ಹಾಲಪ್ಪ ಆಚಾರ್ ಮಾತನಾಡಿರುವ ವಿಡಿಯೋ ಇಲ್ಲಿದೆ:
ಕಲ್ಲಿದ್ದಲು ಕೊರತೆ ಸಂಬಂಧ ಕೇಂದ್ರದೊಂದಿಗೆ ಚರ್ಚೆ ನಡೆಸಿದ್ದೇವೆ; ಶೀಘ್ರದಲ್ಲೇ ಸಮಸ್ಯೆ ಪರಿಹಾರವಾಗಲಿದೆ; ಸಿಎಂ ಬೊಮ್ಮಾಯಿ:
ಬೆಂಗಳೂರು: ಕಲ್ಲಿದ್ದಲು ಕೊರತೆ ಸಂಬಂಧ ಕೇಂದ್ರದ ಜೊತೆ ಚರ್ಚೆ ನಡೆಸಿದ್ದೇವೆ. ರಾಜ್ಯಕ್ಕೆ ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಿದ್ದೇವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎರಡು- ಒಡಿಶಾದ ಮಹಾನಂದಿ, ಚಂದ್ರಾಪುರ ಘಟಕ- ಕಲ್ಲಿದ್ದಲು ಗಣಿ ಹಂಚಿದೆ. ಈ 2 ಘಟಕಗಳಿಂದ ಕಲ್ಲಿದ್ದಲು ಪೂರೈಕೆಯಾದರೆ ಸಮಸ್ಯೆ ಇತ್ಯರ್ಥವಾಗುತ್ತದೆ. ಆಗನಾವು ಇನ್ನೊಬ್ಬರ ಮೇಲೆ ಅವಲಂಬನೆ ಆಗಬೇಕಾಗಿರುವುದಿಲ್ಲ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರದಿಂದ ಬೇಕಾದಷ್ಟು ಕಲ್ಲಿದ್ದಲು ತರಿಸಿಕೊಳ್ಳಿ; ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ:
ಮಂಡ್ಯ: ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಯಾಗಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ಧಾರೆ. ಕೇಂದ್ರದಿಂದ ಬೇಕಾದಷ್ಟು ಕಲ್ಲಿದ್ದಲು ತರಿಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಕಲ್ಲಿದ್ದಲು ಕೊರತೆಯಿಂದ ಉತ್ಪಾದನೆ ನಿಲ್ಲಿಸಬಾರದು. ಉತ್ಪಾದನೆ ನಿಲ್ಲಿಸಿದರೆ ರೈತರು, ಗ್ರಾಹಕರಿಗೆ ತೊಂದರೆಯಾಗಲಿದೆ ಎಂದು ಅವರು ನುಡಿದಿದ್ದಾರೆ.
ಇದನ್ನೂ ಓದಿ:
Coal Crisis: ಕಲ್ಲಿದ್ದಲು ಅಭಾವದಿಂದ ವಿದ್ಯುತ್ ಉತ್ಪಾದನೆ ಕುಸಿತ; ಅರ್ಧ ರಾಜ್ಯಕ್ಕೆ ಕತ್ತಲಿನ ಭೀತಿ
Coal Shortage: ವಿದ್ಯುತ್ ಉತ್ಪಾದನೆ ಘಟಕಗಳಲ್ಲಿ ಕಲ್ಲಿದ್ದಲು ಕೊರತೆಗೆ ಕಾರಣ ತೆರೆದಿಟ್ಟ ವಿದ್ಯುತ್ ಸಚಿವಾಲಯ
Coal Crisis: ಭಾರತದಲ್ಲಿ ಕಲ್ಲಿದ್ದಲು ಕೊರತೆಗೆ ಕಾರಣವೇನು?; ಪೂರ್ತಿ ಮಾಹಿತಿ ಇಲ್ಲಿದೆ