AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,464 ಜನರಿಗೆ ಕೊರೊನಾ ಸೋಂಕು ದೃಢ; 29 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 352 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,22,807ಕ್ಕೆ ಏರಿಕೆಯಾಗಿದೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,464 ಜನರಿಗೆ ಕೊರೊನಾ ಸೋಂಕು ದೃಢ; 29 ಮಂದಿ ಸಾವು
ಸಾಂದರ್ಭಿಕ ಚಿತ್ರ
TV9 Web
| Updated By: ganapathi bhat|

Updated on:Jul 20, 2021 | 8:25 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 20) ಹೊಸದಾಗಿ 1,464 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,86,702ಕ್ಕೆ ಏರಿಕೆ ಆಗಿದೆ. ಸೋಂಕಿತರ ಪೈಕಿ 28,24,197 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಜನರ ಸಾವು ಸಂಭವಿಸಿದೆ. ತನ್ಮೂಲಕ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 36,226 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 26,256 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 352 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 5 ಮಂದಿ ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,22,807ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 11,96,953 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,807 ಜನರ ಸಾವು ಸಂಭವಿಸಿದೆ. ಒಟ್ಟು 10,046 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್​ ಶೇಕಡಾ 1.29 ರಷ್ಟು ಇದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬೆಂಗಳೂರು ನಗರ 352, ದಕ್ಷಿಣ ಕನ್ನಡ ಜಿಲ್ಲೆ 200, ಮೈಸೂರು 117, ಹಾಸನ 108, ಚಿಕ್ಕಮಗಳೂರು 81, ತುಮಕೂರು 86, ಬೆಳಗಾವಿ 75, ಉಡುಪಿ 68, ಶಿವಮೊಗ್ಗ 63, ಕೊಡಗು 56, ಉತ್ತರ ಕನ್ನಡ 53, ಮಂಡ್ಯ 37, ಕೋಲಾರ 36, ಬೆಂಗಳೂರು ಗ್ರಾಮಾಂತರ 35, ಚಾಮರಾಜನಗರ 16, ಧಾರವಾಡ 14, ದಾವಣಗೆರೆ 13, ಚಿತ್ರದುರ್ಗ 11, ಬಳ್ಳಾರಿ 8, ಚಿಕ್ಕಬಳ್ಳಾಪುರ 8, ಕಲಬುರಗಿ 8, ರಾಮನಗರ 4, ವಿಜಯಪುರ 4, ಹಾವೇರಿ 3, ರಾಯಚೂರು 3, ಬೀದರ್ ಜಿಲ್ಲೆ 2, ಬಾಗಲಕೋಟೆ, ಗದಗ, ಯಾದಗಿರಿ ಜಿಲ್ಲೆಯಲ್ಲಿ ತಲಾ 1 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

ಜಿಲ್ಲಾವಾರು ಕೊರೊನಾದಿಂದ ಮೃತರ ಸಂಖ್ಯೆ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿನಿಂದ 5, ದಕ್ಷಿಣ ಕನ್ನಡ ಜಿಲ್ಲೆ, ಮೈಸೂರು ಜಿಲ್ಲೆ, ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 3, ಹಾವೇರಿ, ಕೋಲಾರ ಜಿಲ್ಲೆಯಲ್ಲಿ ತಲಾ 2, ಮಂಡ್ಯ, ತುಮಕೂರು ಜಿಲ್ಲೆಯಲ್ಲಿ ತಲಾ 2, ಬೆಳಗಾವಿ, ಚಿಕ್ಕಬಳ್ಳಾಪುರ, ಧಾರವಾಡ, ಕಲಬುರಗಿ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,226 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: Tokyo Olympics: ಒಲಂಪಿಕ್ಸ್​ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ; ಜೆಕ್ ಗಣರಾಜ್ಯದ ಒಲಿಂಪಿಕ್ ತಂಡದ ಇಬ್ಬರಿಗೆ ಸೋಂಕು

Monkey B Virus: ಚೀನಾದಲ್ಲಿ ಮಂಕಿ ಬಿ ವೈರಸ್​ಗೆ ಮೊದಲ ಸಾವು; ಕೊರೊನಾ ನಡುವೆಯೇ ಮತ್ತೊಂದು ವೈರಾಣು ಪ್ರತ್ಯಕ್ಷ, ನಿಯಂತ್ರಣ ಹೇಗೆ?

Published On - 8:17 pm, Tue, 20 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ