AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಗಾ ಲೋಕ್ ಅದಾಲತ್​​ನಲ್ಲಿ 2.63 ಲಕ್ಷ ಕೇಸ್​ ಇತ್ಯರ್ಥ: ದಾಖಲೆ ಬರೆದ ಕರ್ನಾಟಕ

ಜನನ, ಮರಣ ಪ್ರಮಾಣಪತ್ರ ನೋಂದಣಿ, ಹೆಸರು ತಿದ್ದುಪಡಿಗಾಗಿ ಕೋರ್ಟ್​​ಗೆ ಓಡಾಡುತ್ತಿದ್ದ 30,709 ಜನರ ಕೇಸ್ ಇತ್ಯರ್ಥಪಡಿಸಲಾಗಿದೆ. ಕರ್ನಾಟಕದ ನ್ಯಾಯಾಂಗದ ಈ ಕ್ರಮದಿಂದ ನ್ಯಾಯಾಧೀಶರಿಗೆ 80 ದಿನಗಳ ಕೆಲಸ ಉಳಿತಾಯವಾಗಿದೆ.

ಮೆಗಾ ಲೋಕ್ ಅದಾಲತ್​​ನಲ್ಲಿ 2.63 ಲಕ್ಷ ಕೇಸ್​ ಇತ್ಯರ್ಥ: ದಾಖಲೆ ಬರೆದ ಕರ್ನಾಟಕ
ಕರ್ನಾಟಕ ಹೈಕೋರ್ಟ್​
ರಾಜೇಶ್ ದುಗ್ಗುಮನೆ
| Edited By: |

Updated on:Dec 21, 2020 | 7:57 PM

Share

ಬೆಂಗಳೂರು: ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ಕಾರ್ಯದಲ್ಲಿ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಮಹತ್ವದ ಗುರಿ ಸಾಧಿಸಿದೆ. ಡಿ. 19 ರಂದು ರಾಜ್ಯದಲ್ಲಿ ನಡೆದ ಮೆಗಾ ಲೋಕ್ ಅದಾಲತ್​​ನಲ್ಲಿ ದಾಖಲೆ ಪ್ರಮಾಣದ ಕೇಸ್ ಇತ್ಯರ್ಥಗೊಳಿಸಲಾಗಿದೆ. ಹೈಕೋರ್ಟ್​​ನ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ಅರವಿಂದ್ ಕುಮಾರ್‌ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೆಗಾ ಲೋಕ್ ಅದಾಲತ್​ನಲ್ಲಿ ಒಟ್ಟು 2,63,197 ಕೇಸ್ ಇತ್ಯರ್ಥ ಪಡಿಸಲಾಗಿದ್ದು, ಚೆಕ್ ಬೌನ್ಸ್, ಅಪಘಾತ ಪ್ರಕರಣಗಳು ಸೇರಿದಂತೆ ಸಾರ್ವಜನಿಕರಿಗೆ 669.95 ಕೋಟಿ ರೂಪಾಯಿ ಪರಿಹಾರದ ಹಣ ಸಂದಾಯವಾಗಿದೆ. ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದ 3,095 ಆಸ್ತಿ ವಿಭಾಗದ ಕೇಸ್​​ಗಳನ್ನು ಬಗೆಹರಿಸಲಾಗಿದೆ. 42 ಸಾವಿರ ಅಪರಾಧ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಕ್ರಿಮಿನಲ್ ಪ್ರಕರಣಗಳಲ್ಲಿ ಸರ್ಕಾರಕ್ಕೆ 41.45 ಕೋಟಿ ದಂಡ ಪಾವತಿಯಾಗಿದೆ, ಎಂದು ಮಾಹಿತಿ ನೀಡಿದರು.

ಜನನ, ಮರಣ ಪ್ರಮಾಣಪತ್ರ ನೋಂದಣಿ, ಹೆಸರು ತಿದ್ದುಪಡಿಗಾಗಿ ಕೋರ್ಟ್​​ಗೆ ಓಡಾಡುತ್ತಿದ್ದ 30,709 ಜನರ ಕೇಸ್ ಇತ್ಯರ್ಥಪಡಿಸಲಾಗಿದೆ. ಕರ್ನಾಟಕದ ನ್ಯಾಯಾಂಗದ ಈ ಕ್ರಮದಿಂದ ನ್ಯಾಯಾಧೀಶರಿಗೆ 80 ದಿನಗಳ ಕೆಲಸ ಉಳಿತಾಯವಾಗಿದೆ. ಸರ್ಕಾರಕ್ಕೆ ಅಂದಾಜು 144 ಕೋಟಿ ರೂಪಾಯಿ ಲಾಭವಾದಂತಾಗಿದೆ ಎಂದು ನ್ಯಾ.ಅರವಿಂದ್ ಕುಮಾರ್‌ ಮಾಹಿತಿ ನೀಡಿದರು.

ಕೋವಿಡ್ ಸಮಯದಲ್ಲೂ ಕಾನೂನು ಸೇವೆಗಳ ಪ್ರಾಧಿಕಾರದ ಮನವಿಗೆ ಸ್ಪಂದಿಸಿ ರಾಜಿ ಸಂಧಾನಕ್ಕೆ ಮುಂದಾದ ಕಕ್ಷಿದಾರರಿಗೆ, ವಕೀಲರಿಗೆ ನ್ಯಾ. ಅರವಿಂದ್ ಕುಮಾರ್ ಧನ್ಯವಾದ ಅರ್ಪಿಸಿದ್ದಾರೆ. ಅವಘಡದಲ್ಲಿ ಪತಿ ಕಳೆದುಕೊಂಡ ಸಹನಾ ಎಂಬ ಮಹಿಳೆಗೆ 80 ಲಕ್ಷ ಪರಿಹಾರ ನೀಡಲಾಗಿದೆ ಎಂಬುದು ವಿಶೇಷ.

ನ್ಯಾಯಮೂರ್ತಿ ಅರವಿಂದ್ ಕುಮಾರ್

ತಬ್ಲಿಘಿ ಜಮಾತ್​​​ನಲ್ಲಿ ಪಾಲ್ಗೊಂಡಿದ್ದ ವಿದೇಶಿಯರು ತವರಿಗೆ ಮರಳಲು ನೆರವಾಗಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ

Published On - 7:51 pm, Mon, 21 December 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ