AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ

ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ
ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇ
ಗಣಪತಿ ಶರ್ಮಾ
|

Updated on: Jun 26, 2023 | 7:21 PM

Share

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇನಲ್ಲಿ (Bengaluru-Mysore Expressway) ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ತಾಂತ್ರಿಕ ತಂಡ ರಚನೆ ಮಾಡುತ್ತೇವೆ. ಆ ತಂಡ ನೀಡಿದ ವರದಿಯ ಆಧಾರದಲ್ಲಿ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ವಿಧಾನಸೌಧದಲ್ಲಿ ಹೇಳಿದ್ದಾರೆ. ಎಕ್ಸ್​​​ಪ್ರೆಸ್​ ವೇಯನ್ನು ಯಾವುದೋ ಹಳ್ಳಿ ರಸ್ತೆಯಂತೆ ಮಾಡಿ ಬಿಟ್ಟಿದ್ದಾರೆ. ಇದಕ್ಕಿಂತ ಬೆಂಗಳೂರು-ಮಂಗಳೂರು ಹೆದ್ದಾರಿಯೇ ಉತ್ತಮವಾಗಿದೆ. ಪಾಪ, ಸಂಸದ ಪ್ರತಾಪ್ ಸಿಂಹಗೆ ಇದೆಲ್ಲ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರರು ಯಾರೋ ಸಂಸದರಿಗೆ ಬೇಕಾದವರು ಎಂಬ ಮಾತುಗಳಿವೆ. ಅವೆಲ್ಲವೂ ನಮಗೆ ಸದ್ಯಕ್ಕೆ ಬೇಡ. ಎಕ್ಸ್​​ಪ್ರೆಸ್​ ವೇಯಲ್ಲಿ ಲೋಪದೋಷಗಳಿವೆ. ಚುನಾವಣೆಗೂ ಮುನ್ನ ಪಕ್ಷದ ಸಲುವಾಗಿ ಹೈವೇ ಉದ್ಘಾಟನೆ ಮಾಡಿದ್ದಾರೆ. ಈಗ ಹೆದ್ದಾರಿಯಲ್ಲಿ 46 ಅಪಘಾತ ಸಂಭವಿಸಿ 45 ಜನರು ಮೃತಪಟ್ಟಿದ್ದಾರೆ. ಎಕ್ಸ್​​ಪ್ರೆಸ್​ ವೇ ಆದ ಮೇಲೆ ಅಪಘಾತಗಳು ಕಡಿಮೆಯಾಗಬೇಕಿತ್ತು. ಆದರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿವೆ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯೇ ದೊಡ್ಡ ಸಮಸ್ಯೆ ಆಗಿದೆ. ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಎಕ್ಸ್​ಪ್ರೆಸ್​​ ವೇಯಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಸಂಭವಿಸಿವೆ. ಈ ವಿಚಾರವಾಗಿ ಉಭಯ ಜಿಲ್ಲಾಡಳಿತಗಳು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿಯನ್ನೂ ಸಲ್ಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ