AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​

ಈಗಷ್ಟೇ 18 ವರ್ಷ ಆಗಿರುವವರಿಗೆ ಚುನಾವಣಾ ಆಯೋಗ ಗುಡ್ ನ್ಯೂಸ್ ನೀಡಿದೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 2006 ರ ಜನವರಿ 1 ಮತ್ತು ಮಾರ್ಚ್ 31 ರ ನಡುವೆ ಜನಿಸಿದವರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.

ಈಗಷ್ಟೇ 18 ಆದವರಿಗೂ ಮತದಾನಕ್ಕೆ ಅವಕಾಶ: ಚುನಾವಣಾ ಆಯೋಗದಿಂದ ಬರ್ತ್​ಡೇ ಗಿಫ್ಟ್​​​
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 12, 2024 | 7:43 AM

Share

ಬೆಂಗಳೂರು, ಏಪ್ರಿಲ್ 12: ಈ ವರ್ಷ 18 ತುಂಬಿದ 70,000 ಮಂದಿ ಲೋಕಸಭೆ ಚುವಾಣೆಯಲ್ಲಿ (Lok Sabha Elections) ಮತದಾನ ಮಾಡಲಿದ್ದಾರೆ ಎಂದು ಚುನಾವಣಾ ಆಯೋಗ (Election Commission) ತಿಳಿಸಿದೆ. ಕೊನೇ ಕ್ಷಣದ ಪ್ರಯತ್ನದಲ್ಲಿ ಇವರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ 2 ಸಾವಿರಕ್ಕೂ ಹೆಚ್ಚು ಯುವ ಮತದಾರರು ಪಟ್ಟಿಗೆ (Voters List) ಸೇರ್ಪಡೆಯಾಗುವ ನಿರೀಕ್ಷೆ ಇದೆ ಎಂದು ಚುನಾವಣಾ ಆಯೋಗ ಹೇಳಿದೆ. ಈ ಮೂಲಕ ಈಗಷ್ಟೇ 18 ವರ್ಷ ಆದವರಿಗೂ ಚುನಾವಣಾ ಆಯೋಗ ಬರ್ತ್​​ಡೇ ಗಿಫ್ಟ್​ ನೀಡುತ್ತಿದೆ.

2006 ರ ಜನವರಿ 1 ಮತ್ತು ಮಾರ್ಚ್ 31 ರ ನಡುವೆ ಜನಿಸಿದವರನ್ನು ಮುಂದಿನ ಕೆಲ ದಿನಗಳಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ. ಒಂದು ವೇಳೆ, ಈಗಷ್ಟೇ 18 ವರ್ಷ ಆದವರಿಗೆ ಈಗ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ನೀಡದಿದ್ದರೆ ಅವರು ಮೊದಲ ಬಾರಿಗೆ ಮತ ಚಲಾಯಿಸಲು ಮುಂದಿನ ಚುನಾವಣೆಯವರೆಗೆ ಕಾಯಬೇಕಾಗುತ್ತದೆ. ಹೀಗಾಗಿ ‘ಫಾರ್ಮ್ 6’ ರ ನಿಬಂಧನೆಯ ಅಡಿಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕಾನೂನಿನಲ್ಲಿ ಏನಿದೆ?

ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದ ನಂತರವೂ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ‘ಫಾರ್ಮ್ 6’ರ ಅಡಿಯಲ್ಲಿ ಮುಂಗಡ ಅರ್ಜಿ ಸಲ್ಲಿಸುವ ಅವಕಾಶವಿದೆ. ಈ ಕುರಿತು ಮೊದಲ ಬಾರಿಗೆ ಮಾರ್ಚ್ 21 ರಂದು ವರದಿ ಮಾಡಿದಾಗ, ಸುಮಾರು 50,000 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ‘ಟೈಮ್ಸ್ ಆಫ್ ಇಂಡಿಯಾ’ ವರದಿ ತಿಳಿಸಿದೆ. ಉಳಿದ ಅರ್ಜಿಗಳು ನಂತರ ಸಲ್ಲಿಕೆಯಾಗಿದ್ದವು.

ಒಟ್ಟಾರೆಯಾಗಿ, ರಾಜ್ಯದಲ್ಲಿ ಜನವರಿಯಿಂದ 10 ಲಕ್ಷಕ್ಕೂ ಹೆಚ್ಚು ಮತದಾರರನ್ನು ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ. ಈ ಪೈಕಿ 5.9 ಲಕ್ಷ ಮಂದಿ ಏಪ್ರಿಲ್ 26ರಂದ ಮತದಾನ ನಡೆಯುವ ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ: ಎಲೆಕ್ಷನ್‌ ಡ್ಯೂಟಿಗೆ ಹೋಗುತ್ತಿದ್ದಾಗ ಅಪಘಾತ; ಕರ್ನಾಟಕ ಪೊಲೀಸ್‌ ಸೇರಿ ಇಬ್ಬರ ಸಾವು

ಕರ್ನಾಟಕದ ಪ್ರಮುಖ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣ ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತ್ತು ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಮೇ 7 ರಂದು ಮತದಾನ ನಡೆಯಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?