AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ದೃಢ; 15 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 264 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,37,550 ಕ್ಕೆ ಏರಿಕೆಯಾಗಿದೆ. 12,37,550 ಸೋಂಕಿತರ ಪೈಕಿ 12,14,220 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 973 ಜನರಿಗೆ ಕೊರೊನಾ ದೃಢ; 15 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 30, 2021 | 8:31 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಆಗಸ್ಟ್ 30) ಹೊಸದಾಗಿ 973 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,48,228 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,92,517 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 15 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,293 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 18,392 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 264 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,37,550 ಕ್ಕೆ ಏರಿಕೆಯಾಗಿದೆ. 12,37,550 ಸೋಂಕಿತರ ಪೈಕಿ 12,14,220 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,986 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 7,343 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 18, ಬೆಂಗಳೂರು ಗ್ರಾಮಾಂತರ 6, ಬೆಂಗಳೂರು ನಗರ 264, ಬೀದರ್ 0, ಚಾಮರಾಜನಗರ 9, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 14, ಚಿತ್ರದುರ್ಗ 10, ದಕ್ಷಿಣ ಕನ್ನಡ 193, ದಾವಣಗೆರೆ 5, ಧಾರವಾಡ 6, ಗದಗ 1, ಹಾಸನ 74, ಹಾವೇರಿ 1, ಕಲಬುರಗಿ 1, ಕೊಡಗು 42, ಕೋಲಾರ 38, ಕೊಪ್ಪಳ 2, ಮಂಡ್ಯ 10, ಮೈಸೂರು 73, ರಾಯಚೂರು 0, ರಾಮನಗರ 4, ಶಿವಮೊಗ್ಗ 38, ತುಮಕೂರು 21, ಉಡುಪಿ 98, ಉತ್ತರ ಕನ್ನಡ 39, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕೊರೊನಾದಿಂದ ಮೃತಪಟ್ಟವರ ವಿವರ ಬೆಳಗಾವಿ, ಬೆಂಗಳೂರು ನಗರ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾದಿಂದ 3 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ತಲಾ 1 ಮಂದಿ ಕೊವಿಡ್​ನಿಂದ ಮರಣಿಸಿದ್ದಾರೆ.

ಇದನ್ನೂ ಓದಿ: School Open: 6ರಿಂದ 8ನೇ ತರಗತಿಯವರೆಗೆ ಸೆಪ್ಟೆಂಬರ್ 6ರಿಂದ ಶಾಲೆ ಆರಂಭ: ಸಚಿವ ಆರ್ ಅಶೋಕ್ ಘೋಷಣೆ

ಇದನ್ನೂ ಓದಿ: ಗಣೇಶೋತ್ಸವ ಆಚರಣೆಗೆ ಕಳೆದ ಬಾರಿಗಿಂತ ಹೆಚ್ಚು ಅವಕಾಶ; ಸೆಪ್ಟೆಂಬರ್ 5ಕ್ಕೆ ಅಂತಿಮ ತೀರ್ಮಾನ: ಆರ್ ಅಶೋಕ್

ಇದನ್ನೂ ಓದಿ: ಮದುವೆ ಸಮಾರಂಭಗಳಲ್ಲಿ 400 ಜನ ಸೇರಬಹುದು; ಕೊಡಗು, ದ.ಕ. ಹೊರತುಪಡಿಸಿ ಕೊರೊನಾ ನಿರ್ಬಂಧ ಸಡಿಲಿಕೆ

(Karnataka New Corona Cases Death Toll Total Covid19 Active Coronavirus Cases on August 30)

Published On - 8:31 pm, Mon, 30 August 21

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ