AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತ ಸ್ವಾಮೀಜಿಗೆ ಸಿಹಿ ತಿನ್ನಿಸಿ ಅವರ ಬಾಯಿಂದ ಎಂಜಲು ತಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್

ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಜಾತಿ, ಧರ್ಮಗಳೆಲ್ಲವನ್ನೂ ಮೀರಿದ್ದು ಮಾನವೀಯತೆ. ನಮ್ಮ ನಡುವಿನ ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮಗಳು ಎಂದಿಗೂ ಅಡ್ಡಬರಬಾರದು. ನಾನು, ನೀವು, ಎಲ್ಲರೂ ಮನುಷ್ಯ ಜಾತಿ. ಮನುಷ್ಯನಾಗಿ ಬಾಳುವುದೇ ನಿಜವಾದ ಧರ್ಮ ಎಂದಿದ್ದಾರೆ.

ದಲಿತ ಸ್ವಾಮೀಜಿಗೆ ಸಿಹಿ ತಿನ್ನಿಸಿ ಅವರ ಬಾಯಿಂದ ಎಂಜಲು ತಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್
ಜಮೀರ್ ಅಹ್ಮದ್ ಖಾನ್
TV9 Web
| Edited By: |

Updated on:May 23, 2022 | 6:48 PM

Share

ಬೆಂಗಳೂರು: ಭ್ರಾತೃತ್ವದ ಸಂದೇಶ ಸಾರಲು ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ (Zameer Ahmed Khan) ದಲಿತ ಸ್ವಾಮೀಜಿಯೊಬ್ಬರಿಗೆ ಸಿಹಿ ತಿನ್ನಿಸಿ ಆಮೇಲೆ ಅದನ್ನು ಉಗುಳುವಂತೆ ಹೇಳಿ ಆ ಎಂಜಲನ್ನು ತಿಂದಿರುವ ವಿಡಿಯೊ ಇದೀಗ ವೈರಲ್ ಆಗಿದೆ. ಭಾನುವಾರ ಅಂಬೇಡ್ಕರ್ ಜಯಂತಿ (Ambedkar Jayanti) ಹಾಗೂ ಈದ್ ಮಿಲನ್ ಕಾರ್ಯಕ್ರಮದಲ್ಲಿ ಜಮೀರ್ ಈ ರೀತಿ ಎಂಜಲು ತಿಂದಿದ್ದಾರೆ. ಸಮಾಜಘಾತುಕ ಅಂಶಗಳು ಸಮುದಾಯಗಳ ನಡುವೆ ಬಿರುಕು ಮೂಡಿಸಲು ಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಈ ಸಮಾರಂಭದಲ್ಲಿ ಹೇಳಿದ್ದಾರೆ. ಈ ಸಮಾರಂಭದಲ್ಲಿ ಕೈಯಲ್ಲಿ ಸಿಹಿ ತೆಗೆದುಕೊಂಡು ಪಕ್ಕದಲ್ಲಿದ್ದ ದಲಿತ ಧಾರ್ಮಿಕ ಮುಖಂಡರಿಗೆ ತಿನ್ನಿಸಿದರು. ಆಮೇಲೆ ಶಾಸಕರು ಅವರ ಕೈ ಹಿಡಿದು ಸಿಹಿ ಉಗುಳಿ ನನಗೆ ತಿನ್ನಿಸಿ ಎಂದಿದ್ದಾರೆ. ಆ ಎಂಜಲನ್ನು ಜಮೀರ್ ತಿನ್ನುತ್ತಿದ್ದಂತೆ ಸಭಿಕರು ಚಪ್ಪಾಳೆ ತಟ್ಟುತ್ತಿರುವುದು ವಿಡಿಯೊದಲ್ಲಿದೆ. ಈ ವಿಡಿಯೊವನ್ನು ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ಜಾತಿ, ಧರ್ಮಗಳೆಲ್ಲವನ್ನೂ ಮೀರಿದ್ದು ಮಾನವೀಯತೆ. ನಮ್ಮ ನಡುವಿನ ಮನುಷ್ಯ ಸಂಬಂಧಗಳಿಗೆ ಜಾತಿ, ಧರ್ಮಗಳು ಎಂದಿಗೂ ಅಡ್ಡಬರಬಾರದು. ನಾನು, ನೀವು, ಎಲ್ಲರೂ ಮನುಷ್ಯ ಜಾತಿ. ಮನುಷ್ಯನಾಗಿ ಬಾಳುವುದೇ ನಿಜವಾದ ಧರ್ಮ ಎಂದಿದ್ದಾರೆ.

ನಾಲ್ಕು ಬಾರಿ ಶಾಸಕರಾಗಿರುವ ಖಾನ್ ಅವರು ಈ ಹಿಂದೆ ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

Published On - 6:46 pm, Mon, 23 May 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ