AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,431 ಜನರಿಗೆ ಕೊರೊನಾ ದೃಢ; 21 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 305 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,902 ಕ್ಕೆ ಏರಿಕೆಯಾಗಿದೆ. 12,32,902 ಸೋಂಕಿತರ ಪೈಕಿ 12,08,798 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,431 ಜನರಿಗೆ ಕೊರೊನಾ ದೃಢ; 21 ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Updated By: ganapathi bhat|

Updated on:Aug 15, 2021 | 7:52 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 15) ಹೊಸದಾಗಿ 1,431 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,29,464 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,69,962 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 21 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,979 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 22,497 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 305 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,32,902 ಕ್ಕೆ ಏರಿಕೆಯಾಗಿದೆ. 12,32,902 ಸೋಂಕಿತರ ಪೈಕಿ 12,08,798 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,937 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,166 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 2, ಬಳ್ಳಾರಿ 5, ಬೆಳಗಾವಿ 28, ಬೆಂಗಳೂರು ಗ್ರಾಮಾಂತರ 17, ಬೆಂಗಳೂರು ನಗರ 305, ಬೀದರ್ 3, ಚಾಮರಾಜನಗರ 10, ಚಿಕ್ಕಬಳ್ಳಾಪುರ 5, ಚಿಕ್ಕಮಗಳೂರು 45, ಚಿತ್ರದುರ್ಗ 20, ದಕ್ಷಿಣ ಕನ್ನಡ 311, ದಾವಣಗೆರೆ 3, ಧಾರವಾಡ 15, ಗದಗ 4, ಹಾಸನ 87, ಹಾವೇರಿ 3, ಕಲಬುರಗಿ 3, ಕೊಡಗು 82, ಕೋಲಾರ 23, ಕೊಪ್ಪಳ 1, ಮಂಡ್ಯ 32, ಮೈಸೂರು 83, ರಾಯಚೂರು 4, ರಾಮನಗರ 6, ಶಿವಮೊಗ್ಗ 41, ತುಮಕೂರು 51, ಉಡುಪಿ 177, ಉತ್ತರ ಕನ್ನಡ 64, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾದಿಂದ 3 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 4 ಹಾಗೂ ಹಾಸನ ಜಿಲ್ಲೆಯಲ್ಲಿ 3 ಕೊವಿಡ್ ಮರಣಗಳು ವರದಿಯಾಗಿದೆ. ಚಿತ್ರದುರ್ಗ, ಕೋಲಾರ, ಉಡುಪಿ ಜಿಲ್ಲೆಯಲ್ಲಿ ತಲಾ 2 ಕೊವಿಡ್ ಮರಣ ಸಂಭವಿಸಿದೆ. ಬೆಳಗಾವಿ, ಕೊಡಗು, ಮಂಡ್ಯ, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದೆ.

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಬರದಿದ್ದರೆ ಶಾಲೆ ಓಪನ್​ ಬೇಡ: ಸಿದ್ದರಾಮಯ್ಯ ಅಭಿಪ್ರಾಯ

ಮೂರನೇ ಡೋಸ್​ ಕೊರೊನಾ ಲಸಿಕೆ ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ ಸಿಡಿಸಿ; ಆದ್ಯತೆ ಮೇರೆಗೆ ವಿತರಿಸಲು ಸೂಚನೆ

(Karnataka New Corona Cases Death Toll Total Covid19 Active Coronavirus Cases on August 15)

Published On - 7:19 pm, Sun, 15 August 21