AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಂತಿಯರ ಸರಣಿ ಸಾವಿಗೆ ಕಾರಣ ಬಹಿರಂಗ: ವರದಿಯಲ್ಲಿರುವ ಸ್ಫೋಟಕ ಅಂಶ ಇಲ್ಲಿದೆ

2024ರಲ್ಲಿ ಸಂಭವಿಸಿದ ಸರಣಿ ಬಾಣಂತಿಯರ ಸಾವು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಬಳ್ಳಾರಿ ಜಿಲ್ಲಾ ಆಸ್ಪತ್ರೆಯೊಂದರಲ್ಲೇ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲೂ ಬಾಣಂತಿಯರ ಸಾವಿನ ಸಂಖ್ಯೆ ಬಹಿರಂಗಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಾಣಂತಿಯರ ಸಾವಿನ ಬಗ್ಗೆ ಟೆಕ್ನಿಕಲ್ ಕಮಿಟಿ ರಚಿಸಿತ್ತು. ಇದೀಗ, ಟೆಕ್ನಿಕಲ್ ಕಮಿಟಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಹಲವು ವಿಚಾರ ಬಹಿರಂಗಗೊಂಡಿದೆ.

ಬಾಣಂತಿಯರ ಸರಣಿ ಸಾವಿಗೆ ಕಾರಣ ಬಹಿರಂಗ: ವರದಿಯಲ್ಲಿರುವ ಸ್ಫೋಟಕ ಅಂಶ ಇಲ್ಲಿದೆ
ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್
ಪ್ರಸನ್ನ ಗಾಂವ್ಕರ್​
| Edited By: |

Updated on:Apr 04, 2025 | 6:37 PM

Share

ಬೆಂಗಳೂರು, ಏಪ್ರಿಲ್​ 04: ಕಳೆದ ವರ್ಷ ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ (Maternal Mortality) ಹಿನ್ನೆಲೆಯ ಡೆತ್​ ಆಡಿಟ್​​ ವರದಿಯನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ (Dinesh Gundu Rao) ಬಿಡುಗಡೆ ಮಾಡಿದರು. ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್​ ಗುಂಡುರಾವ್​, ಟೆಕ್ನಿಕಲ್ ಕಮಿಟಿ ವರದಿಯ ಶಿಫಾರಸು ಸರ್ಕಾರ ಪಡೆದಿದೆ. ಅಗತ್ಯ ಔಷಧ ಸಲಕರಣೆ, ವೈದ್ಯರು ಜವಾಬ್ದಾರಿ ನಿರ್ವಹಿಸಿದ್ದರೇ, ಶೇ 70 ರಷ್ಟು ಬಾಣಂತಿಯರ ಸಾವುಗಳನ್ನು ನಾವು ತಡೆಯಬಹುದಿತ್ತು. ರಿಂಗರ್ ಲ್ಯಾಕ್ಟೇಟ್ ಸಮಸ್ಯೆಯಿಂದ 18 ಮಂದಿಯ ಬಾಣಂತಿಯರ ಸಾವಾಗಿದೆ. ಡಿಸೆಂಬರ್​ನಿಂದ ಇದನ್ನು ಸರಿಪಡಿಸಲು ತಯಾರಿ ಮಾಡಿದ್ದೇವೆ ಫ್ರೆಷ್ ಫ್ರೋಜನ್ ಪ್ಲಾಸ್ಮಾ ಇದ್ದಿದ್ರೆ ಸಾವಿನ ಸಂಖ್ಯೆ ತಡೆಯಬಹುದಿತ್ತು ಎಂದು ಹೇಳಿದರು.

ಮೊದಲೇ ರಿಸ್ಕ್ ಪ್ರಮಾಣ ಗೊತ್ತಿದ್ದರೆ ಹೆಚ್ಚಿನ ಚಿಕಿತ್ಸೆ ನೀಡಬಹುದಿತ್ತು. ಬಹಳ ಸುಧಾರಣೆ ಮಾಡುವ ಅವಶ್ಯಕತೆ ಇದೆ. ಬಳ್ಳಾರಿಯಲ್ಲಿ 5 ಸಾವು ಆಗಿರುವಂತೆ 13 ಕಡೆಗಳಲ್ಲೂ ಹೀಗೆ ಆಗಿದೆ ಎಂಬ ಅನುಮಾನ ಇದೆ. 10 ಮಂದಿ ವೈದ್ಯರಿಗೆ ನಿರ್ಲಕ್ಷ್ಯದ ಕಾರಣಕ್ಕೆ ನೊಟೀಸ್ ನೀಡಿದ್ದೇವೆ ಎಂದು ತಿಳಸಿದರು.

ಇದನ್ನೂ ಓದಿ
Image
ಬಿಮ್ಸ್​ನಲ್ಲಿ ನಿಲ್ಲದ ಬಾಣಂತಿಯರ ಮರಣ: ಎರಡು ದಿನಗಳ ಅಂತರದಲ್ಲಿ 2ನೇ ಸಾವು
Image
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಹೆಚ್ಚಿದ ಆತಂಕ
Image
ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರ ಸಾವು: ಹೆಚ್ಚಿದ ಆತಂಕ
Image
ಬಳ್ಳಾರಿ ಬಾಣಂತಿಯರ ಸಾವು: ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು

ಬಾಣಂತಿಯರ ಸಾವಿನ ಸಂಖ್ಯೆ

  • 2020-21 ರಲ್ಲಿ 714 ಸಾವು
  • 2021-22 ರಲ್ಲಿ 635 ಸಾವು
  • 2022-23 ರಲ್ಲಿ 594 ಸಾವು
  • 2023-24 ರಲ್ಲಿ 550 ಸಾವು
  • 2024-25 ರಲ್ಲಿ‌ 530 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ವರದಿಯಲ್ಲಿ ಪ್ರಮುಖ ಅಂಶಗಳು

  • ಶೇಕಡ 63 ರಷ್ಟು ತಾಯಂದಿರು ಸಿಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ, ಶೇಕಡ 37 ರಷ್ಟು ಮಂದಿ ಬಾಣಂತಿಯರಿಗೆ ಸಾಮಾನ್ಯ ಹೆರಿಗೆಗಳಾಗಿವೆ.
  • ರಿಂಗರ್ ಲ್ಯಾಕ್ಟೇಟ್ ಸಮಸ್ಯೆಗೆ ಸಂಬಂಧಿಸಿದ 18 ಬಾಣಂತಿಯರ ಸಾವುಗಳಾಗಿವೆ. 5 ಬಳ್ಳಾರಿ, 4 ರಾಯಚೂರು, 4 ಬೆಂಗಳೂರು ನಗರ, 3 ಉತ್ತರ ಕನ್ನಡ ಮತ್ತು ಯಾದಗಿರಿ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಸೇರಿವೆ.
  • ವಿಶ್ಲೇಷಣೆ ಪ್ರಕ್ರಿಯಲ್ಲಿ ಕಂಡುಬಂದ ಅಂಶಗಳ ಆಧಾರದಮೇಲೆ 27 ಶಿಫಾರಸುಗಳನ್ನು ಸಲ್ಲಿಸಲಾಗಿದೆ.
  • ಈ ಶಿಫಾರಸುಗಳು ಆರೋಗ್ಯ ಸಂಸ್ಥೆಗಳಲ್ಲಿ, ಪ್ರಸವ ಪೂರ್ವ ಮತ್ತು ಪ್ರಸವಾನಂತರದ ಸೇವೆಗಳ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ.
  • ಶಿಫಾರಸುಗಳಲ್ಲಿ, ಸಾಮರ್ಥ್ಯ ವೃದ್ಧಿ, ಉಪಕರಣಗಳು ಮತ್ತು ಔಷಧಿಗಳೊಂದಿಗೆ ಸೌಲಭ್ಯಗಳನ್ನು ಬಲಪಡಿಸುವುದು. ರಕ್ತ ಸಂಗ್ರಹ ಘಟಕಗಳನ್ನು ಬಲಪಡಿಸುವುದು, ಸಾಮಾನ್ಯ ಹೆರಿಗೆಯ ನಂತರ ಬಾಣಂತಿಯರು 3 ದಿನಗಳು ಮತ್ತು ಸಿಸೇರಿಯನ್ ಹೆರಿಗೆಗಳ ನಂತರ 7 ದಿನಗಳ ಕಡ್ಡಾಯ ಆಸ್ಪತ್ರೆ ವಾಸ್ತವ್ಯ ಮಾಡಲು ಸೂಚಿಸಲಾಗಿದೆ.
  • ಸಾವಿಗೆ ಕಾರಣ ಸ್ಪಷ್ಟವಾಗಿಲ್ಲದ ಕೆಲವು ಸಂದರ್ಭಗಳಲ್ಲಿ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಶಿಫಾರಸ್ಸು ಮಾಡಲಾಗಿದೆ. ಹೆರಿಗೆಯ ಸ್ಥಳ ಅಥವಾ ಜನನ ಯೋಜನೆಯನ್ನು ಗರ್ಭಿಣಿಯರು ಮತ್ತು ಕುಟುಂಬ ಸದಸ್ಯರೊಂದಿಗೆ ಮಾಡಬೇಕು.
  • ಹೆರಿಗೆಗೆ ನಿಯೋಜಿಸಿರುವ ಮಹಿಳೆಯರ ಪಟ್ಟಿಯನ್ನು ಸಂಬಂಧ ಪಟ್ಟ ಆಸ್ಪತ್ರೆಯೊಂದಿಗೆ ಮುಂಚಿತವಾಗಿ ಹಂಚಿಕೊಳ್ಳಲು ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 4 April 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ