AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ

ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ ಮನವಿ ಮಾಡಿದ್ದಾರೆ. ಆದರೆ, ಸದ್ಯ ಈ ನಿವಾಸ ಡಿಸಿಎಂ ಡಿಕೆ‌ ಶಿವಕುಮಾರ್​​ಗೆ ಹಂಚಿಕೆಯಾಗಿದೆ. ಇದೇ ನಿವಾಸದಲ್ಲಿದ್ದು ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ.

ಸರ್ಕಾರಿ ನಿವಾಸಕ್ಕೆ ಆರ್ ಅಶೋಕ ಮನವಿ: ಡಿಕೆ ಶಿವಕುಮಾರ್​​ಗೆ ಹಂಚಿಕೆಯಾಗಿರುವ ನಿವಾಸಕ್ಕೇ ಬೇಡಿಕೆ
ಆರ್ ಅಶೋಕ
ಕಿರಣ್​ ಹನಿಯಡ್ಕ
| Edited By: |

Updated on: Jan 18, 2024 | 7:52 AM

Share

ಬೆಂಗಳೂರು, ಜನವರಿ 18: ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಬಿಜೆಪಿ ನಾಯಕ ಆರ್. ಅಶೋಕ (R Ashoka) ಸರ್ಕಾರಿ ನಿವಾಸ ಒದಗಿಸುವಂತೆ ಮನವಿ ಮಾಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಅಶೋಕ ಅವರು ವಿಧಾನಸಭೆ ವಿಪಕ್ಷ ನಾಯಕರಾಗಿ ಎರಡು ತಿಂಗಳು ಪೂರ್ಣಗೊಳ್ಳುತ್ತಿದೆ. ನಿರ್ದಿಷ್ಟ ಮೂರು ಸರ್ಕಾರಿ ಬಂಗಲೆ (Government Residence) ಕೇಳಿರುವ ಅಶೋಕ, ಡಿಸಿಎಂ ಮತ್ತು ಇಬ್ಬರು ಸಚಿವರಿಗೆ ಈಗಾಗಲೇ ಹಂಚಿಕೆಯಾಗಿರುವ ಮನೆಗಳಿಗೇ ಬೇಡಿಕೆ ಇಟ್ಟಿದ್ದಾರೆ.

ಬೆಂಗಳೂರಿನ ಕುಮಾರಕೃಪಾ ದಕ್ಷಿಣದಲ್ಲಿರುವ ನಂಬರ್ 1 ನಿವಾಸ ಒದಗಿಸುವಂತೆ ಅಶೋಕ ಮನವಿ ಮಾಡಿದ್ದಾರೆ. ಆದರೆ, ಸದ್ಯ ಈ ನಿವಾಸ ಡಿಸಿಎಂ ಡಿಕೆ‌ ಶಿವಕುಮಾರ್​​ಗೆ ಹಂಚಿಕೆಯಾಗಿದೆ. ಇದೇ ನಿವಾಸದಲ್ಲಿದ್ದು ಸಿದ್ದರಾಮಯ್ಯ ಎರಡು ಬಾರಿ ಸಿಎಂ ಆಗಿದ್ದಾರೆ.

ರೇಸ್ ಕೋರ್ಸ್ ರಸ್ತೆಯಲ್ಲಿರುವ ರೇಸ್ ವ್ಯೂ ಕಾಟೇಜ್​ನಲ್ಲಿ ನಂಬರ್ 1 ಮತ್ತು ನಂಬರ್ 3 ನಿವಾಸಕ್ಕೆ ಕೂಡಾ ಅಶೋಕ್ ಬೇಡಿಕೆ ಇಟ್ಟಿದ್ದಾರೆ. ಸದ್ಯ ರೇಸ್ ವ್ಯೂ ಕಾಟೇಜ್​​ನ ನಂಬರ್ 1 ನಿವಾಸ ಸಚಿವ ಎಂಬಿ ಪಾಟೀಲ್​​ಗೆ ಹಂಚಿಕೆಯಾಗಿದೆ. ನಂಬರ್ 3 ನಿವಾಸ ಸಚಿವ ಪ್ರಿಯಾಂಕ್ ಖರ್ಗೆಗೆ ಹಂಚಿಕೆಯಾಗಿದೆ.

ಇದನ್ನೂ ಓದಿ: ಇಂದಿರಾ ಗಾಂಧಿ ಕುಟುಂಬಕ್ಕೆ ಗೋಪಾಷ್ಟಮಿ ಶಾಪ?; ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯ ಅಸಲಿಯತ್ತೇನು?

ಜಯಮಹಲ್ ರಸ್ತೆಯಲ್ಲಿರುವ ಸರ್ಕಾರಿ ಬಂಗಲೆ ಆಯ್ದುಕೊಳ್ಳುವಂತೆ ವಿಪಕ್ಷ ನಾಯಕರಿಗೆ ಸರ್ಕಾರ ಸಲಹೆ ನೀಡಿದೆ. ಆದರೆ, ಅದಕ್ಕೆ ಒಪ್ಪದ ಅಶೋಕ ನಿರ್ದಿಷ್ಟ ಮೂರು ಬಂಗಲೆಗಳ ಪೈಕಿ ಒಂದು ಬಂಗಲೆಯನ್ನೇ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್​ಗೆ ಹಂಚಿಕೆಯಾಗಿರುವ ನಿವಾಸದ ಮೇಲೆಯೇ ಅಶೋಕ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ