AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ

ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ
ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇ
ಗಣಪತಿ ಶರ್ಮಾ
|

Updated on: Jun 26, 2023 | 7:21 PM

Share

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇನಲ್ಲಿ (Bengaluru-Mysore Expressway) ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ತಾಂತ್ರಿಕ ತಂಡ ರಚನೆ ಮಾಡುತ್ತೇವೆ. ಆ ತಂಡ ನೀಡಿದ ವರದಿಯ ಆಧಾರದಲ್ಲಿ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ವಿಧಾನಸೌಧದಲ್ಲಿ ಹೇಳಿದ್ದಾರೆ. ಎಕ್ಸ್​​​ಪ್ರೆಸ್​ ವೇಯನ್ನು ಯಾವುದೋ ಹಳ್ಳಿ ರಸ್ತೆಯಂತೆ ಮಾಡಿ ಬಿಟ್ಟಿದ್ದಾರೆ. ಇದಕ್ಕಿಂತ ಬೆಂಗಳೂರು-ಮಂಗಳೂರು ಹೆದ್ದಾರಿಯೇ ಉತ್ತಮವಾಗಿದೆ. ಪಾಪ, ಸಂಸದ ಪ್ರತಾಪ್ ಸಿಂಹಗೆ ಇದೆಲ್ಲ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರರು ಯಾರೋ ಸಂಸದರಿಗೆ ಬೇಕಾದವರು ಎಂಬ ಮಾತುಗಳಿವೆ. ಅವೆಲ್ಲವೂ ನಮಗೆ ಸದ್ಯಕ್ಕೆ ಬೇಡ. ಎಕ್ಸ್​​ಪ್ರೆಸ್​ ವೇಯಲ್ಲಿ ಲೋಪದೋಷಗಳಿವೆ. ಚುನಾವಣೆಗೂ ಮುನ್ನ ಪಕ್ಷದ ಸಲುವಾಗಿ ಹೈವೇ ಉದ್ಘಾಟನೆ ಮಾಡಿದ್ದಾರೆ. ಈಗ ಹೆದ್ದಾರಿಯಲ್ಲಿ 46 ಅಪಘಾತ ಸಂಭವಿಸಿ 45 ಜನರು ಮೃತಪಟ್ಟಿದ್ದಾರೆ. ಎಕ್ಸ್​​ಪ್ರೆಸ್​ ವೇ ಆದ ಮೇಲೆ ಅಪಘಾತಗಳು ಕಡಿಮೆಯಾಗಬೇಕಿತ್ತು. ಆದರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿವೆ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯೇ ದೊಡ್ಡ ಸಮಸ್ಯೆ ಆಗಿದೆ. ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಎಕ್ಸ್​ಪ್ರೆಸ್​​ ವೇಯಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಸಂಭವಿಸಿವೆ. ಈ ವಿಚಾರವಾಗಿ ಉಭಯ ಜಿಲ್ಲಾಡಳಿತಗಳು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿಯನ್ನೂ ಸಲ್ಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ನನಗೆ ಯಶಸ್ವಿ ವ್ಯಕ್ತಿಗಳೆಂದರೆ ಇಷ್ಟವಿಲ್ಲ; ಅಮೆರಿಕ ಅಧ್ಯಕ್ಷ ಟ್ರಂಪ್
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಇರಾನ್‌ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಟ್ರಂಪ್ ಶಾಕಿಂಗ್ ಹೇಳಿಕೆ
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದಾನೆ; ಯುವತಿಯ ಹೇಳಿಕೆ ವೈರಲ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಬಿಜೆಪಿ ಕಚೇರಿ ಮುಂದೆನೇ ಬಂದು ತೊಡೆತಟ್ಟಿದ್ದೇವೆ: ಗುಡುಗಿದ ಪ್ರದೀಪ್ ಈಶ್ವರ್
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!