AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಚೊಂಬು ಜಾಹೀರಾತು ನೀಡುವ ಮೂಲಕ ಕಾಂಗ್ರೆಸ್ ಪಕ್ಷವು ಅವಹೇಳನ ಮಾಡಿದೆ. ಈ ಬಗ್ಗೆ ಕ್ಷಮೆ ಕೋರುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿಯು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಚೊಂಬು ಜಾಹೀರಾತು ನಂತರ ರಾಜ್ಯದಲ್ಲಿ ಜಾಹೀರಾತು ಸಮರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​​ನ ಚೊಂಬು ಜಾಹೀರಾತಿನಿಂದ ಕೆರಳಿದ್ದ ಬಿಜೆಪಿ ಕೂಡ ಹಲವು ಜಾಹೀರಾತುಗಳನ್ನು ನೀಡಿತ್ತು.

ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಚೊಂಬು ಜಾಹೀರಾತಿನ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಗಣಪತಿ ಶರ್ಮಾ
|

Updated on: Apr 25, 2024 | 8:27 AM

Share

ಬೆಂಗಳೂರು, ಏಪ್ರಿಲ್ 25: ಬಿಜೆಪಿ (BJP) ವಿರುದ್ಧ ಅವಹೇಳನಕಾರಿ ಜಾಹೀರಾತು (Advertisement) ನೀಡಿರುವ ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿ ಚುನಾವಣಾ ಆಯೋಗಕ್ಕೆ (Election Commission) ಬಿಜೆಪಿ ಮನವಿ ಮಾಡಿದೆ. ಚೊಂಬು ಜಾಹೀರಾತು ನೀಡುವ ಮೂಲಕವಾಗಿ ಅವಹೇಳನ ಮಾಡಿದ್ದ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬುಧವಾರ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಿಗೆ ಬಿಜೆಪಿ ದೂರು ಸಲ್ಲಿಸಿದೆ.

‘ಇದು ಚೊಂಬು’ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ಪಕ್ಷವು ಪತ್ರಿಕೆಗಳಿಗೆ ಜಾಹೀರಾತು ನೀಡಿತ್ತು. ಅದರ ಫೋಟೋದೊಂದಿಗೆ ದೂರು ನೀಡಿರುವ ಬಿಜೆಪಿ, ‘ಚೊಂಬು’ ಪದವು ಕನ್ನಡದ ಆಡುಭಾಷೆಯಾಗಿದೆ ಮತ್ತು ಇದನ್ನು ‘ಮೋಸಗೊಳಿಸುವುದು ಅಥವಾ ಖಾಲಿ ಭರವಸೆಗಳನ್ನು’ ನೀಡುವುದನ್ನು ಸೂಚಿಸಲು ಬಳಸಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಿಗಿದೆ.

ಈ ಜಾಹೀರಾತಿನ ಉದ್ದೇಶವು ಕೇಂದ್ರ ಸರ್ಕಾರವು ರಾಜ್ಯಕ್ಕೆ ಮೋಸ ಮಾಡಿದೆ ಎಂಬುದನ್ನು ಬಿಂಬಿಸುವುದಾಗಿದೆ. ಆದರೆ, ಕಾಂಗ್ರೆಸ್​ ಈ ಆರೋಪ ಸಂಪೂರ್ಣ ಸುಳ್ಳು ಎಂದು ದೂರಿನಲ್ಲಿ ಬಿಜೆಪಿ ಉಲ್ಲೇಖಿಸಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಚೊಂಬು ಜಾಹೀರಾತು ನಂತರ ರಾಜ್ಯದಲ್ಲಿ ಜಾಹೀರಾತು ಸಮರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​​ನ ಚೊಂಬು ಜಾಹೀರಾತಿನಿಂದ ಕೆರಳಿದ್ದ ಬಿಜೆಪಿ, 2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚೊಂಬು ಹಿಡಿದುಕೊಂಡು ಬಯಲುಶೌಚಕ್ಕೆ ಹೋಗುತ್ತಿರುವ ಮತ್ತು 2023ರಲ್ಲಿ ಚೊಂಬು ಹಿಡಿದುಕೊಂಡು ಶೌಚಾಲಯಕ್ಕೆ ಹೋಗುತ್ತಿರುವ ಎಡಿಟೆಡ್ ಚಿತ್ರವನ್ನು ಟ್ವೀಟ್ ಮಾಡಿ ‘ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ಲೋಕಸಭೆ ಚುನಾವಣೆ ಪ್ರಚಾರದ ಅಖಾಡದಲ್ಲಿ ಚೊಂಬು, ಚಿಪ್ಪು, ಟಾಯ್ಲೆಟ್ಟು: ಟೀಕೆಗಳಲ್ಲೂ ಕ್ರಿಯಾಶೀಲತೆ ಉಂಟು!

ನಂತರ ಉಭಯ ಪಕ್ಷಗಳ ಜಾಹೀರಾತು ಸಮರ ಮುಂದುವರಿದಿದ್ದು, ‘ಕಾಂಗ್ರೆಸ್ ಡೇಂಜರ್’ ಎಂಬ ಜಾಹೀರಾತನ್ನು ಬಿಜೆಪಿ ನೀಡಿತ್ತು. ಬಳಿಕ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಜನತೆ ಕೈಗೆ ಚಿಪ್ಪು ನೀಡಲಾಗಿದೆ ಎಂದು ಜಾಹೀರಾತು ನೀಡಿತ್ತು. ನಂತರ ಕಾಂಗ್ರೆಸ್ ಪಿಕ್​ಪಾಕೆಟ್ ಮಾಡುತ್ತಿದೆ ಎಂದು ಜಾಹೀರಾತು ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ