AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​

ಬೆಳಗಾವಿ ಹಾಗೂ ಗಡಿ ಭಾಗದ ಕೆಲ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯ ಆಗ್ರಹ. ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನಾವು ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ.

ಮರಾಠಿಗರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ಬದ್ಧ: ವಿವಾದದ ಕಿಡಿ ಹೊತ್ತಿಸಿದ ಉದ್ಧವ್​
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Jan 18, 2021 | 11:25 AM

Share

ಮುಂಬೈ: ಮರಾಠಿ ಭಾಷಿಕರು ಹೆಚ್ಚಿರುವ ಕರ್ನಾಟಕ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ನೀಡಿದ ಹೇಳಿಕೆ ವಿವಾದದ ಕಿಡಿ ಹೊತ್ತಿಸಿದೆ.

ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಸಚಿವಾಲಯ ಟ್ವೀಟ್​ ಮಾಡಿದೆ. ಈ ಟ್ವೀಟ್​ನಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದೆ. ಕರ್ನಾಟಕ ವಶದಲ್ಲಿರುವ ಮರಾಠಿ ಭಾಷಿಗರ ಹಾಗೂ ಸಾಂಸ್ಕೃತಿಕ ಪ್ರದೇಶವನ್ನು ಮತ್ತೆ ಮಹಾರಾಷ್ಟ್ರದ ಸುಪರ್ದಿಗೆ ತರುವುದು ಗಡಿ ಹೋರಾಟದಲ್ಲಿ ಮೃತಪಟ್ಟವರಿಗೆ ನಾವು ನೀಡುವ ಗೌರವ. ಈ ಕಾರ್ಯ ಮಾಡಲು ನಾವು ಮಾಡಲು ಬದ್ಧರಾಗಿದ್ದೇವೆ. ಈ ಭರವಸೆಯೊಂದಿಗೆ ಹುತಾತ್ಮರಿಗೆ ಗೌರವ ಸೂಚಿಸುತ್ತಿದ್ದೇವೆ ಎಂದು ಟ್ವೀಟ್​ನಲ್ಲಿ ಬರೆಯಲಾಗಿದೆ.

ಬೆಳಗಾವಿ ಹಾಗೂ ಗಡಿ ಭಾಗದ ಕೆಲ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಿದ್ದು ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯ ಆಗ್ರಹ. ಆದರೆ, ಬೆಳಗಾವಿಯನ್ನು ಯಾವುದೇ ಕಾರಣಕ್ಕೂ ನಾವು ಬಿಟ್ಟುಕೊಡುವುದಿಲ್ಲ ಎಂದು ಕರ್ನಾಟಕ ಸ್ಪಷ್ಟಪಡಿಸಿದೆ. ಹೀಗಿರುವಾಗಲೇ, ಮಾಹಾರಾಷ್ಟ್ರ ಪದೇಪದೇ ಈ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದೆ.

ಬೆಂಗಳೂರು-ಬೆಳಗಾವಿ ಇಂಡಿಗೋ ಏರ್​ಲೈನ್ಸ್​​​ಗೆ ಕನ್ನಡವೇಕೆ ಅಪಥ್ಯ? ಹಿರಿಯ ಅಧಿಕಾರಿ ಬೇಸರ

Published On - 8:17 pm, Sun, 17 January 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More