AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಕೇಸ್ ಪತ್ತೆ; 22 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,760 ಕ್ಕೆ ಏರಿಕೆಯಾಗಿದೆ. 12,24,760 ಸೋಂಕಿತರ ಪೈಕಿ 12,00,712 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,001 ಕೊರೊನಾ ಕೇಸ್ ಪತ್ತೆ; 22 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Jul 25, 2021 | 11:15 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 25) ಹೊಸದಾಗಿ 1,001 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,94,557 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,34,741 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 22 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,374 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 23,419 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 165 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,24,760 ಕ್ಕೆ ಏರಿಕೆಯಾಗಿದೆ. 12,24,760 ಸೋಂಕಿತರ ಪೈಕಿ 12,00,712 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,832 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,215 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಳ್ಳಾರಿ 6, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 14, ಬೆಂಗಳೂರು ನಗರ 165, ಬೀದರ್ 1, ಚಾಮರಾಜನಗರ 5, ಚಿಕ್ಕಬಳ್ಳಾಪುರ 10, ಚಿಕ್ಕಮಗಳೂರು 62, ಚಿತ್ರದುರ್ಗ 15, ದಕ್ಷಿಣ ಕನ್ನಡ 115, ದಾವಣಗೆರೆ 1, ಧಾರವಾಡ 6, ಗದಗ 5, ಹಾಸನ 90, ಹಾವೇರಿ 4, ಕಲಬುರಗಿ 4, ಕೊಡಗು 63, ಕೋಲಾರ 25, ಕೊಪ್ಪಳ 2, ಮಂಡ್ಯ 35, ಮೈಸೂರು 97, ರಾಮನಗರ 7, ಶಿವಮೊಗ್ಗ 51, ತುಮಕೂರು 42, ಉಡುಪಿ 110, ಉತ್ತರ ಕನ್ನಡ 54, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರ ಬಲಿಯಾಗಿದೆ. ಬೆಳಗಾವಿ, ಹಾಸನ, ಹಾವೇರಿ, ಕೋಲಾರ, ಮೈಸೂರು ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ತಲಾ ಇಬ್ಬರು ನಿಧನ ಹೊಂದಿದ್ದಾರೆ. ಉಳಿದಂತೆ, ಬೀದರ್, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,374 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: ಬ್ರಿಟನ್​ನಲ್ಲಿ ಕೊರೊನಾ ವೈರಾಣುವಿನ ಮತ್ತೊಂದು ರೂಪಾಂತರಿ ಪತ್ತೆ: ಈವರೆಗೆ ಗೊತ್ತಿರುವ ವಿಷಯಗಳು ಇಷ್ಟು

Explainer: ಕೊವಿಡ್ ಲಸಿಕೆ ಹಾಕಿಸಿಕೊಂಡವರಲ್ಲಿ ಕಂಡುಬರುವ ಕೊರೊನಾವೈರಸ್ ಸೋಂಕು ಲಕ್ಷಣಗಳು

(Karnataka New Corona Cases Death Toll Total Covid19 Active Coronavirus Cases)

Published On - 10:10 pm, Sun, 25 July 21