AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿ ಪಿ ಯೋಗೇಶ್ವರ್ ಆತಂಕದಲ್ಲಿದ್ದಾರೆ‘ : ತಿರುಗೇಟು ನೀಡಿದ ಕುಮಾರಸ್ವಾಮಿ

ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದರೆ 6 ತಿಂಗಳಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹೋಗುತ್ತದೆ. ಆಗ‌‌ ನಮ್ಮ ಸರ್ಕಾರ ಬರುತ್ತದೆಂದು ಸಮ್ಮಿಶ್ರ ಸರ್ಕಾರ ಬೀಳಿಸಿದರು. ಅದರ ಪ್ರತಿಫಲವನ್ನು ಈಗ ರಾಜ್ಯದ ಜನ ಅನುಭವಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

‘ಸಿ ಪಿ ಯೋಗೇಶ್ವರ್ ಆತಂಕದಲ್ಲಿದ್ದಾರೆ‘ : ತಿರುಗೇಟು ನೀಡಿದ ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ
guruganesh bhat
| Edited By: |

Updated on: Feb 26, 2021 | 8:16 PM

Share

ರಾಮನಗರ: ಸಿ.ಪಿ.ಯೋಗೇಶ್ವರ್ ಮಂತ್ರಿ ಆಗಿರುವ ಕಾರಣ ಏರುಧ್ವನಿಯಲ್ಲಿ ಮಾತನಾಡಿದ್ದಾನೆ. ಆತಂಕ, ಆಕ್ರೋಶ ಸಿ.ಪಿ.ಯೋಗೇಶ್ವರ್​ಗೆ ಇರುವುದೇ ಹೊರತೂ ನನಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್​ಗೆ ತಿರುಗೇಟು ನೀಡಿದರು. ಸಿ.ಪಿ.ಯೋಗೇಶ್ವರ್ ಕಂಡಕಂಡವರ ಹಣ ಲೂಟಿ ಹೊಡೆದು, ‘ಅವರು ಮಂತ್ರಿಯಾಗಿದ್ದಾರೆ. ಅವರ ಬಳಿ ಕೆಲಸ ಮಾಡುವುದನ್ನು ಕಲಿಯಬೇಕಿಲ್ಲ. ಅವರಂತಹ ಬೇಕಾದಷ್ಟು ಜನರನ್ನು ಮಂತ್ರಿ ಮಾಡಿದ್ದೇನೆ. ಜೆಡಿಎಸ್​ ಕಾರ್ಯಕರ್ತರು ನನ್ನ ಮೇಲಿನ ಪ್ರೀತಿಯಿಂದ ಬರುತ್ತಾರೆ. ಸಿ.ಪಿ. ಯೋಗೇಶ್ವರ್‌ಗಿಂತ ಮುಂಚೆಯೇ ನನಗೆ ಚನ್ನಪಟ್ಟಣದ ಪರಿಚಯವಿದೆ ಎಂದು ಅವರು ಸಿ.ಪಿ.ಯೋಗೇಶ್ವರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಿನ್ನೆ ನಡೆದ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಸಂದರ್ಭದಲ್ಲಿ ಸಿ.ಪಿ.ಯೋಗೇಶ್ವರ್ ಏಕವಚನದಲ್ಲೇ HDK ವಿರುದ್ಧ ವಾಗ್ದಾಳಿ ನಡೆಸಿದ್ದರು. ಅವರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಆಯ್ಕೆ ವಿಚಾರವನ್ನು ಪ್ರಸ್ತಾಪಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ರಾಜ್ಯದಲ್ಲಿ ಕಾಂಗ್ರೆಸ್​ JDS ಪಕ್ಷವನ್ನು ಮುಗಿಸಲು ಹೊರಟಿದೆ. ಕಾಂಗ್ರೆಸ್ ಪಕ್ಷದ ಹುನ್ನಾರಗಳ ಬಗ್ಗೆ ನನಗೆ ಗೊತ್ತಿದೆ. ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದರೆ 6 ತಿಂಗಳಲ್ಲಿ ಬಿ.ಎಸ್.ಯಡಿಯೂರಪ್ಪ ಸರ್ಕಾರ ಹೋಗುತ್ತದೆ. ಆಗ‌‌ ನಮ್ಮ ಸರ್ಕಾರ ಬರುತ್ತದೆಂದು ಸಮ್ಮಿಶ್ರ ಸರ್ಕಾರ ಬೀಳಿಸಿದರು. ಅದರ ಪ್ರತಿಫಲವನ್ನು ಈಗ ರಾಜ್ಯದ ಜನ ಅನುಭವಿಸುತ್ತಿದ್ದಾರೆ ಎಂದು ಅವರು ಟೀಕಿಸಿದರು.

ತಾಯಿ ಚಾಮುಂಡೇಶ್ವರಿ ರಕ್ಷಣೆ ಕೊಟ್ಟಿದ್ದಾಳೆ

ಈ ಬಾರಿ ನಾವು ಯಾರ ಜತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಸಾಮರ್ಥ್ಯ ತೋರಿಸಲು ಮೈಸೂರು ಪಾಲಿಕೆಯಲ್ಲಿ ನಮ್ಮ ಅಭ್ಯರ್ಥಿಯನ್ನು ನಿಲ್ಲಿಸಿದ್ದೆವು. ಮೈಸೂರಿನಿಂದ ರಾಜ್ಯಕ್ಕೆ ಸಂದೇಶ ಹೋಗುತ್ತೆ ಎಂದು ಹೇಳಿದ್ದೆ. ಆ ಸಂದೇಶವನ್ನು ತಾಯಿ ಚಾಮುಂಡೇಶ್ವರಿ ದೇವಿ ಕೊಟ್ಟಿದ್ದಾಳೆ. ಜೆಡಿಎಸ್ ಬಗ್ಗೆ ಅಪಪ್ರಚಾರ ಮಾಡಬೇಕೆಂದು ಹೊರಟಿದ್ದರು. ಆದರೆ ತಾಯಿ ಚಾಮುಂಡೇಶ್ವರಿ ರಕ್ಷಣೆ ಕೊಟ್ಟು‌ ಉಳಿಸಿದ್ದಾಳೆ ಎಂದು ಎಚ್. ಡಿ.ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜನರ ಕೈಗೆ ಸಿಗುತ್ತಿರಲಿಲ್ಲ; ಸಿ.ಪಿ.ಯೋಗೇಶ್ವರ್ 

ಹೆಚ್​ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜನರ ಕೈಗೆ ಸಿಗುತ್ತಿರಲಿಲ್ಲ. ಬೆಳಗ್ಗೆ 6ಕ್ಕೆ ಹೋದರೂ ಜನರನ್ನ ಮನೆಗೆ ಸೇರಿಸುತ್ತಿರಲಿಲ್ಲ ಎಂದು ಏಕವಚನದಲ್ಲೇ HDK ವಿರುದ್ಧ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದರು.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಜನರ ಕೈಗೆ ಸಿಗುತ್ತಿರಲಿಲ್ಲ. ಬೆಳಗ್ಗೆ 6 ಗಂಟೆಗೆ ಹೋದರು ಜನರನ್ನ ಮನೆಗೆ ಸೇರಿಸುತ್ತಿರಲಿಲ್ಲ. ಆದರೆ ಅವನು ಅಧಿಕಾರ ಕಳೆದುಕೊಂಡಾಗ 6 ಗಂಟೆಗೆ ಚನ್ನಪಟ್ಟಣಕ್ಕೆ ಬರ್ತಿದ್ದಾನೆ. ಅವನಿಗೆ ಈಗ ಗೊತ್ತಾಗಿದೆ ಜನರೆದುರು ದುರಹಂಕಾರ ನಡೆಯಲ್ಲವೆಂದು. ಅಭಿವೃದ್ಧಿ ಮಾಡಿದರಷ್ಟೇ ಜನ ಮತ ಹಾಕ್ತಾರೆಂದು ಗೊತ್ತಾಗಿದೆ. ಹೆಚ್‌ಡಿಕೆ ಬಂದಾಗ JDS ಮುಖಂಡರು, ಕಾರ್ಯಕರ್ತರು ಹಲ್ಲು ಗಿಂಜುತ್ತಾರೆ. ‘ಅವನಿಗೆ ಹೂವಿನ ಹಾರ ಹಿಡ್ಕೊಂಡು ಹೋಗುತ್ತಾರೆ’ ‘ಆದ್ರೆ ಅವನು ಸಿಎಂ ಆಗಿದ್ದಾಗ ಯಾರಿಗೆ ಅಧಿಕಾರ ಕೊಟ್ಟಿದ್ದಾನೆ’ ಎಂದು ಏಕವಚನದಲ್ಲೇ HDK ವಿರುದ್ಧ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ನಿನ್ನೆ ಕಾರ್ಯಕ್ರಮದಲ್ಲಿ CPY ಮಾತಾಡಿದ್ದ ವಿಡಿಯೋ ವೈರಲ್ ಆಗಿತ್ತು.

ಇನ್ನು ಮಾತು ಮುಂದುವರೆಸಿದ ಅವರು.. ವಿಧಾನಸೌಧ ಚನ್ನಪಟ್ಟಣದಿಂದ 60 ಕಿ.ಮೀ ಇದೇ. ಆದರೆ ಯಾರು ವಿಧಾನಸೌಧದ ಮೆಟ್ಟಿಲು ಹತ್ತಿದ್ದಾರೆ ಜೆಡಿಎಸ್ ನವರು ಮುಂದಿನ ಏಪ್ರಿಲ್ ನಂತರ ನನ್ನ ರಾಜಕೀಯ ಪ್ರಾರಂಭವಾಗಲಿದೆ. ಇಲ್ಲಿ ನಾನು ಶಾಸಕ, ಬೇರೆಯವರು ಯಾಕೆ ಬರ್ತಾರೆ ಅಂತಾರೆ ಕುಮಾರಸ್ವಾಮಿ. ಹಾಗಾಗಿ ಮುಂದಿನ ಏಪ್ರಿಲ್ ನಂತರ ಕ್ಷೇತ್ರ ಪ್ರವಾಸ ಮಾಡ್ತೇನೆ. ಪ್ರತಿ ಹಳ್ಳಿಗೂ ಭೇಟಿ ಕೊಡ್ತೇನೆ, ಪಕ್ಷ ಸಂಘಟನೆ ಮಾಡ್ತೇನೆ. ಚನ್ನಪಟ್ಟಣ ನನ್ನ ತವರೂರು, ನನಗೆ ರಾಜಕೀಯ ಜನ್ಮ ನೀಡಿದ ತಾಲೂಕು. ನನಗೆ ನೀವು ಬಿಡುವು ಮಾಡಿಕೊಟ್ಟಿದ್ದೀರಿ, ಚನ್ನಪಟ್ಟಣದಿಂದ ರಾಜ್ಯ ಪ್ರವಾಸ ಮಾಡಲು ಅವಕಾಶ ಮಾಡಿಕೊಟ್ಟಿದ್ದೀರಿ, ಸರ್ಕಾರ ನನಗೆ ವಿಧಾನಸೌಧದಲ್ಲಿ ಕಚೇರಿ ಕೊಟ್ಟಿದೆ, ಬೆಂಗಳೂರಿನಲ್ಲಿ ಬಂಗಲೆ ಕೊಟ್ಟಿದೆ, ಜನ ನನಗೆ ಮತ ಹಾಕದಿದ್ದರೂ ಸಹ ಸಚಿವನಾಗುವ ಶಕ್ತಿ ಕೊಟ್ಟಿದ್ದೀರಿ ಎಂದು ಯೋಗೇಶ್ವರ್ ಹೇಳಿದ್ದರು.

ಇದನ್ನೂ ಓದಿ: ಅವನಿಗೆ ಈಗ ಗೊತ್ತಾಗಿದೆ ಜನರೆದುರು ದುರಹಂಕಾರ ನಡೆಯಲ್ಲವೆಂದು.. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಸಿ.ಪಿ.ಯೋಗೇಶ್ವರ್

ಮೈಸೂರು ಪಾಲಿಕೆ ಚುನಾವಣೆ: ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆದ್ರಾ ಹೆಚ್.ಡಿ. ಕುಮಾರಸ್ವಾಮಿ!?

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ