AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,674 ಕೊರೊನಾ ಕೇಸ್ ಪತ್ತೆ; 38 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 477 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,28,515 ಕ್ಕೆ ಏರಿಕೆಯಾಗಿದೆ. 12,28,515 ಸೋಂಕಿತರ ಪೈಕಿ 12,03,636 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,674 ಕೊರೊನಾ ಕೇಸ್ ಪತ್ತೆ; 38 ಮಂದಿ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 03, 2021 | 8:25 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 3) ಹೊಸದಾಗಿ 1,674 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,09,958 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,49,003 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 38 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,650 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 24,280 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 477 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,28,515 ಕ್ಕೆ ಏರಿಕೆಯಾಗಿದೆ. 12,28,515 ಸೋಂಕಿತರ ಪೈಕಿ 12,03,636 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,892 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,986 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 1, ಬಳ್ಳಾರಿ 8, ಬೆಳಗಾವಿ 36, ಬೆಂಗಳೂರು ಗ್ರಾಮಾಂತರ 21, ಬೆಂಗಳೂರು ನಗರ 477, ಬೀದರ್ 0, ಚಾಮರಾಜನಗರ 19, ಚಿಕ್ಕಬಳ್ಳಾಪುರ 6, ಚಿಕ್ಕಮಗಳೂರು 61, ಚಿತ್ರದುರ್ಗ 15, ದಕ್ಷಿಣ ಕನ್ನಡ 307, ದಾವಣಗೆರೆ 12, ಧಾರವಾಡ 9, ಗದಗ 3, ಹಾಸನ 104, ಹಾವೇರಿ 1, ಕಲಬುರಗಿ 3, ಕೊಡಗು 94, ಕೋಲಾರ 17, ಕೊಪ್ಪಳ 4, ಮಂಡ್ಯ 44, ಮೈಸೂರು 147, ರಾಯಚೂರು 0, ರಾಮನಗರ 11, ಶಿವಮೊಗ್ಗ 26, ತುಮಕೂರು 80, ಉಡುಪಿ 104, ಉತ್ತರ ಕನ್ನಡ 60, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ 8 ಮತ್ತು ಮೈಸೂರು ಜಿಲ್ಲೆಯಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಧಾರವಾಡ, ಹಾಸನ, ಕೋಲಾರ, ತುಮಕೂರು ಜಿಲ್ಲೆಯಲ್ಲಿ ತಲಾ 2, ಬಳ್ಳಾರಿ, ಬೆಳಗಾವಿ, ಚಿಕ್ಕಮಗಳೂರು, ಗದಗ, ಕೊಡಗು, ರಾಯಚೂರು, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,650 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: Covid Vaccine: ಡಿಸೆಂಬರ್ ವೇಳೆಗೆ ಭಾರತದಲ್ಲಿ 12 ಕೋಟಿ ಕೊವಿಶೀಲ್ಡ್ ಹಾಗೂ 5.8 ಕೋಟಿ ಡೋಸ್ ಕೊವ್ಯಾಕ್ಸಿನ್ ಲಸಿಕೆ ಉತ್ಪಾದನೆ

‘ಭಾರತ್ ಬಯೋಟೆಕ್ ಲಸಿಕೆ ಉತ್ಪಾದನೆಗೆ ಆರಂಭಿಕ‌ ಸಮಸ್ಯೆ; ಆದರೆ, 2022 ನಂತರ ಭಾರತವೇ ವಿಶ್ವಕ್ಕೆ ಕೊವಿಡ್ ಲಸಿಕೆ ಪೂರೈಸುತ್ತೆ’

(Karnataka New Corona Cases Death Toll Total Covid19 Active Coronavirus Cases on August 3)

ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್