AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಶಿಫಾರಸು ಮಾಡುತ್ತೇವೆ; ಕೋಟ ಶ್ರೀನಿವಾಸ್ ಪೂಜಾರಿ ಭರವಸೆ

73 ಜಾತಿಗಳನ್ನು ಗುರುತಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ದೇವರಾಜು‌ ಅರಸು ಪೀಠಕ್ಕೆ ಅನುದಾನ ಕೊಡುತ್ತೇವೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

73 ಜಾತಿಗಳನ್ನು ಗುರುತಿಸಿ ಮೀಸಲಾತಿಗೆ ಶಿಫಾರಸು ಮಾಡುತ್ತೇವೆ; ಕೋಟ ಶ್ರೀನಿವಾಸ್ ಪೂಜಾರಿ ಭರವಸೆ
ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ
TV9 Web
| Edited By: |

Updated on: Jan 06, 2022 | 4:43 PM

Share

ಬೆಂಗಳೂರು: 73 ಜಾತಿಗಳನ್ನು ಗುರುತಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ತೀರ್ಮಾನಿಸುತ್ತದೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯಿಂದ ಸನ್ಮಾನ ಮಾಡಲಾಗಿದೆ. ಈ ವೇಳೆ ಮಾತನಾಡಿದ ಅವರು, ಹಿಂದುಳಿದ ಆಯೋಗದ ಅಧ್ಯಕ್ಷರು ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ಹಲವು ಸಮುದಾಯದ ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ವಿಚಾರವಾಗಿ 15 ದಿನದಲ್ಲಿ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ.

73 ಜಾತಿಗಳನ್ನು ಗುರುತಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ದೇವರಾಜು‌ ಅರಸು ಪೀಠಕ್ಕೆ ಅನುದಾನ ಕೊಡುತ್ತೇವೆ. ಅತಿ ಹಿಂದುಳಿದ ವೇದಿಕೆಗಳ ಪ್ರಸ್ತಾಪ ನನಗೆ ಸಿಕ್ಕಿದೆ. ಬಲಾಢ್ಯ ಸಮುದಾಯಕ್ಕೆ ಅಹವಾಲನ್ನು ಕೊಡಲು ಅವಕಾಶವಿದೆ. ಯಾರಿಗೂ ಅನ್ಯಾಯವಾಗದಂತೆ ಸರ್ಕಾರ ತೀರ್ಮಾನ ಮಾಡುತ್ತದೆ. ಹಿಂದುಳಿದ ಆಯೋಗದ ಅಧ್ಯಕ್ಷರು ಹಲವು ಸಮುದಾಯದ ಪ್ರಸ್ತಾಪವನ್ನು ಪರಿಶೀಲಿಸುತ್ತಿದ್ದಾರೆ. ಹಲವು ಸಮುದಾಯದ ಬದುಕು ದಾರುಣವಾಗಿದೆ. ಸಮಾಜದ ಕಟ್ಟಕಡೆಯ ಸಮುದಾಯದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ವಿಚಾರವಾಗಿ 15 ದಿನದಲ್ಲಿ ಸಭೆ ಕರೆದು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.

ಶಾಸಕರ ಭವನದಲ್ಲಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್, ವಿಧಾನ ಪರಿಷತ್ ಸದಸ್ಯ ಪಿ.ಆರ್ ರಮೇಶ್ ಹಾಗೂ ಮಾಜಿ ಶಾಸಕ ನೆ.ಲ ನರೇಂದ್ರ ಬಾಬು ಸೇರಿದಂತೆ ಹಿಂದುಳಿದ ನಾಯಕರಿಂದ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರನ್ನು ಸನ್ಮಾನ ಮಾಡಲಾಗಿದೆ. ಈ ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ 2ಎಗೆ ಸೇರಿಸಬಾರದೆಂದು ಒಕ್ಕೂರಲಿನಿಂದ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಇಂದು ಸಂಜೆ ಸಚಿವ ಸಂಪುಟ ಪಟ್ಟಿ ಅಂತಿಮ; ಲಕ್ಷ್ಮಣ ಸವದಿ, ಶಶಿಕಲಾ ಜೊಲ್ಲೆ, ಕೋಟ ಶ್ರೀನಿವಾಸ್ ಪೂಜಾರಿಗೆ ನಿರಾಸೆ?

‘ಒಂದು ರೂಪಾಯಿಯೂ ಹಂಚದ ಏಕೈಕ ಆಭ್ಯರ್ಥಿ’ ಎಂಬ ಹೆಗ್ಗಳಿಕೆಯ ಕೋಟ ಶ್ರೀನಿವಾಸ ಪೂಜಾರಿಗೆ ಭರ್ಜರಿ ಜಯ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು