AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಇಳಿಕೆ: ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 25ರಷ್ಟೂ ಇಲ್ಲ ನೀರು

ರಾಜ್ಯದಲ್ಲಿ ಬಿಸಿಲಿನ ಬೇಗೆ ಮೇರೆ ಮೀರಿದ್ದು, ನೀರಿನ ಅಭಾವ ಕೂಡ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ, ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಪ್ರಮಾಣ ಭಾರಿ ಕಡಿಮೆಯಾಗಿರುವುದು ತಿಳಿದು ಬಂದಿದೆ. ಸಂಗ್ರಹ ಸಾಮರ್ಥ್ಯಕ್ಕೆ ಹೋಲಿಸಿದರೆ ರಾಜ್ಯದ ಬಹುತೇಕ ಎಲ್ಲ ಜಲಾಶಯಗಳಲ್ಲಿ ಮಟ್ಟ ಬಹಳ ಕಡಿಮೆಯಾಗಿದೆ.

ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಇಳಿಕೆ: ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 25ರಷ್ಟೂ ಇಲ್ಲ ನೀರು
ಜಲಾಶಯಗಳಲ್ಲಿ ನೀರಿನ ಮಟ್ಟ ಭಾರಿ ಇಳಿಕೆ
Follow us
Ganapathi Sharma
|

Updated on: Apr 26, 2024 | 11:25 AM

ಬೆಂಗಳೂರು, ಏಪ್ರಿಲ್ 26: ಮಳೆ ಕೊರತೆ, ಭೀಕರ ಬರ ಮತ್ತು ಬಿಸಿಲಿನ ತೀವ್ರೆತಿಂದಾಗಿ ರಾಜ್ಯದ (Karnataka) ಪ್ರಮುಖ ಜಲಾಶಯಗಳಲ್ಲಿ (Reservoirs) ನೀರಿನ ಮಟ್ಟವು ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 25 ಕ್ಕಿಂತಲೂ ಕಡಿಮೆಯಾಗಿರುವುದು ತಿಳಿದುಬಂದಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ರಾಜ್ಯದ 14 ಪ್ರಮುಖ ಜಲಾಶಯಗಳು ಈಗ 217.75 ಟಿಎಂಸಿ ಅಡಿ ನೀರನ್ನು ಹೊಂದಿವೆ. ಅವುಗಳ ಒಟ್ಟು ಸಂಗ್ರಹ ಸಾಮರ್ಥ್ಯ 895.62 ಟಿಎಂಸಿ ಅಡಿ. ಹಾಗಾಗಿ ಈಗಿನ ಸಂಗ್ರಹ ಒಟ್ಟು ಸಂಗ್ರಹ ಸಾಮರ್ಥ್ಯದ ಶೇ 25ಕ್ಕಿಂತ ಕಡಿಮೆಯಾಗಿದೆ.

ಕಳೆದ ವರ್ಷ ಇದೇ ಅವಧಿಯಲ್ಲಿ ರಾಜ್ಯದ ಜಲಾಶಯಗಳಲ್ಲಿ 269 ಟಿಎಂಸಿ ಅಡಿ ನೀರು ಇತ್ತು. ತುಂಗಭದ್ರೆಯಲ್ಲಿ 105.79 ಟಿಎಂಸಿ ಅಡಿ ನೀರು ಸಂಗ್ರಹವಾಗಿದ್ದರೆ 3.77 ಟಿಎಂಸಿ ಅಡಿ ನೀರು ಇದೆ. ಕೆಆರ್​ಎಸ್ ಮತ್ತು ಕಬಿನಿಯಲ್ಲಿ ಕ್ರಮವಾಗಿ 11.74 ಟಿಎಂಸಿ ಅಡಿ ಮತ್ತು 7.72 ಟಿಎಂಸಿ ಅಡಿ ನೀರು ಇದ್ದು, ಇವುಗಳ ಒಟ್ಟು ಸಂಗ್ರಹ ಸಾಮರ್ಥ್ಯ ಕ್ರಮವಾಗಿ 49.45 ಟಿಎಂಸಿ ಅಡಿ ಮತ್ತು 19.52 ಟಿಎಂಸಿ ಅಡಿ ಆಗಿದೆ.

ಸಾಮಾನ್ಯವಾಗಿ ಮಾರ್ಚ್‌ನಿಂದ ಮೇ ವರೆಗೆ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗುತ್ತದೆ. ಜಲಾಶಯಗಳು ವರ್ಷಕ್ಕೆ ಎರಡು ಬಾರಿ, ಆಗಸ್ಟ್ ಮತ್ತು ಅಕ್ಟೋಬರ್ ಅಥವಾ ನವೆಂಬರ್​​ನಲ್ಲಿ ತುಂಬಿರುತ್ತವೆ. ಇದರಿಂದ ರೈತರಿಗೆ ವರ್ಷದಲ್ಲಿ ಎರಡು ಬೆಳೆ ತೆಗೆಯಲು ಅನುಕೂಲವಾಗುತ್ತದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಮಾಜಿ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಆದರೆ, ಈ ವರ್ಷ ಒಮ್ಮೆ ಮಾತ್ರ ಜಲಾಶಯಗಳು ಭರ್ತಿಯಾಗಿದ್ದವು. ಅಲ್ಲದೆ ರಾಜ್ಯದ ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಜಲಾಶಯಗಳ ನೀರನ್ನು ತಮಿಳುನಾಡಿಗೆ ಬಿಡಲಾಗಿದೆ. ಈ ಎಲ್ಲಾ ಅಂಶಗಳು ಕರ್ನಾಟಕದ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕಡಿಮೆಯಾಗಲು ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29ರಿಂದ 3 ದಿನ ಮಳೆ, ಯೆಲ್ಲೋ ಅಲರ್ಟ್​

ಬಿಸಿಲಿನ ಬೇಗೆಯಿಂದ ಆವಿಯಾಗುವಿಕೆಯ ಮೂಲಕವೂ ನೀರು ನಷ್ಟವಾಗುತ್ತದೆ. ಈ ಬಾರಿ ಬಿರು ಬೇಸಿಗೆಯಿಂದಾಗಿ ನಷ್ಟವೇ ಹೆಚ್ಚು. ಕರ್ನಾಟಕವು ಏಪ್ರಿಲ್‌ನಲ್ಲಿ ಸುಮಾರು 50 ಮಿಮೀ ಮಳೆಯನ್ನು ಪಡೆಯುತ್ತದೆ, ಆದರೆ ಆವಿಯಾಗುವಿಕೆಯಿಂದ ದಿನಕ್ಕೆ ಸುಮಾರು 5 ಮಿಮೀ ನಷ್ಟವಾಗುತ್ತದೆ. ಇದರರ್ಥ ತಿಂಗಳಿಗೆ 150 ಮಿಮೀ ನೀರು ನಷ್ಟವಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
1 ನಿಮಿಷದಲ್ಲಿ 10 ಯೋಗದ ಆಸನ: ವಿಶ್ವ ದಾಖಲೆ ಬರೆದ ಹಾಸನದ ಬಾಲಕಿ
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಬಿಜೆಪಿ ನಾಯಕರಿಗೆ ಸರ್ಕಾರದ ಜನಪ್ರಿಯತೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ಪಲ್ಟಿ ಹೊಡೆದು ಶತಕದ ಸಂಭ್ರಮಾಚರಣೆ ಮಾಡಿದ ಪಂತ್
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
ನೀವು ಉತ್ತಮ ಕೆಲಸಗಾರರೆಂದು ಕೇಳಸಿಕೊಂಡಿದ್ದೇನೆ ಅಂತ ಡಿಸಿಗೆ ಹೇಳಿದ ಸೋಮಣ್ಣ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
73ನೇ ವಯಸ್ಸಿನಲ್ಲೂ 51 ಪುಶ್-ಅಪ್ ಮಾಡಿದ ತಮಿಳುನಾಡು ರಾಜ್ಯಪಾಲ
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ರಿಷಭ್ ಪಂತ್​ಗೆ ಕೈ ಮುಗಿದ ರಾಹುಲ್; ವಿಡಿಯೋ ವೈರಲ್
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಐಸಿಯು ಬಗ್ಗೆ ಮಾತಾಡಲು ಸಂಸದ ಸುಧಾಕರ್​ಗೆ ನಾಚಿಕೆಯಾಗಬೇಕು: ಸಚಿವ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಊಹಿಸಲಾಗದ ದುಃಖ ಬರಲಿದೆ, ಜನವರಿ ಒಳಗೆ ದೊಡ್ಡ ಗಂಡಾಂತರ: ಕೋಡಿ ಶ್ರೀ ಭವಿಷ್ಯ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ
ಕಾಂಗ್ರೆಸ್ ಸರ್ಕಾರ ಬಡವರನ್ನೂ ಬಿಡದೆ ಸುಲಿಗೆ ಮಾಡುತ್ತಿದೆ: ಅಶೋಕ