ್ಲಿ ಕೆಯುಡಬ್ಲ್ಯುಜೆ (KUWJ) ಘಟಕ ಡಿಸೆಂಬರ್ 23ಕ್ಕೆ ಚಾಲನೆಗೊಳ್ಳಲಿದೆ. ಕೆಯುಡಬ್ಲ್ಯುಜೆ ಮಹಾರಾಷ್ಟ್ರ ಘಟಕವನ್ನು ಕೃಷಿ ಸಚಿವ ಚಲುವರಾಯಸ್ವಾಮಿ (N. Chaluvaraya Swamy) ಉದ್ಘಾಟಿಸಲಿದ್ದು, ಸ್ಪೀಕರ್ ಯು.ಟಿ.ಖಾದರ್ (U.T. Khader) ಅವರು ಸದಸ್ಯರಿಗೆ ಗುರುತಿನ ಐಡಿ ಕಾರ್ಡ್ ನೀಡಲಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಡಾ.ನಾರಾಯಣಗೌಡ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಆರ್.ಕೆ.ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದ ಆರ್ಥಿಕ ನಗರಿ ಎಂದೇ ಗುರುತಿಸಿಕೊಂಡಿರುವ ಮುಂಬಯಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲ್ಯುಜೆ) ತನ್ನ ವ್ಯಾಪ್ತಿ ವಿಸ್ತರಿಸುತ್ತಿದೆ. ದೂರದ ಮುಂಬಯಿಗೆ ನಾನಾ ಕಾರಣಕ್ಕಾಗಿ ಉದ್ಯೋಗ ಅರಸಿ ಹೋದ ಕನ್ನಡಿಗರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕರಾವಳಿ ಭಾಗದ ಜನರು ನಮ್ಮದೇ ಮುಂಬಯಿ ಎನ್ನುವಷ್ಟು ಅಭಿಮಾನದಲ್ಲಿ ಅಲ್ಲಿ ನೆಲೆಸಿದ್ದಾರೆ ಎಂದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಕೋಟ್ ಧರಿಸಿ ತಡವಾಗಿ ಅಧಿವೇಶನಕ್ಕೆ ಬಂದ ಚಲುವರಾಯಸ್ವಾಮಿ ಕಾಲೆಳೆದ ವಿಪಕ್ಷ ನಾಯಕ ಅಶೋಕ

ಅನೇಕ ರಾಜ್ಯ ಮಟ್ಟದ ಕನ್ನಡ ಪತ್ರಿಕೆಗಳು ಮತ್ತು ಅಲ್ಲಿಯೇ ಪ್ರಕಟವಾಗುವ ಹಲವು ಸ್ಥಳೀಯ ಪತ್ರಿಕೆಗಳು ಕನ್ನಡಿಗರ ನಡುವೆ ಭಾವಸೇತುವಾಗಿರುವುದು ವಿಶೇಷ ಮತ್ತು ಅಭಿಮಾನದ ಸಂಗತಿ. ದೇಶದ ಆರ್ಥಿಕ ನಗರಿ ಎಂದೇ ಗುರುತಿಸಿಕೊಂಡಿರುವ ಮುಂಬಯಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರು (ಕೆಯುಡಬ್ಲ್ಯುಜೆ) ತನ್ನ ವ್ಯಾಪ್ತಿ ವಿಸ್ತರಿಸುತ್ತಿದ್ದಾರೆ.

ಹೊರನಾಡಿನ ಘಟಕವಾಗಿ ಮುಂಬಯಿ ಕನ್ನಡ ಪತ್ರಕರ್ತರು ಕೆಯುಡಬ್ಲ್ಯುಜೆ ಭಾಗವಾಗುತ್ತಿರುವುದು ಸಂತಸದ ಸಂಗತಿ. ಮಂಗಳೂರಿನಲ್ಲಿ ನಡೆದ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಪ್ರತಿನಿಧಿಗಳ ಸಮಾವೇಶದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕೇರಳ ರಾಜ್ಯದ ಕಾಸರಗೋಡು ಕನ್ನಡ ಪತ್ರಕರ್ತರ ಘಟಕ ಪ್ರಾರಂಭವಾಗಿದ್ದು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಹಾರಾಷ್ಟ್ರದಲ್ಲಿ ಕನ್ನಡ ಕಂಪು ಬೆಳಗಿಸುತ್ತಿರುವ ಮುಂಬಯಿಯಲ್ಲಿ ಕೆಯುಡಬ್ಲ್ಯುಜೆ ಘಟಕ ಡಿಸೆಂಬರ್ 23ಕ್ಕೆ ಚಾಲನೆಗೊಳ್ಳಲಿದೆ. ರೋನ್ಸ್ ಬಂಟ್ವಾಳ ಮತ್ತಿತರ ಸ್ನೇಹಿತರು ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದು ಕನ್ನಡಿಗ ಪತ್ರಕರ್ತರ ಸಂಘಟನೆ ಮಾಡಿರುವುದು ವಿಶೇಷ. ಮುಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಪತ್ರಕರ್ತರ ಸಮಾವೇಶ ಮಾಡುವ ಉದ್ದೇಶವನ್ನು ಕೆಯುಡಬ್ಲುಜೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು