AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 10 ಕಾಲರಾ ಕೇಸ್ ಪತ್ತೆ, ಬೀದಿಬದಿ ಹೋಟೆಲ್​ಗಳ ತೆರವಿಗೆ ಆಗ್ರಹ!

ರಾಜ್ಯದಲ್ಲಿ ಬಿಸಿಲಿನ ತಾಪಕ್ಕೆ ಜನರು ಬಸವಳಿದಿದ್ದಾರೆ. ಬಿರು ಬಿಸಿಲಿಗೆ ಹೈರಾಣದ ಜನರು ಯಾವಾಗ ಮಳೆ ಬರುತ್ತೊ ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಶನಿವಾರ (ಏ.06) ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ದೃಡಪಟ್ಟಿವೆ.

ರಾಜ್ಯದಲ್ಲಿ 10 ಕಾಲರಾ ಕೇಸ್ ಪತ್ತೆ, ಬೀದಿಬದಿ ಹೋಟೆಲ್​ಗಳ ತೆರವಿಗೆ ಆಗ್ರಹ!
ಕಾಲರಾ
ವಿವೇಕ ಬಿರಾದಾರ
|

Updated on:Apr 08, 2024 | 6:34 AM

Share

ಬೆಂಗಳೂರು, ಏಪ್ರಿಲ್​ 07: ರಣಬಿಸಿಲು ನೆತ್ತಿ ಸುಡುತ್ತಿದೆ. ನೀರಿಲ್ಲದೆ ಜನ ಹೈರಾಣಾಗಿದ್ದಾರೆ. ನೆರಳು-ನೀರು ಸಿಕ್ಕರೆ ಸಾಕಪ್ಪ ಅನ್ನೋ ಹೊತ್ತಲ್ಲೇ, ಬೆಂಗಳೂರಿಗರಿಗೆ (Bengaluru) ಮತ್ತೊಂದು ಕಂಟಕ ಎದುರಾಗಿದೆ. ತಾಪಮಾನ ಏರಿಕೆ, ನೀರಿನ ಕೊರತೆಗೆ ಬಸವಳಿದ ಜನರು ಕಾಲರಾದ (Cholera) ವಿರುದ್ಧ ಹೋರಾಡುವ ಸ್ಥಿತಿ ಎದುರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಕಾಲರಾ ಆತಂಕವನ್ನು ಸೃಷ್ಟಿಸಿದೆ. ಬೊಮ್ಮನಹಳ್ಳಿಯಲ್ಲಿ 3ನೇ ಪ್ರಕರಣ ಪತ್ತೆಯಾಗಿದ್ದು, ರಾಜ್ಯದಲ್ಲಿ ಕಾಲರಾ ಕೇಸ್​ಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ ಒಂದರಲ್ಲೇ ಬರೋಬ್ಬರಿ 9 ಕೇಸ್​ಗಳ ದೃಡಪಟ್ಟಿವೆ. ಇತ್ತ ರಾಮನಗರದ ಓರ್ವ ವ್ಯಕ್ತಿಗೆ ಕಾಲರಾ ಚಿಕಿತ್ಸೆ ಕೊಡಿಲಾಗುತ್ತಿದೆ.

ಇನ್ನು ನಿನ್ನೆಯಷ್ಟೇ (ಏ.06) ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ದೃಡಪಟ್ಟಿತ್ತು. ಎಚ್ಚೆತ್ತುಕೊಂಡಿರುವ ಅಧಿಕಾರಿಗಳು BCM ಹಾಸ್ಟೆಲ್​ನ ಆಹಾರ ಪದಾರ್ಥಗಳನ್ನು ಪರೀಕ್ಷೆಗೆ ಕಳಿಸಿದ್ದಾರೆ. ಆದರೆ, ಹಾಸ್ಟೆಲ್​ನಲ್ಲಿ ಇರಲು ಭಯಪಡ್ತಿರುವ ವಿದ್ಯಾರ್ಥಿನಿಯರು ಬೇರೆ ಕಡೆಗೆ ಶಿಫ್ಟ್ ಆಗುತ್ತಿದ್ದಾರೆ.

ಬೀದಿಬದಿ ಹೋಟೆಲ್​ಗಳ ತೆರವಿಗೆ ಆಗ್ರಹ, ಬಿಬಿಎಂಪಿಗೆ ಪತ್ರ

ಇತ್ತ ಬೀದಿಬದಿ ಹೋಟೆಲ್​ಗಳ ತೆರವಿಗೆ ಆಗ್ರಹ ಕೇಳಿಬಂದಿದೆ. ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘ ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆಗೆ ಪತ್ರ ಬರೆದಿದೆ. 30 ಸಾವಿರ ಬೀದಿಬದಿ ಹೋಟೆಲ್​ಗಳಿದ್ದು, ಇವುಗಳಿಂದ ಜನರ ಆರೋಗ್ಯ ಹದಗೆಡುತ್ತಿದೆ ಎಂದು ಆರೋಪಿಸಿದೆ.

ಇದನ್ನೂ ಓದಿ:  ಇಬ್ಬರು ವೈದ್ಯಕೀಯ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ: ಸ್ವಯಂ ಪ್ರೇರಿತ ಪ್ರಕರಣ ದಾಖಲು

ಕಾಲರಾಗೆ ಕಡಿವಾಣ ಹಾಕಲು ಪಾಲಿಕೆ ಅಲರ್ಟ್

ಬೆಂಗಳೂರಿನಲ್ಲಿ 3 ಕೇಸ್​ಗಳು ಪತ್ತೆಯಾಗಿರುವ ಬೆನ್ನಲ್ಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಆರೋಗ್ಯ ವಿಭಾಗದ ವಿಶೇಷ ಆಯುಕ್ತರು ಜಲಮಂಡಳಿಗೆ ಪತ್ರ ಬರೆದಿದ್ದಾರೆ. ಜಲಮೂಲಗಳ ಕ್ಲೋರಿನೇಷನ್ ಮಟ್ಟ ಪರೀಕ್ಷಿಸಲು ಸೂಚನೆ ಕೊಟ್ಟಿದ್ದಾರೆ.

ಮುಂದುವರೆದ ಜಲಗಂಡಾಂತರ, ಡ್ರಮ್​ಗಳಲ್ಲಿ ನೀರು ಶೇಖರಿಸುತ್ತಿರುವ ಜನ!

ಕಾಲರಾ ಕಾಡುತ್ತಿರುವ ಹೊತ್ತಲ್ಲೇ ಜಲಗಂಡಾಂತರ ಮುಂದುವರೆದಿದೆ. ನೀರಿಲ್ಲದೆ ಬೀಡಿ ಕೆಂಗೇರಿ ಬಳಿ ಇರುವ ಕಾರ್ಮಿಕರ ಕಾಲೋನಿ ಜನ ಹೈರಾಣಾಗಿದ್ದಾರೆ. ದೊಡ್ಡ ದೊಡ್ಡ ಡ್ರಮ್​ಗಳಲ್ಲಿ ನೀರು ಶೇಖರಿಸಿ ಬಳಕೆ ಮಾಡಲಾಗುತ್ತಿದ್ದು, ಕಾಲರ ಮತ್ತಷ್ಟು ಹರಡುವ ಭೀತಿ ಎದುರಾಗಿದೆ.

ಒಟ್ಟಿನಲ್ಲಿ ಒಂದುಕಡೆ ನೀರಿಲ್ಲದ ಪರದಾಟ, ಮತ್ತೊಂದ್ಕಡೆ ರಣಬಿಸಿಲಿನ ತಾಪ. ಈ ನಡುವೆ ಕಾಲರಾದ ಕಾಟ ಎದುರಾಗಿದ್ದು ಜನರಿಗೆ ದಿಕ್ಕು ತೋಚದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:40 pm, Sun, 7 April 24

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್