AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಬಂದು ನಿಂತಂತಾದ ಚುನಾವಣೆ: ಈಗ ನರೇಗಾ ಕಾಮಗಾರಿಗೆ ಫುಲ್ ಡಿಮ್ಯಾಂಡ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಜೊತೆ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದ ಜನ ಮತ್ತೆ ನರೇಗಾ ಕೆಲಸ, ಕಾರ್ಯಗLಗೆ ಮರಳಿದ್ದಾರೆ

ಮಳೆ ಬಂದು ನಿಂತಂತಾದ ಚುನಾವಣೆ: ಈಗ ನರೇಗಾ ಕಾಮಗಾರಿಗೆ ಫುಲ್ ಡಿಮ್ಯಾಂಡ್
ರಮೇಶ್ ಬಿ. ಜವಳಗೇರಾ
|

Updated on: May 19, 2023 | 7:15 AM

Share

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣಾ(Karnataka Assembly Elections 2023)  ಕಾವು ಜೋರಾಗಿ ಮಳೆ ಬಂದು ನಿಂತಂತಾಗಿದೆ. ಅಭ್ಯರ್ಥಿಗಳ ಜೊತೆ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದ ಜನ ಮತ್ತೆ ಕೆಲಸ, ಕಾರ್ಯಗಳಿಗೆ ಮರಳಿದ್ದಾರೆ. ನರೇಗಾ ಶ್ಕಾರ(nrega) ಮಗಾರಿಗೂ ಸಖತ್ ಡಿಮ್ಯಾಂಡ್ ಬಂದಿದೆ. ಹೌದು..ನರೇಗಾ ಅಂದ್ರೆ ಗ್ರಾಮೀಣ ಭಾಗದ ಜನರ ಜೀವನಾಧಾರವಾಗಿದೆ. ಜಮೀನುಗಳಲ್ಲಿ ಕೆಲಸ ಇಲ್ಲದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಆದ್ರೆ ಎಲೆಕ್ಷನ್ ಸಂದರ್ಭದಲ್ಲಿ ನರೇಗಾ ಕಾಮಗಾರಿಗೆ ಡಿಮ್ಯಾಂಡ್ ಕಡಿಮೆಯಾಗಿ ಕಾರ್ಮಿಕರೇ ಸಿಗುವುದು ಕಷ್ಟವಾಗಿತ್ತು. ಕೆಲವು ಕಡೆ ಕಾಮಗಾರಿಗಳೇ ನಿಂತು ಹೋಗಿದ್ವು. ಆದ್ರೆ ಇದೀಗ ಎಲೆಕ್ಷನ್ ಫೀವರ್ ಇಳಿಯುತಿದ್ದಂತೆ ಕಾರ್ಮಿಕರು ಕೆಲಸ, ಕಾರ್ಯಗಳಿಗೆ ವಾಪಸ್ ಆಗಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಅಬ್ಬರ, ನರೇಗಾಗೆ ಕಾರ್ಮಿಕರ ಬರ, ಏನಿದು ಅಂತೀರಾ ಈ ಸ್ಟೋರಿ ನೋಡಿ

ಬೆಳಗಾವಿಯಲ್ಲಿ ಕೆಲಸ ಸಿಗದೆ ಖಾಲಿ ಇದ್ದ ಜನರಿಗೆ ಇದೀಗ ಮತ್ತೆ ನರೇಗಾನೇ ಜೀವನಾಧಾರವಾಗಿ ಮಾರ್ಪಟ್ಟಿದೆ. ಜಿಲ್ಲೆಯಲ್ಲಿ 80 ಸಾವಿರದವರೆಗೆ ಇದ್ದ ಕಾರ್ಮಿಕರ ಸಂಖ್ಯೆ ಈಗ ದುಪ್ಪಟ್ಟಾಗಿದೆ. ಪ್ರತಿ ದಿನ 1ಲಕ್ಷ 30ಸಾವಿರದಿಂದ – 1ಲಕ್ಷ 50 ಸಾವಿರ ಕಾರ್ಮಿಕರು ಕೆಲಕ್ಕೆ ಹೋಗುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲೇ ಅತೀ ಹೆಚ್ಚು ಕಾರ್ಮಿಕರಿರುವ ಜಿಲ್ಲೆ ಎಂಬ ಹೆಗ್ಗಳಿಕೆಗೂ ಬೆಳಗಾವಿ ಪಾತ್ರವಾಗಿದೆ.

ಇನ್ನೂ ರಾಜ್ಯದಲ್ಲೇ ಅತೀ ಹೆಚ್ಚು ನರೇಗಾ ಕಾಮಗಾರಿಯಲ್ಲಿ ಜನರಿಗೆ ಕೆಲಸ ಕೊಡುವ ಜಿಲ್ಲೆ ಬೆಳಗಾವಿ. ಜಿಲ್ಲೆಯಲ್ಲಿ 5ಲಕ್ಷ ಜನರಿಗೆ ಕೆಲಸ ಕೊಡಲಾಗಿದೆ. ಜೂನ್ ತಿಂಗಳಲ್ಲಿ ಮಳೆ ಆರಂಭ ಆಗುವವರೆಗೂ ಕೆಲಸ ಮಾಡಿಸುವುದಾಗಿ ಸಿಇಒ ಹೇಳಿದ್ದಾರೆ.

ಒಟ್ಟಾರೆ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿಗಳ ಜತೆಗೆ ಪ್ರಚಾರದ ಭರಾಟೆಯಲ್ಲಿ ತೊಡಗಿದ್ದವರು ಇದೀಗ ನರೇಗಾ ಕೆಲಸದತ್ತ ಮುಖ ಮಾಡಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ