Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,987 ಕೊರೊನಾ ಕೇಸ್ ಪತ್ತೆ; 37 ಮಂದಿ ಸಾವು

| Updated By: ganapathi bhat

Updated on: Jul 31, 2021 | 8:47 PM

ಬೆಂಗಳೂರಿನಲ್ಲಿ ಇಂದು ಒಂದೇ ದಿನ 450 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,27,339 ಕ್ಕೆ ಏರಿಕೆಯಾಗಿದೆ. 12,27,339 ಸೋಂಕಿತರ ಪೈಕಿ 12,02,937 ಜನರು ಗುಣಮುಖರಾಗಿದ್ದಾರೆ.

Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 1,987 ಕೊರೊನಾ ಕೇಸ್ ಪತ್ತೆ; 37 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 31) ಹೊಸದಾಗಿ 1,987 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,05,124 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,44,742 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 37 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,562 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 23,796 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 450 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,27,339 ಕ್ಕೆ ಏರಿಕೆಯಾಗಿದೆ. 12,27,339 ಸೋಂಕಿತರ ಪೈಕಿ 12,02,937 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 15,872 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 8,529 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ
ಬಾಗಲಕೋಟೆ 4, ಬಳ್ಳಾರಿ 15, ಬೆಳಗಾವಿ 56, ಬೆಂಗಳೂರು ಗ್ರಾಮಾಂತರ 40, ಬೆಂಗಳೂರು ನಗರ 450, ಬೀದರ್ 0, ಚಾಮರಾಜನಗರ 23, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 55, ಚಿತ್ರದುರ್ಗ 26, ದಕ್ಷಿಣ ಕನ್ನಡ 365, ದಾವಣಗೆರೆ 14, ಧಾರವಾಡ 19, ಹಾಸನ 105, ಹಾವೇರಿ 3, ಕಲಬುರಗಿ 6, ಕೊಡಗು 132, ಕೋಲಾರ 51, ಕೊಪ್ಪಳ 7, ಮಂಡ್ಯ 47, ಮೈಸೂರು 177, ರಾಯಚೂರು 1, ಶಿವಮೊಗ್ಗ 40, ತುಮಕೂರು 108, ಉಡುಪಿ 148, ಉತ್ತರ ಕನ್ನಡ 75, ವಿಜಯಪುರ 4, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ಸಂಖ್ಯೆ
ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 11 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ 7 ಮತ್ತು ಹಾಸನದಲ್ಲಿ 4 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು, ಕೋಲಾರ, ಮೈಸೂರು ಜಿಲ್ಲೆಯಲ್ಲಿ ತಲಾ 2, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಹಾವೇರಿ, ಕೊಡಗು, ರಾಮನಗರ, ಶಿವಮೊಗ್ಗ, ಉಡುಪಿ, ಉತ್ತರ ಕನ್ನಡ ವಿಜಯಪುರ ಜಿಲ್ಲೆಯಲ್ಲಿ ತಲಾ 1 ಕೊವಿಡ್ ಮರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 36,525 ಜನರ ಸಾವು ಸಂಭವಿಸಿದೆ.

ಇದನ್ನೂ ಓದಿ: ಜಿಎಸ್​ಟಿ ಬಾಕಿ ಹಣ 11,400 ಕೋಟಿ ರೂ. ನೀಡಲು ಕೇಂದ್ರ ಒಪ್ಪಿಗೆ; ಕೊರೊನಾ ಲಸಿಕೆ ಪೂರೈಕೆ ಹೆಚ್ಚಿಸುವ ಭರವಸೆ: ಸಿಎಂ ಬೊಮ್ಮಾಯಿ

Bengaluru: ಮತ್ತೆ ಹೆಚ್ಚಿದ ಕೊರೊನಾ ಪ್ರಕರಣಗಳು; ಯಶವಂತಪುರದ 72 ಫ್ಲಾಟ್ ಸೀಲ್​ಡೌನ್

(Karnataka New Corona Cases Death Toll Total Covid19 Active Coronavirus Cases on July 31)

Published On - 8:04 pm, Sat, 31 July 21