Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ

ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ಬೆಂಗಳೂರು ಮೈಸೂರು ಎಕ್ಸ್​​ಪ್ರೆಸ್ ವೇ ಅವೈಜ್ಞಾನಿಕ ಕಾಮಗಾರಿ ಪತ್ತೆಗೆ ತಂಡ ರಚನೆ; ಸಚಿವ ಚಲುವರಾಯಸ್ವಾಮಿ
ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇ
Follow us
Ganapathi Sharma
|

Updated on: Jun 26, 2023 | 7:21 PM

ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್​​ಪ್ರೆಸ್​​ ವೇನಲ್ಲಿ (Bengaluru-Mysore Expressway) ಅವೈಜ್ಞಾನಿಕ ಕಾಮಗಾರಿ ನಡೆದಿದೆ. ಈ ಬಗ್ಗೆ ಪರಿಶೀಲನೆ ನಡೆಸಲು ತಾಂತ್ರಿಕ ತಂಡ ರಚನೆ ಮಾಡುತ್ತೇವೆ. ಆ ತಂಡ ನೀಡಿದ ವರದಿಯ ಆಧಾರದಲ್ಲಿ ಸಮಸ್ಯೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ (N Chaluvaraya Swamy) ವಿಧಾನಸೌಧದಲ್ಲಿ ಹೇಳಿದ್ದಾರೆ. ಎಕ್ಸ್​​​ಪ್ರೆಸ್​ ವೇಯನ್ನು ಯಾವುದೋ ಹಳ್ಳಿ ರಸ್ತೆಯಂತೆ ಮಾಡಿ ಬಿಟ್ಟಿದ್ದಾರೆ. ಇದಕ್ಕಿಂತ ಬೆಂಗಳೂರು-ಮಂಗಳೂರು ಹೆದ್ದಾರಿಯೇ ಉತ್ತಮವಾಗಿದೆ. ಪಾಪ, ಸಂಸದ ಪ್ರತಾಪ್ ಸಿಂಹಗೆ ಇದೆಲ್ಲ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಗುತ್ತಿಗೆದಾರರು ಯಾರೋ ಸಂಸದರಿಗೆ ಬೇಕಾದವರು ಎಂಬ ಮಾತುಗಳಿವೆ. ಅವೆಲ್ಲವೂ ನಮಗೆ ಸದ್ಯಕ್ಕೆ ಬೇಡ. ಎಕ್ಸ್​​ಪ್ರೆಸ್​ ವೇಯಲ್ಲಿ ಲೋಪದೋಷಗಳಿವೆ. ಚುನಾವಣೆಗೂ ಮುನ್ನ ಪಕ್ಷದ ಸಲುವಾಗಿ ಹೈವೇ ಉದ್ಘಾಟನೆ ಮಾಡಿದ್ದಾರೆ. ಈಗ ಹೆದ್ದಾರಿಯಲ್ಲಿ 46 ಅಪಘಾತ ಸಂಭವಿಸಿ 45 ಜನರು ಮೃತಪಟ್ಟಿದ್ದಾರೆ. ಎಕ್ಸ್​​ಪ್ರೆಸ್​ ವೇ ಆದ ಮೇಲೆ ಅಪಘಾತಗಳು ಕಡಿಮೆಯಾಗಬೇಕಿತ್ತು. ಆದರೆ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚಾಗಿವೆ ಎಂದು ಚಲುವರಾಯಸ್ವಾಮಿ ಆರೋಪಿಸಿದ್ದಾರೆ.

ಭೂಸ್ವಾಧೀನ ಪ್ರಕ್ರಿಯೆಯೇ ದೊಡ್ಡ ಸಮಸ್ಯೆ ಆಗಿದೆ. ಹೆದ್ದಾರಿಯಲ್ಲಿ ಆಂಬುಲೆನ್ಸ್ ಇಲ್ಲ, ಕ್ರೇನ್​ ಇಲ್ಲ, ಟ್ರಾಮಾ ಸೆಂಟರ್​ ಇಲ್ಲ, ಒಟ್ಟಾರೆಯಾಗಿ ದೋಷವಿದೆ. ಹೆದ್ದಾರಿ ಲೋಪ ಸರಿಪಡಿಸುವ ತನಕ ಟೋಲ್ ಕಲೆಕ್ಟ್​​ ಮಾಡಬಾರದು. ಶ್ರೀರಂಗಪಟ್ಟಣದಲ್ಲಿ ಟೋಲ್ ಕಲೆಕ್ಟ್ ಮಾಡಬಾರದೆಂದು ಸೂಚಿಸಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru-Mysore Expressway: ಅಪಘಾತಕ್ಕೆ ಕಾರಣಗಳ ಕುರಿತು ಎನ್​​ಹೆಚ್​ಎಐಗೆ ವರದಿ ಸಲ್ಲಿಸಿದ 2 ಜಿಲ್ಲಾಡಳಿತ

ಎಕ್ಸ್​ಪ್ರೆಸ್​​ ವೇಯಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಸಂಭವಿಸಿದ ಅಪಘಾತಗಳಲ್ಲಿ ನೂರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಹೆಚ್ಚಿನ ಅಪಘಾತಗಳು ರಾಮನಗರ ಮತ್ತು ಮಂಡ್ಯ ಜಿಲ್ಲಾಡಳಿತ ವ್ಯಾಪ್ತಿಯಲ್ಲಿ ಸಂಭವಿಸಿವೆ. ಈ ವಿಚಾರವಾಗಿ ಉಭಯ ಜಿಲ್ಲಾಡಳಿತಗಳು ಈಗಾಗಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರದಿಯನ್ನೂ ಸಲ್ಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಬಿಡದಿ ರೈಲ್ವೆ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ ಕರೆ
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಉತ್ತರ ಕರ್ನಾಟಕದ ಅನೇಕ ಭಾಗಗಳಲ್ಲಿ ನೀರಿನ ಸಮಸ್ಯೆ, ಎಲ್ಲಿ ಜನಪ್ರತಿನಿಧಿಗಳು?
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಗ್ಯಾಸ್​ ಸಿಲಿಂಡರ್​ ತುಂಬಿದ್ದ ಲಾರಿ ಬ್ರೇಕ್​ ಫೇಲ್​ ಆಗಿ ಮರಕ್ಕೆ ಡಿಕ್ಕಿ
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!
ಫೆಲೈನ್ ಪ್ಯಾನ್​ಲ್ಯೂಕೊಪೇನಿಯಾ ವೈರಸ್ ಸೋಂಕು ಬೆಕ್ಕುಗಳಲ್ಲಿ ಸಾಂಕ್ರಾಮಿಕ!