AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿವಿ: ಕಳ್ಳಾಟವಾಡಿದರೆ ಸೀಟ್ ಕಡಿತಕ್ಕೆ ಶಿಫಾರಸು

ಕರ್ನಾಟಕದ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಮತ್ತು ಸಿಬ್ಬಂದಿ ಕೊರತೆ ಇರುವುದು ತಿಳಿದುಬಂದಿದೆ. ಹೀಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ವರದಿ ಸಲ್ಲಿಸಲು ಸಿದ್ಧವಾಗಿದೆ. ಮೂಲಸೌಕರ್ಯ ಕೊರತೆಯಿರುವ ಕಾಲೇಜುಗಳ ವೈದ್ಯಕೀಯ ಸೀಟುಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಲಾಗುತ್ತದೆ ಎನ್ನಲಾಗಿದೆ.

ಕರ್ನಾಟಕ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿವಿ: ಕಳ್ಳಾಟವಾಡಿದರೆ ಸೀಟ್ ಕಡಿತಕ್ಕೆ ಶಿಫಾರಸು
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
Vinay Kashappanavar
| Edited By: |

Updated on:Jan 10, 2025 | 8:00 AM

Share

ಬೆಂಗಳೂರು, ಜನವರಿ 10: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಸಮಸ್ಯೆ ಇರುವುದು ಮತ್ತೆ ಬೆಳಕಿಗೆ ಬಂದಿದೆ. ಉತ್ತಮ ಸೌಲಭ್ಯ ಒದಗಿಸದ, ಸಿಬ್ಬಂದಿ ಕೊರತೆ ಇರುವ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್​ಎಂಸಿ) ಈ ಹಿಂದೆ ದಂಡ ವಿಧಿಸಿ ಶಾಕ್ ನೀಡಿತ್ತು. ಇದಿಗ ಮತ್ತೆ ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಚಾಟಿ ಬೀಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮುಂದಾಗಿದೆ.

ಎನ್​ಎಂಸಿಗೆ ವರದಿ ನೀಡಲು ಸಿದ್ಧತೆ

ಮೂಲಭೂತ ಸೌಕರ್ಯಕೊರತೆ ಹಾಗೂ ಸರಿಯಾದ ಸೇವೆ ನೀಡದೆ ಕಳ್ಳಾಟವಾಡುತ್ತಿರುವ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಎನ್​ಎಂಸಿಗೆ ವರದಿ ನೀಡಲು ಆರೋಗ್ಯ ವಿಶ್ವವಿದ್ಯಾಲಯ ಮುಂದಾಗಿದೆ. ಈ ಹಿಂದೆ ಎನ್​ಎಂಸಿ ರಾಜ್ಯದ 27 ಮೆಡಿಕಲ್ ಕಾಲೇಜಿಗೆ ನೋಟಿಸ್ ನೀಡಿ ದಂಡ ವಿಧಿಸಿತ್ತು. ಆ ಬಳಿಕ ಕೂಡ ಹಲವು ಮೆಡಿಕಲ್ ಕಾಲೇಜಿಗಳು ಮತ್ತೆ ಕಳ್ಳಾಟವಾಡುತ್ತಿವೆ. ಸಾಕಷ್ಟು ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ, ಸಿಬ್ಬಂದಿ ಕೊರತೆ ಇದೆ. ಜತೆಗೆ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನೂ ನೀಡುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ ಇತಂಹ ಕಾಲೇಜುಗಳ ವರದಿ ಪಡೆಯಲು ಆರೋಗ್ಯ ವಿವಿ ಮುಂದಾಗಿದೆ.

ಮೆಡಿಕಲ್ ಸೀಟ್ ಕಡಿತಕ್ಕೆ ಶಿಫಾರಸು!

ಮೂಲಸೌಕರ್ಯ ಕೊರತೆ ಇರುವ ಕಾಲೇಜುಗಳ ಮೆಡಿಕಲ್ ಸೀಟ್ ಕಡಿತಕ್ಕೆ ಎನ್​ಎಂಸಿಗೆ ವರದಿ ನೀಡಲು ಕೂಡಾ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸಿದ್ಧತೆ ಮಾಡಿದೆ. ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ ಮೆಡಿಕಲ್ ಕಾಲೇಜುಗಳ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದಾಗಿದೆ. ಒಂದೊಮ್ಮೆ ಮತ್ತೆ ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ ಕಂಡು ಬಂದರೆ, ಮೆಡಿಕಲ್ ಕಾಲೇಜುಗಳ ಸೀಟ್​​​ಗಳಿಗೆ ಎನ್​ಎಂಸಿ ಕತ್ತರಿ ಹಾಕಲಿದೆ.

ಈ ವಿಚಾರವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂಕೆ ರಮೇಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೆಚ್‌ಎಂಪಿವಿ ವೈರಸ್‌ ನಿಜಕ್ಕೂ ಅಪಾಯಕಾರಿಯೇ?‌ ಈ ಬಗ್ಗೆ ಡಾ. ಜಗದೀಶ್‌ ಚತುರ್ವೇದಿ ಏನು ಹೇಳಿದ್ದಾರೆ ನೋಡಿ

ಒಟ್ಟಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ಖಾಸಗಿ ಕಾಲೇಜುಗಳು ಕನಿಷ್ಠ ಮಾನದಂಡ ಪಾಲನೆ ಮಾಡುತ್ತಿಲ್ಲ. ಹೀಗಾಗಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ರಮಕ್ಕೆ ಮುಂದಾಗಿದೆ. ಇನ್ನಾದರೂ ವೈದ್ಯಕೀಯ ಕಾಲೇಜುಗಳಲ್ಲಿ ಎಲ್ಲೆಲ್ಲಿ ಖಾಲಿ ಹುದ್ದೆ ಇದೆಯೋ ಅವುಗಳನ್ನು ಸರ್ಕಾರ ಭರ್ತಿ ಮಾಡಬೇಕಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳು ಇನ್ನಾದರೂ ಉತ್ತಮ ಮೂಲಸೌಕರ್ಯದ ಕಡೆ ಗಮನಕೊಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:59 am, Fri, 10 January 25

Follow Us
Vinay Kashappanavar
Vinay Kashappanavar
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?