AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ 3 ದಿನ ರಾಜ್ಯದಲ್ಲಿ ಕೊರೊನಾ ಲಸಿಕೆ ಸಿಗೋದು ಅನುಮಾನ; ಕೇಂದ್ರ ಸರ್ಕಾರ ಹೇಳಿದಷ್ಟೇ ಪೂರೈಕೆ ಸಾಧ್ಯ ಎನ್ನುತ್ತಿವೆ ಸಂಸ್ಥೆಗಳು

Corona Vaccine: ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಕೆಯಾಗದೇ ಇರುವುದು ಕೊರತೆಗೆ ಕಾರಣವಾಗಿದ್ದು, ಮೇ 8ರಂದು 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ಬಂದಿದೆ. ಇನ್ನು ಮೇ 14ರ ಬಳಿಕ ಲಸಿಕೆ ಪೂರೈಸುವುದಾಗಿ ಎರಡು ಲಸಿಕಾ ಕಂಪನಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿವೆ ಎಂದು ತಿಳಿದುಬಂದಿದೆ.

ಇನ್ನೂ 3 ದಿನ ರಾಜ್ಯದಲ್ಲಿ ಕೊರೊನಾ ಲಸಿಕೆ ಸಿಗೋದು ಅನುಮಾನ; ಕೇಂದ್ರ ಸರ್ಕಾರ ಹೇಳಿದಷ್ಟೇ ಪೂರೈಕೆ ಸಾಧ್ಯ ಎನ್ನುತ್ತಿವೆ ಸಂಸ್ಥೆಗಳು
ಕೊರೊನಾ ಲಸಿಕೆ
Skanda
|

Updated on: May 12, 2021 | 9:20 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊವಿಡ್ 19 ಎರಡನೇ ಅಲೆ ಉಲ್ಬಣಗೊಂಡಿರುವ ಬೆನ್ನಲ್ಲೇ ಲಸಿಕೆಯ ಕೊರತೆ ತಲೆದೋರಿದೆ. ರಾಜ್ಯದ ಹಲವೆಡೆ ಎರಡನೇ ಡೋಸ್​ ಪಡೆಯುವವರಿಗೂ ಲಸಿಕೆ ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂದಿನ 3 ದಿನಗಳ ಕಾಲ ಲಸಿಕೆ ಸಿಗುವುದೇ ಅನುಮಾನ ಎನ್ನಲಾಗುತ್ತಿದೆ. ಲಸಿಕೆ ಪೂರೈಸುವಂತೆ ತಯಾರಿಕಾ ಕಂಪನಿಗಳಿಗೆ ಸರ್ಕಾರದಿಂದ ಬೇಡಿಕೆ ಸಲ್ಲಿಸಲಾಗಿದ್ದರೂ ಕೋಟಿ ಲೆಕ್ಕದಲ್ಲಿ ಬೇಡಿಕೆ ಇಟ್ಟರೆ ಲಕ್ಷ ಲೆಕ್ಕದಲ್ಲಿ ಪೂರೈಕೆ ಆಗುತ್ತಿದೆ. ಹೀಗಾಗಿ ಇನ್ನೂ ಮೂರು ದಿನಗಳ ಕಾಲ ಲಸಿಕೆ ಸಿಗುವುದೇ ಅನುಮಾನವಾಗಿದ್ದು, 3 ದಿನದ ಬಳಿಕ ಲಸಿಕೆ ಸಿಕ್ಕರೂ ಕೇವಲ 2ನೇ ಡೋಸ್​ ಪಡೆಯುವವರಿಗಷ್ಟೇ ಸಿಗಬಹುದೇ ವಿನಃ ಎಲ್ಲರಿಗೂ ಲಭ್ಯವಾಗುವುದು ಕಷ್ಟ ಎಂಬ ಮಾತು ಕೇಳಿಬರುತ್ತಿದೆ.

ರಾಜ್ಯಕ್ಕೆ ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಕೆಯಾಗದೇ ಇರುವುದು ಕೊರತೆಗೆ ಕಾರಣವಾಗಿದ್ದು, ಮೇ 8ರಂದು 3.5 ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ಬಂದಿದೆ. ಇನ್ನು ಮೇ 14ರ ಬಳಿಕ ಲಸಿಕೆ ಪೂರೈಸುವುದಾಗಿ ಎರಡು ಲಸಿಕಾ ಕಂಪನಿಗಳು ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಿವೆ ಎಂದು ತಿಳಿದುಬಂದಿದೆ. ಕೇಂದ್ರ ಸರ್ಕಾರ ಹಂಚಿಕೆ ಮಾಡಿದಷ್ಟು ವ್ಯಾಕ್ಸಿನ್ ಪೂರೈಸುವುದಾಗಿ ಕಂಪನಿಗಳು ಹೇಳುತ್ತಿದ್ದು, ಅಗತ್ಯ ಪ್ರಮಾಣದಲ್ಲಿ ಪೂರೈಕೆಯಾಗದೇ ಇರುವುದರಿಂದ ಸಮಸ್ಯೆ ಎದುರಿಸುವಂತಾಗಿದೆ.

ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ಎಲ್ಲ ಪ್ರಕ್ರಿಯೆ ಮುಗಿಸಿದೆ. ಆದರೆ ಭಾರತ್ ಬಯೋಟೆಕ್ ಹಾಗೂ ಸೆರಮ್ ಇನಸ್ಟಿಟ್ಯೂಟ್​ ಆಫ್ ಇಂಡಿಯಾ ಸಂಸ್ಥೆಗಳಿಂದಲೇ ಪೂರೈಕೆಯಾಗುತ್ತಿಲ್ಲ. ಕೋಟಿ ಲೆಕ್ಕದಲ್ಲಿ ಕೇಳಿದರೆ ಕೇವಲ ಲಕ್ಷ ಡೋಸ್ ಲೆಕ್ಕದಲ್ಲಿ ಪೂರೈಕೆ ಮಾಡಲಾಗುತ್ತಿದೆ. ಇದೀಗ ಎರಡೂ ಕಂಪನಿಗಳು ಮೇ 14ರ ನಂತರ ಲಸಿಕೆ ಪೂರೈಸುವುದಾಗಿ ಹೇಳುತ್ತಿದ್ದು, ರಾಜ್ಯ ಸರ್ಕಾರ ಕೊವಿಶೀಲ್ಡ್ ಲಸಿಕೆಯನ್ನು ಹೆಚ್ಚು ಖರೀದಿಸಲು ನಿರ್ಧರಿಸಿದೆ. ಆದರೆ, ಈ ಖರೀದಿಗೂ ಕೇಂದ್ರ ಸರ್ಕಾರದ ನಿರ್ಧಾರ ಅಡ್ಡಿಯಾಗಿದ್ದು, ಕೇಂದ್ರ ಸರ್ಕಾರ ಹಂಚಿಕೆ ಮಾಡಿದಷ್ಟೇ ಲಸಿಕೆ ಪೂರೈಸುವುದಾಗಿ ಕಂಪನಿಗಳು ಹೇಳುತ್ತಿವೆ ಎಂಬ ಅಸಮಾಧಾನದ ಮಾತುಗಳು ಹೊರಬಿದ್ದಿವೆ.

ನಮ್ಮ ವಿರುದ್ಧ ಕೆಲ ರಾಜ್ಯಗಳು ಸುಮ್ಮನೆ ಆರೋಪ ಮಾಡುತ್ತಿವೆ: ಭಾರತ್ ಬಯೋಟೆಕ್ ಇದರ ಬೆನ್ನಲ್ಲೇ ಕೊವ್ಯಾಕ್ಸಿನ್​ ಲಸಿಕೆ ಉತ್ಪಾದಕ ಸಂಸ್ಥೆ ಭಾರತ್ ಬಯೋಟೆಕ್ ಟ್ವೀಟ್ ಮಾಡಿದ್ದು, ತಮ್ಮ ಬಗ್ಗೆ ಆರೋಪ ಹೊರಿಸುತ್ತಿರುವ ರಾಜ್ಯಗಳ ಬಗ್ಗೆ ಅಸಮಾಧಾನಗೊಂಡಿದೆ. ಕೊವ್ಯಾಕ್ಸಿನ್ ಪೂರೈಕೆಯನ್ನು ಸೂಕ್ತ ರೀತಿಯಲ್ಲಿ ಮಾಡಿದ್ದೇವೆ 18 ರಾಜ್ಯಗಳಿಗೆ ಕೊವ್ಯಾಕ್ಸಿನ್ ಡೋಸ್​ ಪೂರೈಕೆ ಮಾಡಲಾಗಿದೆ. ಮೇ 10ರಂದೇ ಕೊವ್ಯಾಕ್ಸಿನ್ ಲಸಿಕೆಯನ್ನು ಇಲ್ಲಿಂದ ಕಳುಹಿಸಿಕೊಟ್ಟಿದ್ದೇವೆ. ಆದರೆ ಹಲವು ರಾಜ್ಯಗಳು ನಮ್ಮ ವಿರುದ್ದ ಆರೋಪ ಮಾಡುತ್ತಿವೆ. ನಮ್ಮ 50 ಮಂದಿ ಸಿಬ್ಬಂದಿ ಕೊವಿಡ್​ನಿಂದ ಕೆಲಸಕ್ಕೆ ಹಾಜರಾಗುತ್ತಿಲ್ಲ. ಅದರ ನಡುವೆಯೂ ಕೇಂದ್ರ ಸರ್ಕಾರ ತಿಳಿಸಿದ ರೀತಿಯಲ್ಲೇ ಲಸಿಕೆ ಹಂಚಿಕೆ ಮಾಡಿದ್ದೇವೆ ಎಂಸು ಭಾರತ್ ಬಯೋಟೆಕ್ ಸಮರ್ಥಿಸಿಕೊಂಡಿದೆ.

ಇದನ್ನೂ ಓದಿ: Explainer: ಭಾರತದಲ್ಲಿ 2ನೇ ಡೋಸ್ ಕೊರೊನಾ ಲಸಿಕೆ ಪಡೆಯಲು ಏಕಿಷ್ಟು ಪರದಾಟ? ಪರಿಹಾರವೇನು?

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ