AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲ್ತುಳಿತ ಪ್ರಕರಣ, ರಾಜಣ್ಣ ರಾಜೀನಾಮೆ ಗುದ್ದಾಟ ನಡುವೆ ಬರೋಬ್ಬರಿ 15 ವಿಧೇಯಕ ಮಂಡನೆ, ಯಾವುವು?

ಮುಂಗಾರು ಮಳೆ, ಚುಮು ಚುಮು ಚಳಿ, ತಣ್ಣನೆಯ ವಾತಾವರಣದಲ್ಲಿ ಕೆಲದಿನಗಳಿಂದ ತಣ್ಣಗಿದ್ದ ರಾಜ್ಯ ರಾಜಕೀಯ ಮತ್ತೆ ಕಾವೇರಿದೆ. ಮತಗಳ್ಳತನ ಹಾಗೂ ಸಚಿವ ಕೆಎನ್ ರಾಜಣ್ಣ ಅವರ ವಜಾ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಸಂಬಂಧ ಮುಂಗಾರು ವಿಧಾಮಂಡಲ ಅಧಿವೇಶನದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ನಡುವೆ ಎರಡನೇ ದಿನದ ಅಧಿವೇಶದಲ್ಲಿಂದು (ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ.

ಕಾಲ್ತುಳಿತ ಪ್ರಕರಣ, ರಾಜಣ್ಣ ರಾಜೀನಾಮೆ ಗುದ್ದಾಟ ನಡುವೆ ಬರೋಬ್ಬರಿ 15 ವಿಧೇಯಕ ಮಂಡನೆ, ಯಾವುವು?
ವಿಧಾನಸೌಧ
ರಮೇಶ್ ಬಿ. ಜವಳಗೇರಾ
|

Updated on: Aug 12, 2025 | 5:43 PM

Share

ಬೆಂಗಳೂರು, (ಆಗಸ್ಟ್ 12): ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ (Karnataka Assembly Session) ಎರಡನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆಎನ್ ರಾಜಣ್ಣ (KN Rajanna) ತಲೆದಂಡ, ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ (Bengaluru stampede Case) ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಆಡಳಿತಾರೂಢ ಕಾಂಗ್ರೆಸ್ (Congress) ವಿರುದ್ಧ ಮುಗಿಬಿದ್ದಿವೆ. ಇದರ ನಡುವೆ ಇಂದು(ಆಗಸ್ಟ್ 12) ಬರೋಬ್ಬರಿ 15 ವಿಧೇಯಕಗಳು (Bills) ಮಂಡನೆಯಾಗಿವೆ. ಸಚಿವರದ ಡಾ. ಜಿ ಪರಮೇಶ್ವರ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಸುಧಕಾರ್ ಹಾಗೂ ಬೋಸರಾಜ ಪರವಾಗಿ ಕಾನೂನು ಸಚಿವ ಎಚ್ ಕೆ ಪಾಟೀಲ್ (HK Patil)  ವಿವಿಧ ಇಲಾಖೆಗೆ ಸಂಬಂಧಿಸಿದ 15 ವಿಧೇಯಕಗಳನ್ನ ಮಂಡನೆ ಮಾಡಿದ್ದಾರೆ.

ವಿಧಾನಸಭೆ ಅಧಿವೇಶದನ ಎರಡನೇ ದಿನವಾದ ಇಂದು ಒಂದೇ ದಿನ ಬರೋಬ್ಬರಿ 15 ವಿಧೇಯಕಗಳನ್ನು ಮಂಡಿಸಲಾಗಿದೆ. ಗೃಹ ಸಚಿವ ಪರಮೇಶ್ವರ್, ಆರೋಗ್ಯ ದಿನೇಶ್ ಗುಂಡೂರಾವ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಉನ್ನತ ಶಿಕ್ಷಣ ಸಚಿವ ಸುಧಕಾರ್ ಹಾಗೂ ಬೋಸರಾಜ ಪರವಾಗಿ ಎಲ್ಲಾ 15 ವಿಧೇಯಕಗಳನ್ನ ಕಾನೂನು ಸಚಿವ ಎಚ್ ಕೆ ಪಾಟೀಲ್ ಅವರು ಮಂಡಿಸಿದರು.

ಇದನ್ನೂ ನೋಡಿ: Assembly Session Live: ಕರ್ನಾಟಕ ವಿಧಾನಸಭೆ ಅಧಿವೇಶನ, ಎರಡನೇ ದಿನದ ಕಲಾಪದ ನೇರ ಪ್ರಸಾರ

ಮಂಡನೆಯಾದ 15 ವಿಧೇಯಕಗಳಾವುವು?

  1. 2025ನೇ ಸಾಲಿನ ಕರ್ನಾಟಕ ಅಗ್ನಿಶಾಮಕದಳ (ತಿದ್ದುಪಡಿ) ವಿಧೇಯಕ ಮಂಡನೆ.
  2.  2025ನೇ ಸಾಲಿನ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯ ವರ್ಗಾವಣೆ ನಿಯಂತ್ರಣ) (ತಿದ್ದುಪಡಿ) ವಿಧೇಯಕ ಮಂಡನೆ.
  3.  2025ನೇ ಸಾಲಿನ ಕರ್ನಾಟಕ ವೈದ್ಯಕೀಯ ಕೋರ್ಸುಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳ ಕಡ್ಡಾಯ ಸೇವಾ (ತಿದ್ದುಪಡಿ) ವಿಧೇಯಕ ಮಂಡನೆ.
  4.  2025ನೇ ಸಾಲಿನ ಕರ್ನಾಟಕ ವೈದ್ಯಕೀಯ ನೋಂದಣಿ (ತಿದ್ದುಪಡಿ) ವಿಧೇಯಕ ಮಂಡನೆ.
  5. 2025ನೇ ಸಾಲಿನ ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
  6.  2025ನೇ ಸಾಲಿನ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  7. 2025ನೇ ಸಾಲಿನ ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  8.  2025ನೇ ಸಾಲಿನ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  9.  2025ನೇ ಸಾಲಿನ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ ಮಂಡನೆ.
  10.  2025ನೇ ಸಾಲಿನ ಬನವಾಸಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  11.  2025ನೇ ಸಾಲಿನ ಸರ್ವಜ್ಞ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  12.  2025ನೇ ಸಾಲಿನ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ವಿಧೇಯಕ ಮಂಡನೆ.
  13.  2025ನೇ ಸಾಲಿನ ಕರ್ನಾಟಕ ವೇದಿಕೆ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ) ವಿಧೇಯಕ ಮಂಡನೆ.
  14.  2025ನೇ ಸಾಲಿನ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ ಮಂಡನೆ.
  15. ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರಿಂದ ಒಂದು ವಿಧೇಯಕ ಮಂಡನೆ.
  16.  2025ನೇ ಸಾಲಿನ ಬಾಲ್ಯ ವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ ಮಂಡನೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?