AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯಗೆ ಅಶೋಕ್ ಮಹತ್ವದ ಪತ್ರ: ವಿಪಕ್ಷ ನಾಯಕರ ಪತ್ರದಲ್ಲೇನಿದೆ?

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​.ಅಶೋಕ್, ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸುವಂತೆ ಪತ್ರ ಬರೆಯಲಾಗಿದ್ದು, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಲಾಗಿದೆ.

ಸಿಎಂ ಸಿದ್ದರಾಮಯ್ಯಗೆ ಅಶೋಕ್ ಮಹತ್ವದ ಪತ್ರ: ವಿಪಕ್ಷ ನಾಯಕರ ಪತ್ರದಲ್ಲೇನಿದೆ?
ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​.ಅಶೋಕ್ ಪತ್ರ
ಕಿರಣ್​ ಹನಿಯಡ್ಕ
| Updated By: ಭಾವನಾ ಹೆಗಡೆ|

Updated on: Oct 17, 2025 | 3:21 PM

Share

ಬೆಂಗಳೂರು, ಅಕ್ಟೋಬರ್ 17: ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ  (CM Siddaramaiah) ವಿಪಕ್ಷ ನಾಯಕ ಆರ್​.ಅಶೋಕ್ ಪತ್ರ ಬರೆದು ಮನವಿ ಮಾಡಿದ್ದಾರೆ. ವಿಧಾನಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ಶಿಫಾರಸ್ಸಿನ ಅನ್ವಯ ರಾಜ್ಯದಲ್ಲಿ ಅಂಗನವಾಡಿಗಳಿಗೆ ಸರಬರಾಜಾಗುತ್ತಿರುವ ಕಳಪೆ ಆಹಾರವನ್ನು ಕೂಡಲೇ ನಿಲ್ಲಿಸುವಂತೆ ಪತ್ರ ಬರೆಯಲಾಗಿದ್ದು, ಮೊದಲಿನಂತೆ ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆಯಾದ ಜನತಾ ಬಜಾರ್ ಮೂಲಕ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದ್ದಾರೆ.

ಆರ್ ಅಶೋಕ್ ಬರೆದ ಪತ್ರದಲ್ಲೇನಿದೆ?

‘ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯು ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಸರಬರಾಜು ಆಗುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವುದಲ್ಲದೆ ಈ ಹಿಂದೆ ಅಂಗನವಾಡಿಗಳಿಗೆ ಒಳ್ಳೆಯ ಆಹಾರ ಪೂರೈಸಲಾಗುತ್ತಿತ್ತು ಎಂದೂ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ ಇದೀಗ ಪೌಡರ್ ರೂಪದಲ್ಲಿ ಆಹಾರ ಸರಬರಾಜಾಗುತ್ತಿದ್ದು ಅದರಲ್ಲಿ ಪೌಷ್ಟಿಕಾಂಶ ಇದೆಯೋ ಇಲ್ಲವೋ ಗೊತ್ತಿಲ್ಲ. ಔಷಧಿ ರೂಪದಲ್ಲಿ ಆಹಾರ ಕೊಡುತ್ತಿದ್ದಾರೆ. ಗುಣಮಟ್ಟವಿಲ್ಲದ ಅಲ್ಪ ಪ್ರಮಾಣದ ಆಹಾರ ಪೂರೈಸುತ್ತಿರುವುದು ಕಂಡುಬಂದಿದೆ. ಹಾಗಾಗಿ ಮೊದಲು ಏನು ಆಹಾರ ಪೂರೈಸಲಾಗುತ್ತಿತ್ತೋ ಆ ರೀತಿಯ ಆಹಾರವನ್ನು ಈಗಲೂ ಸಹ ಪೂರೈಕೆ ಮಾಡಬೇಕೆಂದು ಸಮಿತಿಯು ತನ್ನ ಅಭಿಪ್ರಾಯ ವ್ಯಕ್ತಪಡಿಸಿರುವುದು ಕರ್ನಾಟಕ ರಾಜ್ಯದ ಬಡಮಕ್ಕಳ ಆರೋಗ್ಯಪೂರ್ಣ ಬೆಳವಣಿಗೆಯ ದೃಷ್ಟಿಯಿಂದ ಐತಿಹಾಸಿಕವಾದ ಹಾಗೂ ಮಹತ್ವದ ತೀರ್ಮಾನವಾಗಿದೆ.

ಇದನ್ನೂ ಓದಿ ಅನುಮತಿ ಇಲ್ಲದೆ ನಡೆಯುವ ನಮಾಜ್​ ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್​ ಪತ್ರ

ಈ ಹಿನ್ನೆಲೆಯಲ್ಲಿ ಇದೀಗ ಸರಬರಾಜು ಮಾಡುತ್ತಿರುವ ಸಂಸ್ಥೆಗೆ ನೀಡಿರುವ ಆದೇಶವನ್ನು ರದ್ದುಪಡಿಸಿ, ಸರ್ಕಾರಿ ಸ್ವಾಮ್ಯದ ಸಹಕಾರಿ ಸಂಸ್ಥೆ ಜನತಾ ಬಜಾರ್ ಮೂಲಕ ಉತ್ತಮ ಗುಣಮಟ್ಟದ ಆಹಾರ ಪದಾರ್ಥಗಳನ್ನು ಸರಬರಾಜು ಮಾಡಲು ಆದೇಶ ನೀಡುವುದು ಎಲ್ಲ ರೀತಿಯಲ್ಲೂ ಉತ್ತಮ ಕ್ರಮ ಆಗುತ್ತದೆ.

ಹಾಗಾಗಿ ಕರ್ನಾಟಕ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿ-2024-25 ಸಮಿತಿಯ ಶಿಫಾರಸ್ಸಿನ ಅನ್ವಯ ಕೂಡಲೇ ಅಗತ್ಯ ಕ್ರಮ ತೆಗೆದುಕೊಳ್ಳಬೇಕೆಂದು ತಮ್ಮಲ್ಲಿ ಕೋರುತ್ತೇನೆ ‘ ಎಂದು ಅಶೋಕ್ ತಮ್ಮ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ