AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​

ಈಗಷ್ಟೇ 18 ವರ್ಷ ಆಗಿರುವವರಿಗೆ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 2006 ರ ಜನವರಿ 1 ಮತ್ತು ಮಾರ್ಚ್ 31 ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 12, 2024 | 7:43 AM

Share

ಬೆಂಗಳೂರು, ಏಪ್ರಿಲ್ 12: ಈ ವರ್ಷ 18 ತುಂಬಿದ 70,000 ಮಂದಿ ಲೋಕಸಭೆ ಚುವಾಣೆಯಲ್ಲಿ (Lok Sabha Elections) ಮತದಾನ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ (Election Commission) ತಿಳಿಸಿದೆ. ಕೊನೇ ಕ್ಷಣದ ಪ್ರಯತ್ನದಲ್ಲಿ ಇವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ 2 ಸಾವಿರಕ್ಕೂ ಹೆಚ್ಚು ಯುವ ಮತದಾರರು ಪಟ್ಟಿಗೆ (Voters List) ಸೇರ್ಪಡೆಯಾಗುವ ನಿರೀಕ್ಷೆ ಇದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಮೂಲಕ ಈಗಷ್ಟೇ 18 ವರ್ಷ ಆದವರಿಗೂ ಚುನಾವಣಾ ಆಯೋಗ ಬರ್ತ್​​ಡೇ ಗಿಫ್ಟ್​ ನೀಡುತ್ತಿದೆ.

2006 ರ ಜನವರಿ 1 ಮತ್ತು ಮಾರ್ಚ್ 31 ರ ನಡುವೆ ಜನಿಸಿದವರನ್ನು ಮುಂದಿನ ಕೆಲ ದಿನಗಳಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಒಂದು ವೇಳೆ, ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ‘ಫಾರ್ಮ್ 6’ ರ ನಿಬಂಧನೆಯ ಅಡಿಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾನೂನಿನಲ್ಲಿ ಏನಿದೆ?

ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರವೂ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ‘ಫಾರ್ಮ್ 6’ರ ಅಡಿಯಲ್ಲಿ ಮುಂಗಡ ಅರ್ಜಿ ಸಲ್ಲಿಸುವ ಅವಕಾಶವಿದೆ. ಈ ಕುರಿತು ಮೊದಲ ಬಾರಿಗೆ ಮಾರ್ಚ್ 21 ರಂದು ವರದಿ ಮಾಡಿದಾಗ, ಸುಮಾರು 50,000 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ತಿಳಿಸಿದೆ. ಉಳಿದ ಅರ್ಜಿಗಳು ನಂತರ ಸಲ್ಲಿಕೆಯಾಗಿದ್ದವು.

ಒಟ್ಟಾರೆಯಾಗಿ, ರಾಜ್ಯದಲ್ಲಿ ಜನವರಿಯಿಂದ 10 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಪೈಕಿ 5.9 ಲಕ್ಷ ಮಂದಿ ಏಪ್ರಿಲ್ 26ರಂದ ಮತದಾನ ನಡೆಯುವ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಕರ್ನಾಟಕದ ಪ್ರಮುಖ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತ್ತು ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ