
ಬೆಂಗಳೂರು, ಏಪ್ರಿಲ್ 04: ಕಳೆದ ವರ್ಷ ರಾಜ್ಯದಲ್ಲಿ ಸಂಭವಿಸಿದ ಬಾಣಂತಿಯರ ಸಾವಿನ (Maternal Mortality) ಹಿನ್ನೆಲೆಯ ಡೆತ್ ಆಡಿಟ್ ವರದಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಬಿಡುಗಡೆ ಮಾಡಿದರು. ಬಳಿಕ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, ಟೆಕ್ನಿಕಲ್ ಕಮಿಟಿ ವರದಿಯ ಶಿಫಾರಸು ಸರ್ಕಾರ ಪಡೆದಿದೆ. ಅಗತ್ಯ ಔಷಧ ಸಲಕರಣೆ, ವೈದ್ಯರು ಜವಾಬ್ದಾರಿ ನಿರ್ವಹಿಸಿದ್ದರೇ, ಶೇ 70 ರಷ್ಟು ಬಾಣಂತಿಯರ ಸಾವುಗಳನ್ನು ನಾವು ತಡೆಯಬಹುದಿತ್ತು. ರಿಂಗರ್ ಲ್ಯಾಕ್ಟೇಟ್ ಸಮಸ್ಯೆಯಿಂದ 18 ಮಂದಿಯ ಬಾಣಂತಿಯರ ಸಾವಾಗಿದೆ. ಡಿಸೆಂಬರ್ನಿಂದ ಇದನ್ನು ಸರಿಪಡಿಸಲು ತಯಾರಿ ಮಾಡಿದ್ದೇವೆ ಫ್ರೆಷ್ ಫ್ರೋಜನ್ ಪ್ಲಾಸ್ಮಾ ಇದ್ದಿದ್ರೆ ಸಾವಿನ ಸಂಖ್ಯೆ ತಡೆಯಬಹುದಿತ್ತು ಎಂದು ಹೇಳಿದರು.
ಮೊದಲೇ ರಿಸ್ಕ್ ಪ್ರಮಾಣ ಗೊತ್ತಿದ್ದರೆ ಹೆಚ್ಚಿನ ಚಿಕಿತ್ಸೆ ನೀಡಬಹುದಿತ್ತು. ಬಹಳ ಸುಧಾರಣೆ ಮಾಡುವ ಅವಶ್ಯಕತೆ ಇದೆ. ಬಳ್ಳಾರಿಯಲ್ಲಿ 5 ಸಾವು ಆಗಿರುವಂತೆ 13 ಕಡೆಗಳಲ್ಲೂ ಹೀಗೆ ಆಗಿದೆ ಎಂಬ ಅನುಮಾನ ಇದೆ. 10 ಮಂದಿ ವೈದ್ಯರಿಗೆ ನಿರ್ಲಕ್ಷ್ಯದ ಕಾರಣಕ್ಕೆ ನೊಟೀಸ್ ನೀಡಿದ್ದೇವೆ ಎಂದು ತಿಳಸಿದರು.
Published On - 5:54 pm, Fri, 4 April 25