AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಇಂದು ಹೊಸದಾಗಿ 2162 ಕೊರೊನಾ ಪ್ರಕರಣ ಪತ್ತೆ; 48 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 452 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,18,945 ಕ್ಕೆ ಏರಿಕೆಯಾಗಿದೆ.

Karnataka Covid Update: ಕರ್ನಾಟಕದಲ್ಲಿ ಇಂದು ಹೊಸದಾಗಿ 2162 ಕೊರೊನಾ ಪ್ರಕರಣ ಪತ್ತೆ; 48 ಮಂದಿ ಸಾವು
ಸಂಗ್ರಹ ಚಿತ್ರ
TV9 Web
| Edited By: |

Updated on:Jul 10, 2021 | 8:02 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 10) ಹೊಸದಾಗಿ 2,162 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,69,320ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,96,377 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಜನರ ಸಾವು ಸಂಭವಿಸಿದೆ. ತನ್ಮೂಲಕ, ಈವರೆಗೆ ಕೊರೊನಾದಿಂದ 35,779 ಜನರು ನಿಧನರಾಗಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 37,141 ಜನರಲ್ಲಿ ಕೊರೊನಾ ಸೋಂಕು ಪ್ರಕರಣ ಸಕ್ರಿಯವಾಗಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 452 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,18,945 ಕ್ಕೆ ಏರಿಕೆಯಾಗಿದೆ. 12,18,945 ಸೋಂಕಿತರ ಪೈಕಿ 11,89,979 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,728 ಜನ ಸಾವನ್ನಪ್ಪಿದ್ದಾರೆ. ನಗರದಲ್ಲಿ 13,237 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬಾಗಲಕೋಟೆ 1, ಬಳ್ಳಾರಿ 27, ಬೆಳಗಾವಿ 106, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು ನಗರ 452, ಬೀದರ್ 4, ಚಾಮರಾಜನಗರ 37, ಚಿಕ್ಕಬಳ್ಳಾಪುರ 22, ಚಿಕ್ಕಮಗಳೂರು 109, ಚಿತ್ರದುರ್ಗ 34, ದಕ್ಷಿಣ ಕನ್ನಡ 218, ದಾವಣಗೆರೆ 36, ಧಾರವಾಡ 25, ಗದಗ 9, ಹಾಸನ 178, ಹಾವೇರಿ 9, ಕಲಬುರಗಿ 9, ಕೊಡಗು 108, ಕೋಲಾರ 73, ಕೊಪ್ಪಳ 10, ಮಂಡ್ಯ 63, ಮೈಸೂರು 211, ರಾಯಚೂರು 2, ರಾಮನಗರ 23, ಶಿವಮೊಗ್ಗ 110, ತುಮಕೂರು 98, ಉಡುಪಿ 113, ಉತ್ತರ ಕನ್ನಡ 56, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ ಇಂದು 6 ಜನರಿಗೆ ಕೊರೊನಾ ದೃಢಪಟ್ಟಿದೆ.

ಜಿಲ್ಲಾವಾರು ಮೃತರ ಸಂಖ್ಯೆ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 48 ಜನರ ಸಾವು ಸಂಭವಿಸಿದೆ. ಬೆಳಗಾವಿ ಜಿಲ್ಲೆಯಲ್ಲಿ 6, ಬೆಂಗಳೂರಿನಲ್ಲಿ 5, ಕೋಲಾರ, ಮಂಡ್ಯ ಜಿಲ್ಲೆಯಲ್ಲಿ ಇಂದು ತಲಾ 4, ಚಾಮರಾಜನಗರ, ತುಮಕೂರು ಜಿಲ್ಲೆಯಲ್ಲಿ ತಲಾ 3, ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ಇಂದು ತಲಾ 2, ಮೈಸೂರು ಜಿಲ್ಲೆಯಲ್ಲಿ 2, ಬಾಗಲಕೋಟೆ, ಹಾವೇರಿ ಜಿಲ್ಲೆಯಲ್ಲಿ 1, ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ 1, ಕಲಬುರಗಿ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 1 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,779 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: Field Report: ಆನಂದಯ್ಯನ ಕೊರೊನಾ ಔಷಧ ಪರಿಣಾಮ ಬೀರುವುದೇ? ಔಷಧ ಸೇವಿಸಿದ ಕೊಪ್ಪಳದ ಜನರು ಹೇಳುವುದೇನು?

How To: ಕೊರೊನಾ ಕಾಲದಲ್ಲಿ ಹೆಚ್ಚುತ್ತಿದೆ ಸೈಬರ್ ದಾಳಿ; ಸುರಕ್ಷಿತ ಆನ್​ಲೈನ್ ಶಾಪಿಂಗ್ ಹೇಗೆ?

Published On - 7:55 pm, Sat, 10 July 21

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ