AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 16,387 ಜನರಿಗೆ ಕೊರೊನಾ ಸೋಂಕು ದೃಢ; 463 ಮಂದಿ ನಿಧನ

ಸೋಂಕಿತರ ಪೈಕಿ 23,12,060 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 463 ಜನರ ಸಾವು ಸಂಭವಿಸಿದೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 16,387 ಜನರಿಗೆ ಕೊರೊನಾ ಸೋಂಕು ದೃಢ; 463 ಮಂದಿ ನಿಧನ
ಪ್ರಾತಿನಿಧಿಕ ಚಿತ್ರ
TV9 Web
| Updated By: ganapathi bhat|

Updated on:Jun 02, 2021 | 10:19 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಜೂನ್ 2) ಹೊಸದಾಗಿ 16,387 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26,35,122ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 23,12,060 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 463 ಜನರ ಸಾವು ಸಂಭವಿಸಿದೆ. ತನ್ಮೂಲಕ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 30,017 ಕ್ಕೆ ಏರಿಕೆಯಾಗಿದೆ. 2,93,024 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಂಗಳೂರು ನಗರದಲ್ಲಿ ಇಂದು ಒಂದೇ ದಿನ 4,095 ಜನರಿಗೆ ಸೋಂಕು ಇರುವುದು ಖಚಿತವಾಗಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,70,742ಕ್ಕೆ ಏರಿಕೆಯಾಗಿದೆ. 11,70,742 ಸೋಂಕಿತರ ಪೈಕಿ 10,17,942 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಇಂದು ಕೊರೊನಾ ಸೋಂಕಿಗೆ 307 ಜನರು ನಿಧನರಾಗಿದ್ದಾರೆ. ರಾಜ್ಯದ ಮೃತರ ಪೈಕಿ ಬೆಂಗಳೂರಿನ 307 ಮಂದಿ ಸಾವನ್ನಪ್ಪಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ 13,929 ಜನರ ಸಾವು ಸಂಭವಿಸಿದೆ. ಉಳಿದಂತೆ, 1,38,870 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಜಿಲ್ಲಾವಾರು ಕೊವಿಡ್-19 ಪ್ರಕರಣಗಳ ವಿವರ ಬೆಂಗಳೂರು ನಗರ ಜಿಲ್ಲೆ 4095, ಮೈಸೂರು 1687, ಬೆಳಗಾವಿ 1006, ತುಮಕೂರು 882, ಮಂಡ್ಯ 711, ಉಡುಪಿ 636, ದಕ್ಷಿಣ ಕನ್ನಡ 618, ಶಿವಮೊಗ್ಗ 548, ದಾವಣಗೆರೆ 535, ಬಳ್ಳಾರಿ 525, ಹಾಸನ 520, ಚಿತ್ರದುರ್ಗ 483, ಉತ್ತರ ಕನ್ನಡ ಜಿಲ್ಲೆ 456, ಕೋಲಾರ 389, ಚಿಕ್ಕಬಳ್ಳಾಪುರ 360, ಕೊಡಗು 298, ಕೊಪ್ಪಳ 295, ಬಾಗಲಕೋಟೆ 262, ಗದಗ 285, ಚಾಮರಾಜನಗರ 258, ರಾಯಚೂರು 249, ಧಾರವಾಡ 245, ಚಿಕ್ಕಮಗಳೂರು 214, ರಾಮನಗರ 165, ಕಲಬುರಗಿ 117, ವಿಜಯಪುರ 166, ಬೆಂಗಳೂರು ಗ್ರಾಮಾಂತರ 164, ಯಾದಗಿರಿ 116, ಹಾವೇರಿ 79 ಹಾಗೂ ಬೀದರ್ ಜಿಲ್ಲೆಯಲ್ಲಿಂದು 23 ಜನರಿಗೆ ಸೋಂಕು ದೃಢಪಟ್ಟಿದೆ.

ಕೊವಿಡ್​ನಿಂದ ಮೃತಪಟ್ಟವರ ಜಿಲ್ಲಾವಾರು ವಿವರ ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 463 ಜನರ ಸಾವು ಸಂಭವಿಸಿದೆ. ಆ ಪೈಕಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ 307 ಜನರ ಬಲಿಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 17, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 12, ಹಾಸನ ಜಿಲ್ಲೆಯಲ್ಲಿ 12, ಮೈಸೂರು ಜಿಲ್ಲೆಯಲ್ಲಿಂದು 12, ಶಿವಮೊಗ್ಗ ಜಿಲ್ಲೆಯಲ್ಲಿಂದು 10, ಉತ್ತರ ಕನ್ನಡ ಜಿಲ್ಲೆಯಲ್ಲಿ 9, ಬಳ್ಳಾರಿ ಜಿಲ್ಲೆಯಲ್ಲಿ 8, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 8, ಕೊಪ್ಪಳ ಜಿಲ್ಲೆಯಲ್ಲಿಂದು 7, ತುಮಕೂರು ಜಿಲ್ಲೆಯಲ್ಲಿ 7, ಹಾವೇರಿ ಜಿಲ್ಲೆಯಲ್ಲಿಂದು 6, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5, ದಾವಣಗೆರೆ, ಧಾರವಾಡ ಜಿಲ್ಲೆಯಲ್ಲಿ ತಲಾ 5, ಚಾಮರಾಜನಗರ, ಗದಗ ಜಿಲ್ಲೆಯಲ್ಲಿಂದು ತಲಾ 4, ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿಂದು ತಲಾ 4, ಚಿತ್ರದುರ್ಗ, ರಾಯಚೂರು ಜಿಲ್ಲೆಯಲ್ಲಿ ತಲಾ 3, ಚಿಕ್ಕಮಗಳೂರು, ಕೋಲಾರ ಜಿಲ್ಲೆಯಲ್ಲಿ ತಲಾ 2, ಮಂಡ್ಯ, ಉಡುಪಿ ಜಿಲ್ಲೆಯಲ್ಲಿ ತಲಾ 2, ಬಾಗಲಕೋಟೆ ಜಿಲ್ಲೆಯಲ್ಲಿ 1 ಮತ್ತು ಕೊಡಗು, ರಾಮನಗರ ಜಿಲ್ಲೆಯಲ್ಲಿ ಇಂದು ತಲಾ 1 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಹಳ್ಳಿಗಳಲ್ಲಿ ಕೊರೊನಾ ನಿಯಂತ್ರಿಸಲು ಹೆಚ್ಚಿನ ಗಮನ; ಲಾಕ್​ಡೌನ್ ಮುಂದುವರಿಕೆ ಬಗ್ಗೆ ಜೂನ್ 5ರಂದು ನಿರ್ಧಾರ

Karnataka Lockdown: ಆರ್ಥಿಕ ಚಟುವಟಿಕೆ ಚುರುಕಿಗೆ ರಾಜ್ಯ ಸರ್ಕಾರ ಪ್ಲ್ಯಾನ್; ಲಾಕ್​ಡೌನ್ ನಿಯಮಾವಳಿ ಕೊಂಚ ಸಡಿಲಿಕೆ

Published On - 9:55 pm, Wed, 2 June 21