KN Rajanna: ಸಚಿವ ಕೆಎನ್ ರಾಜಣ್ಣ ಚುನಾವಣೆ ರಾಜಕಾರಣಕ್ಕೆ ಗುಡ್​ ಬೈ

ಕೆಎನ್ ರಾಜಣ್ಣ ಚುನಾವಣಾ ರಾಜಕೀಯ ನಿವೃತ್ತಿ: ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ವಯಸ್ಸಿನ ಕಾರಣ ಮುಂದಿನ ಚುನಾವಣೆಯಲ್ಲಿ ಕಣಕ್ಕಿಳಿಯುವುದಿಲ್ಲ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಅವರು ಹೇಳಿದ್ದಾರೆ. ಆದರೆ, ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುವುದಾಗಿ ಅವರು ತಿಳಿಸಿದ್ದಾರೆ.

KN Rajanna: ಸಚಿವ ಕೆಎನ್ ರಾಜಣ್ಣ ಚುನಾವಣೆ ರಾಜಕಾರಣಕ್ಕೆ ಗುಡ್​ ಬೈ
ಕೆಎನ್ ರಾಜಣ್ಣ
Edited By:

Updated on: May 20, 2025 | 11:57 AM

ಮೈಸೂರು, ಮೇ 20: ಮುಂದಿನ ಚುನಾವಣೆ ವೇಳೆಗೆ 78 ವರ್ಷ ವಯಸ್ಸಾಗುತ್ತದೆ. ಹೀಗಾಗಿ ಚುನಾವಣೆ ರಾಜಕಾರಣಕ್ಕೆ ಗುಡ್​ ಬೈ ಹೇಳುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ಹೇಳಿದರು. ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ. ಒಂದು ವೇಳೆ ಸ್ಪರ್ಧಿಸಿ ಗೆದ್ದರೂ ಜನರ ಸೇವೆ ಮಾಡುವುದು ಕಷ್ಟ. ಆರೋಗ್ಯದ ದೃಷ್ಟಿಯಿಂದ ಅದು ಕಷ್ಟಸಾಧ್ಯ. ಹಾಗಾಗಿ ಚುನಾವಣೆಗೆ ಸ್ಪರ್ಧಿಸಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದರು. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ರಾಜಣ್ಣ ನಡುವಣ ಮುಸುಕಿನ ಗುದ್ದಾಟದ ಕೆಲವೇ ದಿನಗಳ ನಂತರ ಸಹಕಾರ ಸಚಿವರು ಇಂಥದ್ದೊಂದು ನಿರ್ಧಾರ ಪ್ರಕಟಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಾಧನಾ ಸಮಾವೇಶವನ್ನು ಬಿಜೆಪಿ ನಾಯಕರು ಟೀಕಿಸಿದ ಬಗ್ಗ ಪ್ರತಿಕ್ರಿಯಿಸಿದ ಅವರು, ವಿರೋಧ ಪಕ್ಷವಾಗಿ ಟೀಕೆ ಮಾಡಬೇಕೆಂದು ಅವರು ಟೀಕಿಸುತ್ತಾರೆ. ಬಿಜೆಪಿಗರ ಟೀಕೆಗಳಿಗೆ ಪ್ರತಿಕ್ರಿಯಿಸುವ ಅವಶ್ಯಕತೆ ಇಲ್ಲ ಎಂದರು.

ಮೈಸೂರು ಅಂದರೆ ನನಗೆ ಬಹಳ ಇಷ್ಟ. ಮೈಸೂರು ವಿವಿಯಲ್ಲೇ ನಾನು ವ್ಯಾಸಂಗ ಮಾಡಿದ್ದೇನೆ. ಇಲ್ಲೇ ಗಣಿತದಲ್ಲಿ ಮಾಸ್ಟರ್ಸ್ ಮಾಡಿದ್ದೇನೆ. ಆಗ ವಿದ್ಯಾರ್ಥಿ ನಾಯಕನಾಗಿದ್ದೆ ಎಂದು ರಾಜಣ್ಣ ನೆನಪಿಸಿಕೊಂಡರು.

ಇದನ್ನೂ ಓದಿ
ಭಾರಿ ಮಳೆಗೆ ಕರ್ನಾಟಕದಲ್ಲಿ 4 ಸಾವು, ಬೆಂಗಳೂರಿನಲ್ಲಿ ಇನ್ನೂ 3 ದಿನ ಮಳೆ
ಕರ್ನಾಟಕದ 6 ಜಿಲ್ಲೆಗಳಿಗೆ ಮಳೆಯ ರೆಡ್ ಅಲರ್ಟ್
ರಾತ್ರಿ ಸುರಿದ ಮಳೆಯಿಂದ ನಡುಗಡ್ಡೆಯಾಗಿ ಮಾರ್ಪಟ್ಟಿರುವ ಸಾಯಿ ಲೇಔಟ್
ಲೂಟಿಕೋರರ ಬೆಂಗಳೂರು: ಮಳೆ ಅವಾಂತರ ಬೆನ್ನಲ್ಲೇ ಹೆಚ್​ಡಿಕೆ ಟೀಕೆ

ಮೈಸೂರಿನ ವಾತಾವರಣ ಅಹ್ಲಾದಕಾರವಾಗಿದೆ. ಇಲ್ಲಿನದ್ದು ಬಹಳ ಉತ್ತಮ ವಾತಾವರಣ. ಮೈಸೂರಿಗೆ ಅದರದ್ದೇ ಆದ ಗೌರವ ಹಾಗೂ ಇತಿಹಾಸ ಇದೆ. ಮೈಸೂರು ನನಗೆ ತುಂಬಾ ಇಷ್ಟವಾದ ನಗರ ಎಂದು ರಾಜಣ್ಣ ಹೇಳಿದರು.

ಡಿಕೆ ಶಿವಕುಮಾರ್​ ಬಗ್ಗೆ ರಾಜಣ್ಣ ಹೊಗಳಿಗೆ ಮಾತು

ಬೆಂಗಳೂರು ಮಳೆ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಚೆನ್ನಾಗಿ ನಿಭಾಯಿಸುತ್ತಿದ್ದಾರೆ. ಅವರು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ರಾಜಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಂಗಳೂರು ನಗರದಲ್ಲಿ ಭಾರಿ ಮಳೆಯಿಂದ ಹಲವೆಡೆ ಹಾನಿಯಾಗಿರುವುದು ನಮ್ಮ ಸ್ವಯಂಕೃತ ಅಪರಾಧದ ಪ್ರತಿಫಲ. ಕೆರೆ, ಕಾಲುವೆ, ಚರಂಡಿ ಒತ್ತುವರಿಯಿಂದ ಈ ಪರಿಸ್ಥಿತಿ ಬಂದಿದೆ. ನೀರು ಹೇಗೆ ಹರಿಯಬೇಕು ಎಂದು ನಾವು ಹೇಳಲು ಸಾಧ್ಯವಿಲ್ಲ. ಅದಕ್ಕೆ ಅದರ ದಾರಿ ಗೊತ್ತಿದೆ ಎಂದು ರಾಜಣ್ಣ ಹೇಳಿದರು.

ಇದನ್ನೂ ಓದಿ: ಬೆಂಗಳೂರಿನ 200 ಪ್ರದೇಶಗಳಿಗೆ ಪ್ರವಾಹ ಭೀತಿ: ತಿಂಗಳ ಹಿಂದೆಯೇ ಎಚ್ಚರಿಕೆ ನೀಡಿದ್ದ ವಿಪತ್ತು ನಿರ್ವಹಣಾ ಇಲಾಖೆ

ಚರಂಡಿಗಳು, ಕಾಲುವೆಗಳನ್ನು ಮುಚ್ಚಿದ ಪರಿಣಾಮ ಈ ರೀತಿ ಅಗಿದೆ. ಸಾಧನಾ ಸಮಾವೇಶ ಮುಗಿದ ನಂತರ ಎಲ್ಲರೂ ಸೇರಿ ಪರಿಶೀಲನೆ ನಡೆಸಲಿದ್ದೇವೆ. ಈ ಬಗ್ಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು. ರಾಜಕಾಲುವೆ ಒತ್ತುವರಿ ತೆರವು ಮಾಡಲಾಗುವುದು. ಮಳೆ ಬಂದಾಗ ಮಾತ್ರವಲ್ಲ ಎಲ್ಲಾ ಸಮಯದಲ್ಲೂ ಒತ್ತುವರಿ ತೆರವು ಮಾಡುತ್ತೇವೆ ಎಂದು ಅವರು ಹೇಳಿದರು.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us