AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ದುರಸ್ತಿ ಕುರಿತು ಟ್ವೀಟ್: ಸಚಿವ ಕೃಷ್ಣಭೈರೇಗೌಡ ಕೊಟ್ಟ ಸಮರ್ಥನೆ ಇದು ನೋಡಿ!

ರಸ್ತೆ ಡಾಂಬರೀಕರಣಕ್ಕೆ ಸಂಬಂಧಿಸಿ ಟ್ವೀಟ್ ಮೂಲಕ ಮನವಿ ಮಾಡಿರುವುದು ಬಹಳಷ್ಟು ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಸಚಿವ ಕೃಷ್ಣಭೈರೇಗೌಡ ಆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಸಚಿವರು ಕೊಟ್ಟ ಸ್ಪಷ್ಟನೆ ಏನು? ಅವರು ಮಾಡಿಕೊಂಡಿರುವ ಸಮರ್ಥನೆ ಏನು? ತಿಳಿಯಲು ಮುಂದೆ ಓದಿ.

ರಸ್ತೆ ದುರಸ್ತಿ ಕುರಿತು ಟ್ವೀಟ್: ಸಚಿವ ಕೃಷ್ಣಭೈರೇಗೌಡ ಕೊಟ್ಟ ಸಮರ್ಥನೆ ಇದು ನೋಡಿ!
ಕೃಷ್ಣಭೈರೇಗೌಡ
Vinay Kashappanavar
| Updated By: Ganapathi Sharma|

Updated on: Aug 16, 2024 | 2:55 PM

Share

ಬೆಂಗಳೂರು, ಆಗಸ್ಟ್ 16: ಬೆಂಗಳೂರಿನ ವೀರಣ್ಣಪಾಳ್ಯದಿಂದ ಹೆಬ್ಬಾಳ ಕಡೆಗಿನ ರಿಂಗ್ ರೋಡಿನ ಸರ್ವಿಸ್ ರಸ್ತೆಯ ಡಾಂಬರೀಕರಣಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಮನವಿ ಮಾಡಿದ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ರಸ್ತೆ ದುರಸ್ತಿ ಕುರಿತು ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸಾರ್ವಜನಿಕರ ಪರವಾಗಿ ಅಧಿಕಾರಿಗಳಿಗೆ ಮಾಹಿತಿ ಕೊಡುವ ಪ್ರಯತ್ನ ಮಾಡಿದ್ದೇನೆ. ಅಧಿಕಾರಿಗಳು ಎಚ್ಚೆತ್ತು ಕೆಲಸ ಮಾಡಬೇಕು. ಸಾರ್ವಜನಿಕರ ಪರ ಕೆಲಸ ಮಾಡಬೇಕು ಎಂದರು.

ಅಧಿಕಾರಿಗಳಿಗೆ ಮಾಹಿತಿ ಕೊಡುವುದಕ್ಕೆ ನಾನಾ ರೀತಿಗಳಿವೆ. ಫೋನ್ ಮಾಡಬಹುದು, ಮೇಸೆಜ್ ಕೊಡಬಹುದು ಹಾಗೂ ಪತ್ರ ಬರೆಯಬಹುದು. ನಾವು ಈಗ ಅವರ ಗಮನಕ್ಕೆ ತಂದಿದ್ದೇನೆ. ಕ್ಷೇತ್ರದ ಸಮಸ್ಯೆ ಕುರಿತು ಅವರ ಗಮನಕ್ಕೆ ತಂದಿದ್ದೇನೆ. ಆದರೆ, ಈ ವಿಚಾರಕ್ಕೆ ಯಾರ್ಯಾರೋ ಏನೇನೋ ಬಣ್ಣ ಕೊಟ್ಟರೆ ಅವರಿಗೆ ಬಿಟ್ಟಿದ್ದು. ಜನರ ಕೆಲಸ ಸರ್ಕಾರದಲ್ಲಿ ಆಗಬೇಕು, ಅದಕ್ಕೆ ಹಾಗೆ ಮಾಡಿದ್ದೇನೆ ಎಂದರು.

ನಿಮಗೆ ಅ ಕೆಲಸ ಆಗಬೇಕಾ? ಅಥವಾ ಚರ್ಚೆ ಆಗಬೇಕಾ? ಜನರ ಸಮಸ್ಯೆ ಪರಿಹಾರ ಆಗಬೇಕು ಅಷ್ಟೆ. ಯಾವ ಮಾರ್ಗದಲ್ಲಿ ಆಗುತ್ತೆ ಎಂಬುದು ಮುಖ್ಯವಲ್ಲ. ಕೇವಲ ಕೆಲಸ ಆಗಬೇಕು, ಜನರ ಸಮಸ್ಯೆ ಬಗೆ ಹರಿಯಬೇಕು. ಜನಪ್ರತಿನಿಧಿಯಾಗಿ ಜನರ ಕೆಲಸ ಮಾಡಿದ್ದೇನೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಬೆಂಗಳೂರು: ರಸ್ತೆ ಡಾಂಬರೀಕರಣಕ್ಕೆ ಸಚಿವರಿಂದಲೇ ಟ್ವೀಟ್ ಮೂಲಕ ಮನವಿ!

ರಸ್ತೆ ಸಮಸ್ಯೆ ಪರಿಹರಿಸುವಂತೆ ಕೋರಿ ಸಚಿವರೇ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು ನಾನಾ ರೀತಿಯ ಚರ್ಚೆಗಳಿಗೆ ಗ್ರಾಸವಾಗಿತ್ತು. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಸಮಸ್ಯೆಗಳನ್ನು ಹೇಳಿಕೊಳ್ಳಲಾಗದೆ ಕಾಂಗ್ರೆಸ್ ನಾಯಕರು, ಸಚಿವರು ಹೀಗೆ ಮಾಡುತ್ತಿದ್ದಾರೆ ಎಂದೆಲ್ಲ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕೃಷ್ಣಭೈರೇಗೌಡ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು