AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಣಂತಿಯರ ಸರಣಿ ಸಾವಿಗೆ ಕಾರಣ ಬಹಿರಂಗ: ವರದಿಯಲ್ಲಿರುವ ಸ್ಫೋಟಕ ಅಂಶ ಇಲ್ಲಿದೆ

2024ರಲ್ಲಿ ಸಂಭವಿಸಿದ ಸರಣಿ ಬಾಣಂತಿಯರ ಸಾವು ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು. ಬಳ್ಳಾರಿ ಜಿಲ್ಲಾ ಆಸ್ಪತ್ರೆಯೊಂದರಲ್ಲೇ ಐವರು ಬಾಣಂತಿಯರು ಮೃತಪಟ್ಟಿದ್ದರು. ಈ ಬೆನ್ನಲ್ಲೇ ರಾಜ್ಯದ ವಿವಿಧ ಜಿಲ್ಲಾಸ್ಪತ್ರೆಗಳಲ್ಲೂ ಬಾಣಂತಿಯರ ಸಾವಿನ ಸಂಖ್ಯೆ ಬಹಿರಂಗಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬಾಣಂತಿಯರ ಸಾವಿನ ಬಗ್ಗೆ ಟೆಕ್ನಿಕಲ್ ಕಮಿಟಿ ರಚಿಸಿತ್ತು. ಇದೀಗ, ಟೆಕ್ನಿಕಲ್ ಕಮಿಟಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದು, ಹಲವು ವಿಚಾರ ಬಹಿರಂಗಗೊಂಡಿದೆ.

ಬಾಣಂತಿಯರ ಸರಣಿ ಸಾವಿಗೆ ಕಾರಣ ಬಹಿರಂಗ: ವರದಿಯಲ್ಲಿರುವ ಸ್ಫೋಟಕ ಅಂಶ ಇಲ್ಲಿದೆ
ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್
Follow us
ಪ್ರಸನ್ನ ಗಾಂವ್ಕರ್​
| Updated By: ವಿವೇಕ ಬಿರಾದಾರ

Updated on:Apr 04, 2025 | 6:37 PM

ಬೆಂಗಳೂರು, ಏಪ್ರಿಲ್​ 04: ಕಳೆದ ವರ್ಷ ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ (Maternal Mortality) ಹಿನ್ನೆಲೆಯ ಡೆತ್​ ಆಡಿಟ್​​ ವರದಿಯನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ (Dinesh Gundu Rao) ಬಿಡುಗಡೆ ಮಾಡಿದರು. ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್​ ಗುಂಡುರಾವ್​, ಟೆಕ್ನಿಕಲ್ ಕಮಿಟಿ ವರದಿಯ ಶಿಫಾರಸು ಸರ್ಕಾರ ಪಡೆದಿದೆ. ಅಗತ್ಯ ಔಷಧ ಸಲಕರಣೆ, ವೈದ್ಯರು ಜವಾಬ್ದಾರಿ ನಿರ್ವಹಿಸಿದ್ದರೇ, ಶೇ 70 ರಷ್ಟು ಬಾಣಂತಿಯರ ಸಾವುಗಳನ್ನು ನಾವು ತಡೆಯಬಹುದಿತ್ತು. ರಿಂಗರ್ ಲ್ಯಾಕ್ಟೇಟ್ ಸಮಸ್ಯೆಯಿಂದ 18 ಮಂದಿಯ ಬಾಣಂತಿಯರ ಸಾವಾಗಿದೆ. ಡಿಸೆಂಬರ್​ನಿಂದ ಇದನ್ನು ಸರಿಪಡಿಸಲು ತಯಾರಿ ಮಾಡಿದ್ದೇವೆ ಫ್ರೆಷ್ ಫ್ರೋಜನ್ ಪ್ಲಾಸ್ಮಾ ಇದ್ದಿದ್ರೆ ಸಾವಿನ ಸಂಖ್ಯೆ ತಡೆಯಬಹುದಿತ್ತು ಎಂದು ಹೇಳಿದರು.

ಮೊದಲೇ ರಿಸ್ಕ್ ಪ್ರಮಾಣ ಗೊತ್ತಿದ್ದರೆ ಹೆಚ್ಚಿನ ಚಿಕಿತ್ಸೆ ನೀಡಬಹುದಿತ್ತು. ಬಹಳ ಸುಧಾರಣೆ ಮಾಡುವ ಅವಶ್ಯಕತೆ ಇದೆ. ಬಳ್ಳಾರಿಯಲ್ಲಿ 5 ಸಾವು ಆಗಿರುವಂತೆ 13 ಕಡೆಗಳಲ್ಲೂ ಹೀಗೆ ಆಗಿದೆ ಎಂಬ ಅನುಮಾನ ಇದೆ. 10 ಮಂದಿ ವೈದ್ಯರಿಗೆ ನಿರ್ಲಕ್ಷ್ಯದ ಕಾರಣಕ್ಕೆ ನೊಟೀಸ್ ನೀಡಿದ್ದೇವೆ ಎಂದು ತಿಳಸಿದರು.

ಇದನ್ನೂ ಓದಿ
Image
ಬಿಮ್ಸ್​ನಲ್ಲಿ ನಿಲ್ಲದ ಬಾಣಂತಿಯರ ಮರಣ: ಎರಡು ದಿನಗಳ ಅಂತರದಲ್ಲಿ 2ನೇ ಸಾವು
Image
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲೂ ಬಾಣಂತಿ ಸಾವು, ಹೆಚ್ಚಿದ ಆತಂಕ
Image
ಬಳ್ಳಾರಿ ಜಿಲ್ಲೆಯಲ್ಲಿ 8 ತಿಂಗಳಲ್ಲಿ 23 ಬಾಣಂತಿಯರ ಸಾವು: ಹೆಚ್ಚಿದ ಆತಂಕ
Image
ಬಳ್ಳಾರಿ ಬಾಣಂತಿಯರ ಸಾವು: ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲು

ಬಾಣಂತಿಯರ ಸಾವಿನ ಸಂಖ್ಯೆ

  • 2020-21 ರಲ್ಲಿ 714 ಸಾವು
  • 2021-22 ರಲ್ಲಿ 635 ಸಾವು
  • 2022-23 ರಲ್ಲಿ 594 ಸಾವು
  • 2023-24 ರಲ್ಲಿ 550 ಸಾವು
  • 2024-25 ರಲ್ಲಿ‌ 530 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.

ವರದಿಯಲ್ಲಿ ಪ್ರಮುಖ ಅಂಶಗಳು

  • ಶೇಕಡ 63 ರಷ್ಟು ತಾಯಂದಿರು ಸಿಸೇರಿಯನ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರೆ, ಶೇಕಡ 37 ರಷ್ಟು ಮಂದಿ ಬಾಣಂತಿಯರಿಗೆ ಸಾಮಾನ್ಯ ಹೆರಿಗೆಗಳಾಗಿವೆ.
  • ರಿಂಗರ್ ಲ್ಯಾಕ್ಟೇಟ್ ಸಮಸ್ಯೆಗೆ ಸಂಬಂಧಿಸಿದ 18 ಬಾಣಂತಿಯರ ಸಾವುಗಳಾಗಿವೆ. 5 ಬಳ್ಳಾರಿ, 4 ರಾಯಚೂರು, 4 ಬೆಂಗಳೂರು ನಗರ, 3 ಉತ್ತರ ಕನ್ನಡ ಮತ್ತು ಯಾದಗಿರಿ ಮತ್ತು ಬೆಳಗಾವಿಯಲ್ಲಿ ತಲಾ ಒಂದು ಸೇರಿವೆ.
  • ವಿಶ್ಲೇಷಣೆ ಪ್ರಕ್ರಿಯಲ್ಲಿ ಕಂಡುಬಂದ ಅಂಶಗಳ ಆಧಾರದಮೇಲೆ 27 ಶಿಫಾರಸುಗಳನ್ನು ಸಲ್ಲಿಸಲಾಗಿದೆ.
  • ಈ ಶಿಫಾರಸುಗಳು ಆರೋಗ್ಯ ಸಂಸ್ಥೆಗಳಲ್ಲಿ, ಪ್ರಸವ ಪೂರ್ವ ಮತ್ತು ಪ್ರಸವಾನಂತರದ ಸೇವೆಗಳ ಗುಣಮಟ್ಟವನ್ನು ಸುಧಾರಿಸುವ ಗುರಿಯನ್ನು ಹೊಂದಿವೆ.
  • ಶಿಫಾರಸುಗಳಲ್ಲಿ, ಸಾಮರ್ಥ್ಯ ವೃದ್ಧಿ, ಉಪಕರಣಗಳು ಮತ್ತು ಔಷಧಿಗಳೊಂದಿಗೆ ಸೌಲಭ್ಯಗಳನ್ನು ಬಲಪಡಿಸುವುದು. ರಕ್ತ ಸಂಗ್ರಹ ಘಟಕಗಳನ್ನು ಬಲಪಡಿಸುವುದು, ಸಾಮಾನ್ಯ ಹೆರಿಗೆಯ ನಂತರ ಬಾಣಂತಿಯರು 3 ದಿನಗಳು ಮತ್ತು ಸಿಸೇರಿಯನ್ ಹೆರಿಗೆಗಳ ನಂತರ 7 ದಿನಗಳ ಕಡ್ಡಾಯ ಆಸ್ಪತ್ರೆ ವಾಸ್ತವ್ಯ ಮಾಡಲು ಸೂಚಿಸಲಾಗಿದೆ.
  • ಸಾವಿಗೆ ಕಾರಣ ಸ್ಪಷ್ಟವಾಗಿಲ್ಲದ ಕೆಲವು ಸಂದರ್ಭಗಳಲ್ಲಿ ಮರಣೋತ್ತರ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಶಿಫಾರಸ್ಸು ಮಾಡಲಾಗಿದೆ. ಹೆರಿಗೆಯ ಸ್ಥಳ ಅಥವಾ ಜನನ ಯೋಜನೆಯನ್ನು ಗರ್ಭಿಣಿಯರು ಮತ್ತು ಕುಟುಂಬ ಸದಸ್ಯರೊಂದಿಗೆ ಮಾಡಬೇಕು.
  • ಹೆರಿಗೆಗೆ ನಿಯೋಜಿಸಿರುವ ಮಹಿಳೆಯರ ಪಟ್ಟಿಯನ್ನು ಸಂಬಂಧ ಪಟ್ಟ ಆಸ್ಪತ್ರೆಯೊಂದಿಗೆ ಮುಂಚಿತವಾಗಿ ಹಂಚಿಕೊಳ್ಳಲು ಸೂಚಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:54 pm, Fri, 4 April 25