AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ

ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ
ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇ
ಗಣಪತಿ ಶರ್ಮಾ
|

Updated on: Jun 26, 2023 | 7:21 PM

Share

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇನಲ್ಲಿ (Bengaluru-Mysore Expressway) ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ತಾಂತ್ರಿಕ ತಂಡ ರಚನೆ ಮಾಡುತ್ತೇವೆ. ಆ ತಂಡ ನೀಡಿದ ವರದಿಯ ಆಧಾರದಲ್ಲಿ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ವಿಧಾನಸೌಧದಲ್ಲಿ ಹೇಳಿದ್ದಾರೆ. ಎಕ್ಸ್​​​ಪ್ರೆಸ್​ ವೇಯನ್ನು ಯಾವುದೋ ಹಳ್ಳಿ ರಸ್ತೆಯಂತೆ ಮಾಡಿ ಬಿಟ್ಟಿದ್ದಾರೆ. ಇದಕ್ಕಿಂತ ಬೆಂಗಳೂರು-ಮಂಗಳೂರು ಹೆದ್ದಾರಿಯೇ ಉತ್ತಮವಾಗಿದೆ. ಪಾಪ, ಸಂಸದ ಪ್ರತಾಪ್ ಸಿಂಹಗೆ ಇದೆಲ್ಲ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರರು ಯಾರೋ ಸಂಸದರಿಗೆ ಬೇಕಾದವರು ಎಂಬ ಮಾತುಗಳಿವೆ. ಅವೆಲ್ಲವೂ ನಮಗೆ ಸದ್ಯಕ್ಕೆ ಬೇಡ. ಎಕ್ಸ್​​ಪ್ರೆಸ್​ ವೇಯಲ್ಲಿ ಲೋಪದೋಷಗಳಿವೆ. ಚುನಾವಣೆಗೂ ಮುನ್ನ ಪಕ್ಷದ ಸಲುವಾಗಿ ಹೈವೇ ಉದ್ಘಾಟನೆ ಮಾಡಿದ್ದಾರೆ. ಈಗ ಹೆದ್ದಾರಿಯಲ್ಲಿ 46 ಅಪಘಾತ ಸಂಭವಿಸಿ 45 ಜನರು ಮೃತಪಟ್ಟಿದ್ದಾರೆ. ಎಕ್ಸ್​​ಪ್ರೆಸ್​ ವೇ ಆದ ಮೇಲೆ ಅಪಘಾತಗಳು ಕಡಿಮೆಯಾಗಬೇಕಿತ್ತು. ಆದರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿವೆ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯೇ ದೊಡ್ಡ ಸಮಸ್ಯೆ ಆಗಿದೆ. ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಎಕ್ಸ್​ಪ್ರೆಸ್​​ ವೇಯಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಸಂಭವಿಸಿವೆ. ಈ ವಿಚಾರವಾಗಿ ಉಭಯ ಜಿಲ್ಲಾಡಳಿತಗಳು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿಯನ್ನೂ ಸಲ್ಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ