AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka MLC Election: ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್‌ ರಣತಂತ್ರ: 7 ಸ್ಥಾನಕ್ಕೆ 100 ಆಕಾಂಕ್ಷಿಗಳ ಕ್ಯೂ!

ಲೋಕಸಭೆ ಚುನಾವಣೆ ಬೆನ್ನಲ್ಲೇ ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆ ಕಾವು ಜೋರಾಗತೊಡಗಿದೆ. ಜೂನ್ 3 ಮತ್ತು ಜೂನ್ 13 ರಂದು ಪರಿಷತ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಆಕಾಂಕ್ಷಿಗಳ ದಂಡೇ ಇದೆ. ಹೀಗಾಗಿ ಟಿಕೆಟ್ ಹಂಚಿಕೆ ಉಭಯ ಪಕ್ಷಗಳಿಗೆ ಸವಾಲಾಗಿ ಪರಿಣಮಿಸಿದೆ. ಎಂಎಲ್​ಸಿ ಚುನಾವಣೆ ಸಂಬಂಧಿಸಿ ಭಾನುವಾರ ಏನೇನಾಯ್ತು ಎಂಬ ಪೂರ್ಣ ವಿವರ ಇಲ್ಲಿದೆ.

Karnataka MLC Election: ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್‌ ರಣತಂತ್ರ: 7 ಸ್ಥಾನಕ್ಕೆ 100 ಆಕಾಂಕ್ಷಿಗಳ ಕ್ಯೂ!
ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಬಿಜೆಪಿ ಕಾಂಗ್ರೆಸ್‌ ರಣತಂತ್ರ: 7 ಸ್ಥಾನಕ್ಕೆ 100 ಆಕಾಂಕ್ಷಿಗಳ ಕ್ಯೂ!
Anil Kalkere
| Edited By: |

Updated on: May 27, 2024 | 6:47 AM

Share

ಬೆಂಗಳೂರು, ಮೇ 27: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿದಿದ್ದು, ಜೂನ್ 4ಕ್ಕೆ ಫಲಿತಾಂಶ ಬರಲಿದೆ. ಇದರ ಮಧ್ಯೆ ಜೂನ್ 3 ಮತ್ತು ಜೂನ್ 13 ರಂದು ಪರಿಷತ್ ಚುನಾವಣೆ (MLC Elections) ನಡೆಯಲಿದ್ದು, ಮೂರು ಪಕ್ಷಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಬಿಜೆಪಿ-ಜೆಡಿಎಸ್ (BJP JDS) ಒಂದೆಡೆ ರಣತಂತ್ರ ರೂಪಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ (Congress) ಕೂಡಾ ಕಸರತ್ತು ಮಾಡುತ್ತಿದೆ. ಆದರೆ, ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯೇ ಕಾಂಗ್ರೆಸ್‌ಗೆ ತಲೆಬಿಸಿಯಾಗಿದೆ.

ದೆಹಲಿಗೆ 100 ಪರಿಷತ್ ಆಕಾಂಕ್ಷಿಗಳ ಲಿಸ್ಟ್

ಮೇಲ್ಮನೆಯ11 ಸ್ಥಾನಗಳಿಗೆ ಜೂನ್13 ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಜೂನ್ 3 ಕೊನೆಯ ದಿನಾಂಕವಾಗಿದೆ. ಇದರಲ್ಲಿ 7 ಸ್ಥಾನ ಗೆಲ್ಲು ಕಾಂಗ್ರೆಸ್‌ಗೆ ಅವಕಾಶವಿದೆ. ಆದರೆ, ಈ ಏಳು ಸ್ಥಾನಕ್ಕೆ 100 ಕ್ಕೂ ಹೆಚ್ಚು ಆಕಾಂಕ್ಷಿಗಳು ಟವೆಲ್ ಹಾಕಿದ್ದಾರೆ. ಹೀಗಾಗಿ ಮೇ, 28 ಮತ್ತು 29ರಂದು ದೆಹಲಿಗೆ ತೆರಳಲು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಜ್ಜಾಗಿದ್ದು, ದೆಹಲಿಯಲ್ಲೇ ಅಭ್ಯರ್ಥಿಗಳ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ. ಹೀಗಾಗಿ ಆಕಾಂಕ್ಷಿಗಳ ದಂಡೇ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡುತ್ತಿದ್ದು, ಲಾಬಿ ಮುಂದುವರೆಸಿದ್ದಾರೆ.

ಭಾನುವಾರ ಡಿಸಿಎಂ ಭೇಟಿ ಮಾಡಿದ್ದ ಸಚಿವ ರಾಮಲಿಂಗಾರೆಡ್ಡಿ, ಬೆಂಗಳೂರಿನ ಇಬ್ಬರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.

ವಿಧಾನಪರಿಷತ್ ಗೆಲ್ಲಲು ಜೆಡಿಎಸ್-ಬಿಜೆಪಿ ರಣತಂತ್ರ

ಇತ್ತ ವಿಧಾನ ಪರಿಷತ್ ಚುನಾವಣೆ ಗೆಲ್ಲಲು ದೋಸ್ತಿ ನಾಯಕರು ಭಾನುವಾರ ಮೊದಲ ಸಮನ್ವಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಜೂನ್ 3ರಂದು ನಡೆಯೋ ಶಿಕ್ಷಕ, ಮತ್ತು ಪದವೀಧರ ಕ್ಷೇತ್ರಗಳನ್ನು ಗೆಲ್ಲಲು ರಣತಂತ್ರ ರೂಪಿಸಲಾಯಿತು. ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್​ ಅಶೋಕ್​, ಶಾಸಕ ಅಶ್ವತ್ಥ್​ ನಾರಾಯಣ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ವಾಗ್ದಾನ ಮಾಡೋದರ ಜೊತೆಗೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನಾನು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದರು: ರಘುಪತಿ ಭಟ್

ಬಿಜೆಪಿಯಲ್ಲೂ ಮೂರು ಸ್ಥಾನಕ್ಕೆ 40 ಆಕಾಂಕ್ಷಿಗಳು ಲಾಬಿ ಮಾಡ್ತಿದ್ದಾರೆ. ಈ ಲಾಬಿಯ ಮಧ್ಯೆ ಅತ್ತ ಮೈಸೂರಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಭೆ ನಡೆಸಿದ್ದಾರೆ. ಎನ್‌ಡಿಎ ಅಭ್ಯರ್ಥಿ ವಿವೇಕಾನಂದರನ್ನು ಗೆಲ್ಲಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಎಲ್ಲಾ 6 ಕ್ಷೇತ್ರಗಳನ್ನು ಗೆಲ್ಲಲು ನಾವು ತಯಾರಿ ಮಾಡಿಕೊಂಡಿದ್ದೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಅಡ್ಡಮತದಾನ ಮಾಡಿದವರ ವಿರುದ್ಧ ಕ್ರಮವೇನು?

ಪರಿಷತ್ ನೈಋತ್ಯ ಪದವೀಧರ ಕ್ಷೇತ್ರದಿಂದ ಟಿಕೆಟ್ ಮಿಸ್ ಆಗಿದ್ದಕ್ಕೆ ಮಾಜಿ ಶಾಸಕ ರಘುಪತಿ ಭಟ್ ಪಕ್ಷೇತರರಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಪಕ್ಷ ರಘುಪತಿ ಭಟ್‌ರನ್ನ ಮುಂದಿನ 6 ವರ್ಷಕ್ಕೆ ವಜಾಗೊಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಘುಪತಿ ಭಟ್, ಕಾರ್ಯಕರ್ತನನ್ನ ಪಕ್ಷದಿಂದ ವಜಾ ಮಾಡಲು ಆಗಲ್ಲ. ನನಗೆ ಯಾವ ಹುದ್ದೆಯಿಂದ ವಜಾ ಮಾಡಿದ್ದೀರಾ ಹೇಳಿ ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು