AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿವಿ: ಕಳ್ಳಾಟವಾಡಿದರೆ ಸೀಟ್ ಕಡಿತಕ್ಕೆ ಶಿಫಾರಸು

ಕರ್ನಾಟಕದ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯದ ಕೊರತೆ ಮತ್ತು ಸಿಬ್ಬಂದಿ ಕೊರತೆ ಇರುವುದು ತಿಳಿದುಬಂದಿದೆ. ಹೀಗಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವು ಇದೀಗ ರಾಷ್ಟ್ರೀಯ ವೈದ್ಯಕೀಯ ಆಯೋಗಕ್ಕೆ ವರದಿ ಸಲ್ಲಿಸಲು ಸಿದ್ಧವಾಗಿದೆ. ಮೂಲಸೌಕರ್ಯ ಕೊರತೆಯಿರುವ ಕಾಲೇಜುಗಳ ವೈದ್ಯಕೀಯ ಸೀಟುಗಳನ್ನು ಕಡಿಮೆ ಮಾಡಲು ಶಿಫಾರಸು ಮಾಡಲಾಗುತ್ತದೆ ಎನ್ನಲಾಗಿದೆ.

ಕರ್ನಾಟಕ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಕ್ರಮಕ್ಕೆ ಮುಂದಾದ ಆರೋಗ್ಯ ವಿವಿ: ಕಳ್ಳಾಟವಾಡಿದರೆ ಸೀಟ್ ಕಡಿತಕ್ಕೆ ಶಿಫಾರಸು
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
Follow us
Vinay Kashappanavar
| Updated By: Ganapathi Sharma

Updated on:Jan 10, 2025 | 8:00 AM

ಬೆಂಗಳೂರು, ಜನವರಿ 10: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿನ ಅನೇಕ ವೈದ್ಯಕೀಯ ಕಾಲೇಜುಗಳಲ್ಲಿ ಮೂಲಸೌಕರ್ಯ ಸಮಸ್ಯೆ ಇರುವುದು ಮತ್ತೆ ಬೆಳಕಿಗೆ ಬಂದಿದೆ. ಉತ್ತಮ ಸೌಲಭ್ಯ ಒದಗಿಸದ, ಸಿಬ್ಬಂದಿ ಕೊರತೆ ಇರುವ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ 27 ವೈದ್ಯಕೀಯ ಕಾಲೇಜುಗಳಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್​ಎಂಸಿ) ಈ ಹಿಂದೆ ದಂಡ ವಿಧಿಸಿ ಶಾಕ್ ನೀಡಿತ್ತು. ಇದಿಗ ಮತ್ತೆ ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಚಾಟಿ ಬೀಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮುಂದಾಗಿದೆ.

ಎನ್​ಎಂಸಿಗೆ ವರದಿ ನೀಡಲು ಸಿದ್ಧತೆ

ಮೂಲಭೂತ ಸೌಕರ್ಯಕೊರತೆ ಹಾಗೂ ಸರಿಯಾದ ಸೇವೆ ನೀಡದೆ ಕಳ್ಳಾಟವಾಡುತ್ತಿರುವ ಮೆಡಿಕಲ್ ಕಾಲೇಜುಗಳ ವಿರುದ್ಧ ಮತ್ತೆ ಎನ್​ಎಂಸಿಗೆ ವರದಿ ನೀಡಲು ಆರೋಗ್ಯ ವಿಶ್ವವಿದ್ಯಾಲಯ ಮುಂದಾಗಿದೆ. ಈ ಹಿಂದೆ ಎನ್​ಎಂಸಿ ರಾಜ್ಯದ 27 ಮೆಡಿಕಲ್ ಕಾಲೇಜಿಗೆ ನೋಟಿಸ್ ನೀಡಿ ದಂಡ ವಿಧಿಸಿತ್ತು. ಆ ಬಳಿಕ ಕೂಡ ಹಲವು ಮೆಡಿಕಲ್ ಕಾಲೇಜಿಗಳು ಮತ್ತೆ ಕಳ್ಳಾಟವಾಡುತ್ತಿವೆ. ಸಾಕಷ್ಟು ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ, ಸಿಬ್ಬಂದಿ ಕೊರತೆ ಇದೆ. ಜತೆಗೆ ರೋಗಿಗಳಿಗೆ ಸರಿಯಾದ ಚಿಕಿತ್ಸೆಯನ್ನೂ ನೀಡುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ ಇತಂಹ ಕಾಲೇಜುಗಳ ವರದಿ ಪಡೆಯಲು ಆರೋಗ್ಯ ವಿವಿ ಮುಂದಾಗಿದೆ.

ಮೆಡಿಕಲ್ ಸೀಟ್ ಕಡಿತಕ್ಕೆ ಶಿಫಾರಸು!

ಮೂಲಸೌಕರ್ಯ ಕೊರತೆ ಇರುವ ಕಾಲೇಜುಗಳ ಮೆಡಿಕಲ್ ಸೀಟ್ ಕಡಿತಕ್ಕೆ ಎನ್​ಎಂಸಿಗೆ ವರದಿ ನೀಡಲು ಕೂಡಾ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸಿದ್ಧತೆ ಮಾಡಿದೆ. ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ, ಕಳಪೆ ಉಪಕರಣಗಳು, ರೋಗಿಗಳ ದತ್ತಾಂಶಗಳನ್ನು ಸರಿಯಾಗಿ ನಿರ್ವಹಿಸದ ರಾಜ್ಯದ ಮೆಡಿಕಲ್ ಕಾಲೇಜುಗಳ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದಾಗಿದೆ. ಒಂದೊಮ್ಮೆ ಮತ್ತೆ ಮೆಡಿಕಲ್ ಕಾಲೇಜುಗಳಲ್ಲಿ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ ಕಂಡು ಬಂದರೆ, ಮೆಡಿಕಲ್ ಕಾಲೇಜುಗಳ ಸೀಟ್​​​ಗಳಿಗೆ ಎನ್​ಎಂಸಿ ಕತ್ತರಿ ಹಾಕಲಿದೆ.

ಈ ವಿಚಾರವಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂಕೆ ರಮೇಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಹೆಚ್‌ಎಂಪಿವಿ ವೈರಸ್‌ ನಿಜಕ್ಕೂ ಅಪಾಯಕಾರಿಯೇ?‌ ಈ ಬಗ್ಗೆ ಡಾ. ಜಗದೀಶ್‌ ಚತುರ್ವೇದಿ ಏನು ಹೇಳಿದ್ದಾರೆ ನೋಡಿ

ಒಟ್ಟಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ಖಾಸಗಿ ಕಾಲೇಜುಗಳು ಕನಿಷ್ಠ ಮಾನದಂಡ ಪಾಲನೆ ಮಾಡುತ್ತಿಲ್ಲ. ಹೀಗಾಗಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ರಮಕ್ಕೆ ಮುಂದಾಗಿದೆ. ಇನ್ನಾದರೂ ವೈದ್ಯಕೀಯ ಕಾಲೇಜುಗಳಲ್ಲಿ ಎಲ್ಲೆಲ್ಲಿ ಖಾಲಿ ಹುದ್ದೆ ಇದೆಯೋ ಅವುಗಳನ್ನು ಸರ್ಕಾರ ಭರ್ತಿ ಮಾಡಬೇಕಿದೆ. ಖಾಸಗಿ ವೈದ್ಯಕೀಯ ಕಾಲೇಜುಗಳು ಇನ್ನಾದರೂ ಉತ್ತಮ ಮೂಲಸೌಕರ್ಯದ ಕಡೆ ಗಮನಕೊಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:59 am, Fri, 10 January 25

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ