AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲರಾ ಹೆಚ್ಚಳಕ್ಕೆ ಕಾರಣವಾಯ್ತಾ ವಾಟರ್​ ಟ್ಯಾಂಕರ್ ನೀರು? ಪರಿಶೀಲನೆಗೆ ಮುಂದಾದ ಆರೋಗ್ಯ ಇಲಾಖೆ

ಬೇಸಿಗೆಯಲ್ಲಿ ಕುಡಿಯುವ ನೀರಿನಿಂದ ವಾಂತಿ-ಭೇದಿ, ಕಾಲರಾ, ಕರುಳು ಬೇನೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿ ಹರಡುತ್ತವೆ. ಹೀಗಾಗಿ, ರೋಗಗಳ ಹರಡುವಿಕೆ ತಡೆಗೆ ಕುಡಿಯುವ ನೀರು ಪರಿಶೀಲನೆ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಬೇಕು ಆರೋಗ್ಯ ಇಲಾಖೆ ಮುಂದಾಗಿದೆ.

ಕಾಲರಾ ಹೆಚ್ಚಳಕ್ಕೆ ಕಾರಣವಾಯ್ತಾ ವಾಟರ್​ ಟ್ಯಾಂಕರ್ ನೀರು? ಪರಿಶೀಲನೆಗೆ ಮುಂದಾದ ಆರೋಗ್ಯ ಇಲಾಖೆ
ಆರೋಗ್ಯ ಸೌಧ
Vinay Kashappanavar
| Updated By: ವಿವೇಕ ಬಿರಾದಾರ|

Updated on: Apr 14, 2024 | 3:11 PM

Share

ಬೆಂಗಳೂರು, ಏಪ್ರಿಲ್​ 14: ನಗರದಲ್ಲಿನ ಬಿರು ಬಿಸಲಿನಿಂದ ಸನ್​ ಸ್ಟ್ರೋಕ್​​​ ಜೊತೆಗೆ ಕಾಲರಾ ಜನರಲ್ಲಿ ಆತಂಕ ಹೆಚ್ಚಿಸಿದೆ. ಹೆಚ್ಚುತ್ತಿರುವ ಕಾಲರಾ (Cholera) ರೋಗಕ್ಕೆ ಕಲುಷಿತ ನೀರು ಮತ್ತು ಆಹಾರ ಕಾರಣ ಅಂತ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ನೀರಿನ ಶುದ್ಧತೆ ಪರಿಶೀಲನೆಯ ಸಲಹೆಗೂ ಆರೋಗ್ಯ ಇಲಾಖೆ (Health Department) ಮುಂದಾಗಿದೆ. ಸದ್ಯ ಬೆಂಗಳೂರಿನ ಜನರಿಗೆ ನೀರಿನ ಭವಣೆಯ ಬಿಸಿ ತಟ್ಟಿದ್ದು ಕುಡಿಯುವ ನೀರಿಗಾಗಿ ಟ್ಯಾಂಕರ್ (Water Tanker) ಮೊರೆ ಹೋಗಿದ್ದಾರೆ. ಆದರೆ ಈ ಟ್ಯಾಂಕರ್ ನೀರು ಜನರ ಆರೋಗ್ಯದ ಮೇಲೆ ವೆತಿರಿಕ್ತ ಸಮಸ್ಯೆಗೆ ಕಾರಣವಾಗುತ್ತಿದ್ದು, ಕಾಲರಾ ಏರಿಕೆಗೂ ಕಾರಣವಾಗುತ್ತಿದೆ.

ಮಳೆಯ ಅಭಾವ, ಅಂತರ್ಜಲ ಕುಸಿತದ ಪರಿಣಾಮ ಕೆರೆ, ಕಟ್ಟೆ, ಬೋರ್‌ವೆಲ್‌ಗಳಲ್ಲಿ ನೀರು ಇಂಗಿಹೋಗಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕುಡಿವ ನೀರಿಗೆ ಭಾರಿ ಅಭಾವ ತಲೆದೋರಿದ್ದು ವಾಟರ್ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರು ಸದ್ಯ ಜನರ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ ಆರೋಗ್ಯ ಇಲಾಖೆ ಟ್ಯಾಂಕರ್ ನೀರು ಶುದ್ಧತೆಯ ಪರಿಶೀಲನೆಗೆ ಮುಂದಾಗಿದೆ.

ಸಾಕಷ್ಟು ಏರಿಯಾಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಯಾಗುತ್ತಿದೆ. ಆದರೆ ಈ ನೀರು ಎಷ್ಟು ಶುದ್ಧವಾಗಿದೆ? ಈ ನೀರಿನಿಂದಲೇ ಕಾಲರಾ ಪ್ರಕರಣ ಹಾಗೂ ವಾಂತಿ ಬೇಧಿ ಏರಿಕೆಯಾಗುತ್ತಿದೆಯಾ?  ಎಂಬ ಪ್ರಶ್ನೆ ಆರೋಗ್ಯ ಇಲಾಖೆ ಅಧಿಕಾರಿಗಳಲ್ಲಿ ಮೂಡಿದೆ. ಹೀಗಾಗಿ ರಾಜಧಾನಿಯಲ್ಲಿನ ವಾಟರ್​ ಟ್ಯಾಂಕರ್ ಸೇರಿದ್ದಂತೆ ಕುಡಿಯುವ ನೀರಿನ ಮೂಲಗಳ ಶುದ್ಧತೆ ಪರಿಶೀಲನೆಗೆ ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ 10 ಕಾಲರಾ ಕೇಸ್ ಪತ್ತೆ, ಬೀದಿಬದಿ ಹೋಟೆಲ್​ಗಳ ತೆರವಿಗೆ ಆಗ್ರಹ!

ಕಾಲರಾ ಹರಡುವ ಪ್ರಮುಖ ಮೂಲವಾದ ಕುಡಿಯುವ ನೀರಿನ ಶುದ್ಧತೆಯ ಅಧ್ಯಯನಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಮತ್ತೊಂದಡೆ ವೈದ್ಯರು ನೀರಿನ ಸ್ವಚ್ಛತೆಯ ಬಗ್ಗೆ ಹೆಚ್ಚಿನ ಗಮನ ಹರಿಸವಂತೆ ಹಾಗೂ ನೀರನ್ನು ಕಾಯಿಸಿ ಆರಿಸಿ ಕುಡಿಯುವಂತೆ ಸಲಹೆ ನೀಡಿದ್ದಾರೆ.

ಕಲುಷಿತ ನೀರಿನ ಸೇವನೆಯಿಂದ ಹರಡುವ ಸೋಂಕುಗಳು..!

ಕಾಲರಾ

ಟೈಫಾಯಿಡ್ ಜ್ವರ

ಹೆಪಟೈಟಿಸ್ ಎ

ವಾಂತಿ ಭೇದಿ

ಗಿಯಾರ್ಡಿಯಾಸಿಸ್

ಅತಿಸಾರ ಕಾಮಾಲೆ

ಚರ್ಮರೋಗ

ನೀರಿನಿಂದ ಹರಡುವ ರೋಗಗಳನ್ನು ತಡೆಗಟ್ಟುವ ಕ್ರಮಗಳು

ಶುದ್ಧ ಮತ್ತು ಸುರಕ್ಷಿತ ನೀರು ಕುಡಿಯಬೇಕು

ಸಂಸ್ಕರಿಸಿದ ನೀರು ಕುಡಿಯಬೇಕು ನೈರ್ಮಲ್ಯಕಾಪಾಡಿಕೊಳ್ಳಬೇಕು

ನೀರಿನ ಮಾಲಿನ್ಯವನ್ನು ತಡೆಗಟ್ಟಬೇಕು

ಕಾದು ಆರಿಸಿದ ನೀರು ಸೇವನೆ ಮಾಡಬೇಕು

ಉತ್ತಮವಾದ ಆಹಾರ ಸೇವನೆಮಾಡಬೇಕು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ