AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಲಿನ ಜೊತೆಗೆ ತರಕಾರಿ ಬೆಲೆಯೂ ಏರಿಕೆ: ಗ್ರಾಹಕರಿಗೆ ಹುಳಿಯಾದ ನಿಂಬೆಹಣ್ಣು ದರ

ಬೇಸಿಗೆ ಆರಂಭದಿಂದಲೂ ನಿಂಬೆ ಹಾಗೂ ಸೌತೆಕಾಯಿಗಳ ಬೆಲೆ‌ ಏರಿಕೆಯಾಗಿದ್ದು, ಒಂದು ಕೆಜಿ ಸೌತೆಕಾಯಿ ಬೆಲೆ ಬರೋಬ್ಬರಿ 62 ರೂಪಾಯ ಇದೆ. ಬಿಸಿಲು ಹೆಚ್ಚಿರುವ ಕಾರಣ ಸೌತೆಕಾಯಿ ಬಳ್ಳಿ ಹಬ್ಬುತ್ತಿಲ್ಲ. ಹೂ ಬಿಟ್ಟರೂ ಮೊಗ್ಗು ಬಾರದೆ ಒಣಗಿ ಹೋಗುತ್ತಿವೆ. ಇದರಿಂದ ಮಾರುಕಟ್ಟೆಗೆ ಸೌತೆಕಾಯಿ ಪೂರೈಕೆಯಾಗುತ್ತಿಲ್ಲ.

ಬಿಸಿಲಿನ ಜೊತೆಗೆ ತರಕಾರಿ ಬೆಲೆಯೂ ಏರಿಕೆ: ಗ್ರಾಹಕರಿಗೆ ಹುಳಿಯಾದ ನಿಂಬೆಹಣ್ಣು ದರ
ತರಕಾರಿ
Poornima Agali Nagaraj
| Edited By: |

Updated on:May 08, 2024 | 12:43 PM

Share

ಬೆಂಗಳೂರು, ಮೇ 08: ರಾಜಾಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ‌ ದಿನಕ್ಕೆ ಬಿಸಿಲಿನ ತಾಪಮಾನ (Temperature) ಏರಿಕೆಯಾಗುತ್ತಿದ್ದು, ರೈತರಿಗೆ ಸಾಕಷ್ಡು ಹೊಡೆತ ಬೀಳುತ್ತಿದ್ದು, ಇದರಿಂದಾಗಿ ತರಕಾರಿಗಳ ಬೆಲೆ (Vegetables Price) ದುಬಾರಿಯಾಗುದ್ದು, ಕಳೆದ ವಾರಕ್ಕೆ ಹೋಲಿಕೆ‌ ಮಾಡಿದರೇ 10 ರೂ. ಏರಿಕೆಯಾಗಿವೆ. ಬಿಸಿಲಿನ ಪ್ರಮಾಣ ಹೆಚ್ಚಾದಂತೆ ತರಕಾರಿಗಳ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಬರುವ ಅಲ್ಪ ತರಕಾರಿಗಳು ಹೆಚ್ಚಿನ ಬೆಲೆ ಏರಿಕೆ, ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ ತರಕಾರಿಗಳ‌ ಬೆಲೆ‌ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.‌ ಹಾಗಿದ್ದರೆ ಇವತ್ತಿನ ತರಕಾರಿಗಳ‌ ಬೆಲೆ ಎಷ್ಟು ಅಂತ ನೋಡುವುದಾದರೇ..

ತರಕಾರಿ ಬೆಲೆ (ಕೆಜಿ)
ತರಕಾರಿ ಹಿಂದಿನ ಬೆಲೆ (ರೂ) ಇಂದಿನ ಬೆಲೆ (ರೂ)
ಗಜ್ಜರಿ 80 100
ಬೀನ್ಸ್ 120 250
ನವಿಲುಕೋಸು 60 80
ಬದನೆಕಾಯಿ 40 60
ದಪ್ಪ ಮೆಣಸಿನಕಾಯಿ 60 80
ಬಟಾಣಿ 160 200
ಬೆಂಡೆಕಾಯಿ 50 60
ಟೊಮಾಟೋ 20 30
ಆಲೂಗೆಡ್ಡೆ 30 49
ಹಾಗಲಕಾಯಿ 60 76
ಸೋರೆಕಾಯಿ 40 52
ಬೆಳ್ಳುಳ್ಳಿ 300 320
ಶುಂಠಿ 180 195
ಪಡವಲಕಾಯಿ 30 46
ಹೀರೆಕಾಯಿ 50 62
ಹಸಿರುಮೆಣಸಿಕಾಯಿ 80 92
ಬಿಟ್ರೋಟ್ 40 45
ಈರುಳ್ಳಿ 20 24

ಇದು ಒಂದು ಕಡೆಯಾದರೆ ಮತ್ತೊಂದೆಡೆ ಸೌತೆಕಾಯಿ ಹಾಗೂ ನಿಂಬೆಹಣ್ಣಿನ ದರ ದಿನದಿಂದ ದಿನಕ್ಕೆ ಕೈಗೆಟುಕಲಾರದಷ್ಟು ಏರಿಕೆಯಾಗುತ್ತಿದೆ.‌ ಬೇಸಿಗೆ ಆರಂಭದಿಂದಲೂ ನಿಂಬೆ ಹಾಗೂ ಸೌತೆಕಾಯಿಗಳ ಬೆಲೆ‌ ಏರಿಕೆಯಾಗಿದ್ದು, ಒಂದು ಕೆಜಿ ಸೌತೆಕಾಯಿ ಬೆಲೆ ಬರೋಬ್ಬರಿ 62 ರೂಪಾಯ ಇದೆ. ಬಿಸಿಲು ಹೆಚ್ಚಿರುವ ಕಾರಣ ಸೌತೆಕಾಯಿ ಬಳ್ಳಿ ಹಬ್ಬುತ್ತಿಲ್ಲ. ಹೂ ಬಿಟ್ಟರೂ ಮೊಗ್ಗು ಬಾರದೆ ಒಣಗಿ ಹೋಗುತ್ತಿವೆ. ಇದರಿಂದ ಮಾರುಕಟ್ಟೆಗೆ ಸೌತೆಕಾಯಿ ಪೂರೈಕೆಯಾಗುತ್ತಿಲ್ಲ. ಈ ಹಿಂದೆ ಚಿಕ್ಕಬಳ್ಳಾಪುರ, ಕೋಲಾರ, ಅನೇಕಲ್, ಸರ್ಜಾಪುರ ಸೇರಿ ಬೆಂಗಳೂರು ಸುತ್ತ- ಮುತ್ತಲಿನ ಪ್ರದೇಶದಿಂದ ನಗರಕ್ಕೆ ಸೌತೆಕಾಯಿ ಬರುತ್ತಿತ್ತು. ಆದರೆ ಈಗ, ಈ ಭಾಗದಿಂದ ಬರುತ್ತಿದ್ದ ಸೌತೆಕಾಯಿ ಕಡಿಮೆಯಾಗಿದ್ದು ಬೆಲೆ ಏರಿಕೆಯಾಗಿದೆ. ‌ಜೊತೆಗೆ ನಿಂಬೆ ಹಣ್ಣಿನ ಬೆಲೆಯೂ ಏರಿಕೆಯಾಗಿದ್ದು ಒಂದು ನಿಂಬೆ ಹಣ್ಣಿಗೆ 9 ರೂ. ಇದೆ.

ಇದನ್ನೂ ಓದಿ: Vegetable Price Hike; ತರಕಾರಿ ಬೆಲೆ ದಿಢೀರ್ ಏರಿಕೆ, ಜನ ಹೈರಾಣು

ಬಿಸಿಲು ತುಂಬ ಜಾಸ್ತಿ ಇದೆ.‌ ಈ ಬಿಸಿಲಿನಿಂದಾಗಿ ತರಕಾರಿಗಳ ಬೆಲೆ ತುಂಬ ದುಬಾರಿಯಾಗಿದೆ.‌ ಸೌತೆಕಾಯಿ ಹಾಗೂ ನಿಂಬೆ ಹಣ್ಣಿನ ಬೆಲೆಯಂತೂ ಕೇಳುವ ಹಾಗೆ ಇಲ್ಲ. ಅಷ್ಟೊಂದು ಜಾಸ್ತಿಯಾಗಿದೆ.‌ ಸೌತೆಕಾಯಿ ಇವತ್ತು ಕೆಜಿಗೆ 60 ರೂ. ಆಗಿದೆ.‌ ನಿಂಬೆಹಣ್ಣು 3 ರೂಪಾಯಿಂದ 8 ರೂ. ಏರಿಕೆಯಗಿದೆ. ಹೀಗಾಗಿ ಬೆಲೆ ಕೇಳಿಯೇ ಸುಸ್ತಾಗುತ್ತಿದೆ ಎಂದು ಗ್ರಾಹಕರು ಹೇಳಿದರು.

ಒಟ್ಟಿನಲ್ಲಿ ಬಿಸಿಲಿನ ಪರಿಣಾಮ ತರಕಾರಿಗಳ ಬೆಲೆ ಏರಿಕೆಯಾಗುತ್ತಲೇ ಇದ್ದು, ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ ಬೆಲೆ ದುಪ್ಪಟ್ಟಾಗುವ ಸಾಧ್ಯಾತೆ ಇದೆ. ವರುಣ ದಯೆ ತೋರಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:03 am, Wed, 8 May 24

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!