Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ? ಇಲ್ಲಿದೆ ಮಾಹಿತಿ

ಹೊಸ ವರ್ಷದ ಆಚರಣೆ ಸಂದರ್ಭದಲ್ಲೇ ಕರ್ನಾಟಕದ ಅನೇಕ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ನಂದಿ ಬೆಟ್ಟ, ಚಾಮುಂಡಿ ಬೆಟ್ಟ, ಕೆಆರ್‍ಎಸ್ ಹಿನ್ನೀರು ಮುಂತಾದ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಚಿಕ್ಕಮಗಳೂರು, ಮಂತ್ರಾಲಯ ಮುಂತಾದ ಸ್ಥಳಗಳಲ್ಲಿ ಹೆಚ್ಚಿನ ಜನಸಂದಣಿ ಕಂಡುಬಂದಿದೆ. ಕೆಲವು ತಾಣಗಳಲ್ಲಿ ಹೋಮ್‌ಸ್ಟೇ ಮತ್ತು ರೆಸಾರ್ಟ್‌ಗಳಲ್ಲಿ ಡಿಜೆ ಮತ್ತು ಸ್ಪೀಕರ್‌ಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಎಲ್ಲೆಲ್ಲ ನಿರ್ಬಂಧವಿದೆ? ಎಲ್ಲೆಲ್ಲಿ ಅನುಮತಿ ಇದೆ ಎಮಬ ವಿವರ ಇಲ್ಲಿದೆ.

ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ? ಇಲ್ಲಿದೆ ಮಾಹಿತಿ
ಮೈಸೂರಿನ ಚಾಮುಂಡಿ ಬೆಟ್ಟ
Follow us
Ganapathi Sharma
|

Updated on: Dec 31, 2024 | 7:49 AM

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್ ಗುಂಗಲ್ಲಿ ಅನಾಹುತಗಳು ನಡೆಯದಂತೆ ರಾಜ್ಯದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಎಲ್ಲೆಲ್ಲಿ ಪ್ರವಾಸಿಗರಿಗೆ ನಿರ್ಬಂಧ?

ಪ್ರವಾಸಿಗರ ಹಾಟ್‌ಸ್ಪಾಟ್ ಚಿಕ್ಕಳ್ಳಾಪುರದ ನಂದಿಬೆಟ್ಟ ಪ್ರವೇಶಕ್ಕೆ ಡಿಸೆಂಬರ್ 31ರ ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 7 ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಂಜೆ 7ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಇರಲಿದ್ದು, ಜನವರಿ 1ರಂದು ಎಂದಿನಂತೆ ತೆರಳಬಹುದು. ಇನ್ನು ಕೆಆರ್​ಎಸ್ ಹಿನ್ನೀರು, ಬಲಮುರಿ, ಎಡಮುರಿ, ಕಾವೇರಿ ನದಿ ತೀರ ಪ್ರವೇಶಕ್ಕೆ ಜನವರಿ 1ರ ರಾತ್ರಿವರೆಗೂ ನಿರ್ಬಂಧ ಹೇರಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಚಿಕ್ಕಮಗಳೂರಿನಲ್ಲೂ ಪ್ರವಾಸಿ ತಾಣಗಳಿಗೆ ಬ್ರೇಕ್

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಇತರೆ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಸಂಜೆ 6 ಗಂಟೆಯಿಂದ ಜನವರಿ 1ರ ಬೆಳಗ್ಗೆ 6 ಗಂಟೆ ತನಕ ಬಂದ್ ಆಗಲಿವೆ. ಹಾಗೆಯೇ ಹೋಮ್​ ಸ್ಟೇ, ರೆಸಾರ್ಟ್​​ಗಳಲ್ಲಿ ಇಂದು ರಾತ್ರಿ 10 ಗಂಟೆಗೆ ಡಿಜೆ, ಸ್ಪೀಕರ್​ ಬಂದ್ ಮಾಡಬೇಕು. ಅನುಮತಿ ಪಡೆಯದೇ ಪಾರ್ಟಿ ಮಾಡುವಂತಿಲ್ಲ ಎಂದು ಎಸ್​​ಪಿ ಆದೇಶಿಸಿದ್ದಾರೆ.

ಮುರುಡೇಶ್ವರ, ಜೋಗ ಜಲಪಾತ ಪ್ರವಾಸಿಗರಿಗೆ ಓಪನ್

ಕಾರವಾರದ ಮುರುಡೇಶ್ವರ ಕಡಲ ತೀರ 20 ದಿನದಿಂದ ಬಂದ್ ಆಗಿತ್ತು. ಇಂದಿನಿಂದ ಪ್ರವಾಸಿಗರಿಗೆ ತೆರೆಯಲಾಗುತ್ತಿದೆ. ಜೋಗ ಜಲಪಾತ ವೀಕ್ಷಣೆಗೂ, ಜನವರಿ 1ರಿಂದ ಮಾರ್ಚ್​​ 15ರ ತನಕ ಜಿಲ್ಲಾಡಳಿತ ನಿರ್ಬಂಧ ಹೇರಿತ್ತು. ಆದರೆ ಈಗ ಜಲಪಾತ ವೀಕ್ಷಣೆಗಿದ್ದ ನಿರ್ಬಂಧ ತೆರವು ಮಾಡಲಾಗಿದೆ. ಜೋಗ ನಿರ್ವಹಣಾ ಪ್ರಾಧಿಕಾರ ಪ್ರವೇಶದ್ವಾರ ಬಿಟ್ಟು ಉಳಿದೆಡೆಯಿಂದ ಫಾಲ್ಸ್​ ವೀಕ್ಷಣೆಗೆ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: ಜೋಗ ಜಲಪಾತ ವೀಕ್ಷಣೆ ನಿರ್ಬಂಧ ತೆರವು: ಹೊಸ ವರ್ಷಕ್ಕೆ ಪ್ರವಾಸಿಗರಿಗೆ ಶಿವಮೊಗ್ಗ ಜಿಲ್ಲಾಡಳಿತ ಗಿಫ್ಟ್

ತೀರ್ಥ ಕ್ಷೇತ್ರ, ದೇವಾಲಯಗಳಲ್ಲೂ ಭಕ್ತರ ದಂಡು

ಹೊಸ ವರ್ಷಾಚರಣೆ ಹಿನ್ನೆಲೆ ದೇಗುಲಗಳು ಕೂಡ ಭಕ್ತರಿಂದ ತುಂಬಿ ತುಳುಕುತ್ತಿವೆ. ಮಂತ್ರಾಲಯಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಕೊಪ್ಪಳಕ್ಕೂ ಪ್ರವಾಸಿಗರ ದಂಡೇ ಬರುತ್ತಿದೆ. ವಿದೇಶಿಗರ ಸಂಖ್ಯೆಯೂ ಹೆಚ್ಚಾಗಿದ್ದು, ರೆಸಾರ್ಟ್‌ಗಳೆಲ್ಲ ಭರ್ತಿಯಾಗಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ