AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಕ್ರೋ ಫೈನಾನ್ಸ್‌ ಹಾವಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ಏನೇನು ಚರ್ಚೆಯಾಯ್ತ? ಇಲ್ಲಿದೆ ಮಾಹಿತಿ

ಮೈಕ್ರೋ ಫೈನಾನ್ಸ್‌ಗಳ ದೌರ್ಜನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಾಗೂ ಬಡ ಜನರಿಗೆ ಆಗುತ್ತಿರುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳುವ ಸಲುವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಏನೇನು ಚರ್ಚೆಯಾಯಿತು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಮೈಕ್ರೋ ಫೈನಾನ್ಸ್‌ ಹಾವಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಉನ್ನತ ಮಟ್ಟದ ಸಭೆಯಲ್ಲಿ ಏನೇನು ಚರ್ಚೆಯಾಯ್ತ? ಇಲ್ಲಿದೆ ಮಾಹಿತಿ
ಸಿಎಂ ಸಿದ್ದರಾಮಯ್ಯ
Anil Kalkere
| Updated By: Ganapathi Sharma|

Updated on:Jan 25, 2025 | 3:21 PM

Share

ಬೆಂಗಳೂರು, ಜನವರಿ 25: ಸಾಲ ವಸೂಲಾತಿಗೆ ರೌಡಿಶೀಟರ್​​​ಗಳು, ಗೂಂಡಾಗಳನ್ನು ಬಳಸಲೇಬಾರದು. ಸಾಲ ವಸೂಲಾತಿ ಜವಾಬ್ದಾರಿಯನ್ನು ಫೈನಾನ್ಸ್​ಗಳು ಔಟ್​​ಸೋರ್ಸ್ ಕೊಡಬಾರದು. ಹಾಗೆ ಮಾಡಿದ್ದೇ ಆದರೆ ಅಂಥವರ ವಿರುದ್ಧ ಕೇಸು ದಾಖಲಿಸಿ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆಂದು ಸಿಎಂ ಸಿದ್ದರಾಮಯ್ಯ ಶನಿವಾರ ಖಡಕ್ ಸಂದೇಶ ರವಾನಿಸಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಹಾಗೂ ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಕ್ರೋಫೈನಾನ್ಸ್ ಅಸೋಸಿಯೇಷನ್ ಅಭಿಪ್ರಾಯ ಪಡೆದಿದ್ದೇನೆ. ಆರ್​​​ಬಿಐ ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳಿದ್ದೇನೆ. ಯಾರಿಗೂ ಸಾಲ ಕೊಡಬೇಡಿ ಎಂದು ನಾವು ಹೇಳುವುದಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಲೇಬಾರದು. ಆರ್​​ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಂಜೆ 5 ರ ನಂತರ ಸಾಲ ವಸೂಲಾತಿಗೆ ಹೋಗಬಾರದು: ಸಿಎಂ

ಸಾಲ ವಸೂಲಾತಿ ವೇಳೆ ಆರ್​ಬಿಐ ನಿಯಮದಂತೆ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ನಂತರ ಸಾಲ ವಸೂಲಾತಿಗೆ ಹೋಗಬಾರದು. ಮೈಕ್ರೋ ಫೈನಾನ್ಸ್, ಗಿರವಿ ಅಂಗಡಿಯವರು ಕಾನೂನು ಪಾಲಿಸಬೇಕು. ಕಾನೂನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳುತ್ತೇವೆ. ಇಂದು ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನು: ಸಿಎಂ

ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಕಾನೂನು ತರುತ್ತೇವೆ. ಕಾನೂನು ಇಲಾಖೆ, ಗೃಹ ಇಲಾಖೆ, ಕಂದಾಯ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು. ನೆರೆ ರಾಜ್ಯಗಳಲ್ಲಿರುವ ಕಾನೂನು ಪರಿಶೀಲಿಸಿ ಹೊಸ ಕಾನೂನು ಜಾರಿಗೆ ತರುತ್ತೇವೆ. ಸುಗ್ರೀವಾಜ್ಞೆ ಮೂಲಕ ಕೂಡಲೇ ಹೊಸ ಕಾನೂನನ್ನು ತರುತ್ತೇವೆ. ಒಂದು ವೇಳೆ ಸಾಲಗಾರರಿಗೆ ಕಿರುಕುಳ ನೀಡಿದರೆ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ: ಸಿಎಂ

ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್​ಬಿಐ ಅಡಿಯಲ್ಲಿ ಬರುತ್ತವೆ. ಆರ್​ಬಿಐ ನಿಯಮದಂತೆ ಶೇ 17.07ಕ್ಕಿಂತ ಹೆಚ್ಚು ಬಡ್ಡಿ ಪಡೆಯುವಂತಿಲ್ಲ. ಯಾವುದೇ ಸಾಲಗಾರರಿಗೆ 3 ಬಾರಿಗಿಂತ ಹೆಚ್ಚು ಸಾಲ ಕೊಡುವಂತಿಲ್ಲ. ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್​ಬಿಐ ನಿಯಮಕ್ಕಿಂತ ಹೆಚ್ಚು, ಅಂದರೆ, ಸುಮಾರು ಶೇ 28, 29 ರಷ್ಟು ಬಡ್ಡಿ ವಸೂಲಿ ಮಾಡುತ್ತಿರುವ ಬಗ್ಗೆ ಮಾಹಿತಿ ಇದೆ. ಇದರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಾಹಿತಿ ನೀಡುತ್ತೇವೆ. ಅಧಿಕ ಬಡ್ಡಿ ವಸೂಲಿ ಮಾಡ್ತಿರುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸಂಜೆಯೊಳಗೆ ಆರೋಪಿಗಳ ಬಂಧನ: ಡಿಸಿಎಂ ಡಿಕೆ ಶಿವಕುಮಾರ್ ಭರವಸೆ

ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಕಿರುಕುಳ ತಪ್ಪಿಸಲು ಕ್ರಮ ಕೈಗೊಳ್ಳುತ್ತೇವೆ. ರಾಜ್ಯಾದ್ಯಂತ ದಾಖಲಾಗಿರುವ ಕೇಸ್​ಗಳ ಬಗ್ಗೆ ಕೂಡಲೇ ಕ್ರಮಕ್ಕೆ ಸೂಚನೆ ನೀಡಿದ್ದೇವೆ. ಸಂಜೆಯೊಳಗೆ ಆರೋಪಿಗಳನ್ನು ಬಂಧಿಸಲು ಸೂಚಿಸಿದ್ದೇವೆ. ಸಾಲಗಾರರಿಗೆ ಕಿರುಕುಳ ಕೊಟ್ಟವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇವೆ. ಸಭೆಯಲ್ಲಿ ಭಾಗಿಯಾಗಿದ್ದ ಡಿಜಿ & ಐಜಿಪಿಗೆ ಸೂಚನೆ ನೀಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಹೆಚ್ಚಾಗಿದ್ದು, ಇದರ ಪರಿಣಾಮ ಕೆಲವು ಮಂದಿ ಆತ್ಮಹತ್ಯೆಗೆ ಶರಣಾಗಿದ್ದರೆ ಇನ್ನು ಕೆಲವರು ಊರು ಬಿಟ್ಟು ಗುಳೇ ಹೋಗುವಂತಾಗಿದೆ. ಚಿಕ್ಕಮಗಳೂರು, ರಾಮನಗರ, ರಾಯಚೂರು, ಬೆಳಗಾವಿ, ಮಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮೈಕ್ರೋ ಫೈನಾನ್ಸ್‌ ದೌರ್ಜನ್ಯ ಹೆಚ್ಚಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಜತೆಗೆ ಮೈಕ್ರೋಫೈನಾನ್ಸ್ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನೂ ನೀಡಲಾಗಿದೆ.

ಸಭೆಯಲ್ಲಿ ಯಾರೆಲ್ಲ ಭಾಗವಹಿಸಿದ್ದರು?

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ. ಜಿ ಪರಮೇಶ್ವರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕಾನೂನು ಸಚಿವ ಹೆಚ್​ಕೆ ಪಾಟೀಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸಭೆಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಮಿತಿ ಮೀರಿದ ಮೈಕ್ರೋ ಫೈನಾನ್ಸ್ ಕಿರುಕುಳ: ಊರು ಬಿಟ್ಟ ಜನ, ಮಹಿಳೆಯರ ಕಣ್ಣೀರು, ಮೂವರು ಬಲಿ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:01 pm, Sat, 25 January 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!