AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೂ ಸಿಕ್ಕಿಲ್ಲ ಕೋವಿಡ್ ರಿಸ್ಕ್ ಭತ್ಯೆ; ಇಂದಿನಿಂದ ರೆಸಿಡೆಂಟ್ ವೈದ್ಯರ ಮುಷ್ಕರ; ತುರ್ತು ಸೇವೆ-ಕೊವಿಡ್ ಸೇವೆ ಇರುತ್ತದಾ?

Karnataka News: ರೆಸಿಡೆಂಟ್ ವೈದ್ಯರ ಮುಷ್ಕರದಿಂದಾಗಿ ರಾಜ್ಯ ವ್ಯಾಪಿ ಒಪಿಡಿ ಸೇವೆಯಲ್ಲಿ ಇಂದು ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಜೀವ ಪಣಕ್ಕಿಟ್ಟು ಕೆಲಸ ಮಾಡಿದ ನಿವಾಸಿ ವೈದ್ಯರಿಗೆ ಇದುವರೆಗೂ ಕೋವಿಡ್ ರಿಸ್ಕ್ ಭತ್ಯೆ ಸಿಕ್ಕಿಲ್ಲ. ಶಸ್ತ್ರ ಚಿಕಿತ್ಸೆ ಕಲಿಯದೇ ಇದ್ರೂ ಫೀಸ್ ಕಡಿತ ಮಾತ್ರ ಮಾಡ್ತಿಲ್ಲ ಸರ್ಕಾರ. ನಿವಾಸಿ ವೈದ್ಯರು ಕೋವಿಡ್ ಚಿಕಿತ್ಸೆ ನೀಡೋದ್ರಲ್ಲಿ ಒಂದೂವರೆ ವರ್ಷ ಕಳೆದಿದ್ದಾರೆ.

ಇನ್ನೂ ಸಿಕ್ಕಿಲ್ಲ ಕೋವಿಡ್ ರಿಸ್ಕ್ ಭತ್ಯೆ; ಇಂದಿನಿಂದ ರೆಸಿಡೆಂಟ್ ವೈದ್ಯರ ಮುಷ್ಕರ; ತುರ್ತು ಸೇವೆ-ಕೊವಿಡ್ ಸೇವೆ ಇರುತ್ತದಾ?
ಇನ್ನೂ ಸಿಕ್ಕಿಲ್ಲ ಕೋವಿಡ್ ರಿಸ್ಕ್ ಭತ್ಯೆ; ರಾಜ್ಯಾದ್ಯಂತ ಇಂದಿನಿಂದ ರೆಸಿಡೆಂಟ್ ವೈದ್ಯರ ಮುಷ್ಕರ; ತುರ್ತು ಸೇವೆ-ಕೊವಿಡ್ ಸೇವೆ ಇರುತ್ತದಾ?
TV9 Web
| Edited By: ಸಾಧು ಶ್ರೀನಾಥ್​|

Updated on:Nov 29, 2021 | 11:22 AM

Share

ಬೆಂಗಳೂರು: ದೇಶ-ವಿದೇಶ ಸೇರಿದಂತೆ ರಾಜ್ಯದಲ್ಲೂ ಕೊರೊನಾ ಮಹಾಮಾರಿಯ ಮೂರನೆಯ ಅಲೆ ಧುತ್ತನೆ ಎದುರಾಗಿದೆ. ರಾಜ್ಯ ಸರಕಾರ ಸಹ ಮೂರನೆಯ ಅಲೆಯನ್ನು ಹಿಮ್ಮೆಟ್ಟಿಸಲು ಸಕಲ ಸಿದ್ಧತೆ ನಡೆಸುತ್ತಿದೆ. ಆದರೆ ಈ ಮಧ್ಯೆ ರಾಜ್ಯ ಸರ್ಕಾರ ಈ ಹಿಂದೆ ಕೋವಿಡ್​ ಕಾಲದಲ್ಲಿ ಅಮೂಲ್ಯ ಸೇವೆ ಸಲ್ಲಿಸಿರುವ ರೆಸಿಡೆಂಟ್ ವೈದ್ಯರುಗಳಿಗೆ ಸಲ್ಲಬೇಕಿದ್ದ ಕೋವಿಡ್ ರಿಸ್ಕ್ ಭತ್ಯೆಯನ್ನೂ ಇನ್ನೂ ನೀಡಿಲ್ಲವಂತೆ. ಹಾಗಾಗಿ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಇಂದಿನಿಂದ ರೆಸಿಡೆಂಟ್ ವೈದ್ಯರು (Resident Doctor) ಮುಷ್ಕರ ಹೂಡಿದ್ದಾರೆ. ತುರ್ತು ಸೇವೆ ಮತ್ತು ಕೊವಿಡ್ ಸೇವೆಯನ್ನು ಹೊರತುಪಡಿಸಿ ಆಸ್ಪತ್ರೆ ಒಪಿಡಿ ಬಂದ್ ಮಾಡಿ ರೆಸಿಡೆಂಟ್ ವೈದ್ಯರು ಮುಷ್ಕರದಲ್ಲಿ ತೊಡಗಿದ್ದಾರೆ. ಹೀಗಾಗಿ ಆಸ್ಪತ್ರೆ ಒಪಿಡಿ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆಯಿದೆ. ಕೊವಿಡ್ ಮೂರನೇ ಅಲೆಯ ಆತಂಕದ ಮಧ್ಯೆ ನಿವಾಸಿ ವೈದ್ಯರಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ತಮ್ಮ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅವರು ಸರ್ಕಾರದ ವಿರುದ್ಧ ಮುಷ್ಕರ ಹೂಡಿದ್ದಾರೆ (Karnataka Resident Doctors).

ರೆಸಿಡೆಂಟ್ ವೈದ್ಯರ ಮುಷ್ಕರದಿಂದಾಗಿ ರಾಜ್ಯ ವ್ಯಾಪಿ ಒಪಿಡಿ ಸೇವೆಯಲ್ಲಿ ಇಂದು ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಜೀವ ಪಣಕ್ಕಿಟ್ಟು ಕೆಲಸ ಮಾಡಿದ ನಿವಾಸಿ ವೈದ್ಯರಿಗೆ ಇದುವರೆಗೂ ಕೋವಿಡ್ ರಿಸ್ಕ್ ಭತ್ಯೆ ಸಿಕ್ಕಿಲ್ಲ. ಶಸ್ತ್ರ ಚಿಕಿತ್ಸೆ ಕಲಿಯದೇ ಇದ್ರೂ ಫೀಸ್ ಕಡಿತ ಮಾತ್ರ ಮಾಡ್ತಿಲ್ಲ ಸರ್ಕಾರ. ನಿವಾಸಿ ವೈದ್ಯರು ಕೋವಿಡ್ ಚಿಕಿತ್ಸೆ ನೀಡೋದ್ರಲ್ಲಿ ಒಂದೂವರೆ ವರ್ಷ ಕಳೆದಿದ್ದಾರೆ. ಕೊರೋನಾ ಅವಧಿಯಲ್ಲಿ ನಿವಾಸಿ ವೈದ್ಯರು ICU ಗಳಲ್ಲಿ ದಿನನಿತ್ಯ ಕೆಲಸ ಮಾಡಿದ್ದರು. ಸರ್ಕಾರದ ಆದೇಶ ಆಗಿದ್ದರೂ ಕೋವಿಡ್ ರಿಸ್ಕ್ ಭತ್ಯೆ ನೀಡಿಲ್ಲ. ಹೀಗಾಗಿ ರಾಜ್ಯದ ಒಟ್ಟು 6 ಸಾವಿರ ನಿವಾಸಿ ವೈದ್ಯರಿಂದ ಇಂದು ಮುಷ್ಕರ ನಡೆದಿದೆ.

ಚಾಮರಾಜನಗರದ ಸಿಮ್ಸ್​ ಆಸ್ಪತ್ರೆಗೆ ಬೀಗ: ಸರ್ಕಾರ ಕಿರಿಯ ವೈದ್ಯರಿಗೆ ಗೌರವಧನ ನೀಡದ ಹಿನ್ನೆಲೆ ಕೊರೊನಾ ವೇಳೆ ಮಾಡಿದ್ದ ಸೇವೆಗೆ ಗೌರವಧನ ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಕಿರಿಯ ವೈದ್ಯರಿಂದ ಪ್ರತಿಭಟನೆ ನಡೆದಿದೆ. ಚಾಮರಾಜನಗರದ ಸಿಮ್ಸ್​ ಆಸ್ಪತ್ರೆಗೆ ಬೀಗ ಹಾಕಿ, ವೈದ್ಯರು ಧರಣಿ ನಡೆಸಿದ್ದಾರೆ. 6 ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ, 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಾಮರಾಜನಗರ ತಾಲೂಕಿನ ಯಡಪುರ ಬಳಿಯ ಆಸ್ಪತ್ರೆ ಎದುರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

Published On - 10:48 am, Mon, 29 November 21

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ