AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾವಳಿ: ಪಟಾಕಿ ಮಾರಾಟಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಸುತ್ತೋಲೆ

ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ್ದ ಎರಡು ಪಟಾಕಿ ದುರಂತದಿಂದ ಸಾವು-ನೋವುಗಳಾಗಿದ್ದವು. ಇದರಿಂದ ಎಚ್ಚತ್ತ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ಅಲ್ಲದೆ ಸುಪ್ರಿಂ ಕೋರ್ಟ್​ನ ನಿರ್ದೇಶನವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ.

ದೀಪಾವಳಿ: ಪಟಾಕಿ ಮಾರಾಟಕ್ಕೆ ರಾಜ್ಯ ಪೊಲೀಸ್ ಇಲಾಖೆಯಿಂದ ಸುತ್ತೋಲೆ
ಪಟಾಕಿ
ಪ್ರಜ್ವಲ್ ಅಮೀನ್​, ಉಡುಪಿ
| Updated By: ವಿವೇಕ ಬಿರಾದಾರ|

Updated on: Nov 10, 2023 | 10:10 AM

Share

ಬೆಂಗಳೂರು ನ.10: ದೀಪಾವಳಿ (Deepavali) ಹಬ್ಬ ಹಿನ್ನೆಲೆಯಲ್ಲಿ ಪಟಾಕಿ (Firecrackers) ಅವಘಡ ತಡೆಯಲು ಸುಪ್ರೀಂಕೋರ್ಟ್​​ನ (Supreme Court) ಆದೇಶ ಪಾಲನೆ ಕಡ್ಡಾಯವಾಗಿದೆ. ದೀಪಾವಳಿ ಹಬ್ಬದ ಸಮಯದಲ್ಲಿ ಸಂಭವಿಸಬಹುದಾದ ಅಗ್ನಿ ಅಪಘಾತ ಹಾಗೂ ಇತರೆ ಅನಾಹುತಗಳನ್ನು ತಡೆಗಟ್ಟಲು ಹಾಗೂ ನಿಭಾಯಿಸಲು ಈ ಕೆಳಗಿನ ಸೂಚನೆಗಳನ್ನು ನೀಡಲಾಗಿದೆ.

ನಿಬಂಧನೆಗಳು ಮತ್ತು ಷರತ್ತುಗಳು

  1. ಸುಪ್ರಿಂ ಕೋರ್ಟ್​ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು.
  2. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಇರಬೇಕು ಹಾಗೂ ಕ್ಯೂಆರ್ ಕೋಡ್ ಸಹ ಇರಬೇಕು ಎಂದು
  3. ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು.
  4. ಮಳಿಗೆಗಳನ್ನು ನಿರ್ಮಿಸಲು ಉಪಯೋಗಿಸುವ ಸಾಧನಗಳು ಸುಲಭವಾಗಿ ಬೆಂಕಿ ಹತ್ತಿಕೊಳ್ಳುವ ರೀತಿಯದ್ದಾಗಿರಬಾರದು. ಸಾಧ್ಯವಾದರೆ ಬೆಂಕಿಯನ್ನು ತಡೆಗಟ್ಟುವ ಸಾಧನಗಳನ್ನೇ ನಿರ್ಮಾಣಕ್ಕೆ ಉಪಯೋಗಿಸಬೇಕು.
  5. ಪ್ರತಿಯೊಂದು ಮಳಿಗೆಗೆ ಮುಂದಿನಿಂದ ಹಾಗೂ ಹಿಂದಿನಿಂದ ಪ್ರವೇಶಿಸುವ ವ್ಯವಸ್ಥೆ ಇರಬೇಕು. ಇದರಿಂದ ಅಪಘಾತ ಸಂದರ್ಭದಲ್ಲಿ ಮಳಿಗೆಗಳನ್ನು ಪರಿಸ್ಥಿತಿಗನುಗುಣವಾಗಿ ಪ್ರವೇಶಿಸಿ, ಒಳಗಿದ್ದವರನ್ನು ರಕ್ಷಿಸಬಹುದು ಹಾಗೂ ಅವಶ್ಯಕತೆ ಬಿದ್ದರೆ ಮಳಿಗೆಗಳನ್ನು ಒಡೆದು ಒಳ ಪ್ರವೇಶಿಸಬಹುದು.
  6. ಪ್ರತಿಯೊಂದು ಮಳಿಗೆಗಳ ಗಾತ್ರ 10 x 10 ಅಡಿಗೆ ಸೀಮಿತಗೊಳಿಸಿರಬೇಕು ಮತ್ತು ಒಳಗೆ ಯಾವುದೇ ಹೆಚ್ಚಿನ ದಾಸ್ತಾನಿನ ವ್ಯವಸ್ಥೆ ಇರಬಾರದು.
  7. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 3 ಮೀಟರ್ ಅಂತರವಿರಬೇಕು ಹಾಗೂ ಮಾರಾಟ ಮಳಿಗೆಯು ಯಾವುದೇ ರಕ್ಷಿತ ಕಾರ್ಯದಿಂದ ಅಥವಾ ಸ್ಥಳದಿಂದ 50 ಮೀಟರ್ ದೂರದಲ್ಲಿರಬೇಕು.
  8. ಪ್ರತಿಯೊಂದು ಮಳಿಗೆಗಳಲ್ಲಿ ಕಚೇರಿಯಿಂದ ನೀಡಿರುವ ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು.
  9. ಕಚೇರಿಯಿಂದ ಪರವಾನಿಗೆ ಪತ್ರ ಪಡೆದಿರುವವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
  10. ಮಾರಾಟ ಮಳಿಗೆಗಳಲ್ಲಿ ಭಾರತೀಯ ತಯಾರಿಕಾ ಕಂಪನಿಗಳ ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದು. ವಿದೇಶಿ ತಯಾರಿಕ ಪಟಾಕಿಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಿದೆ.
  11. ಪ್ರತಿಯೊಂದು ಮಳಿಗೆಗಳಲ್ಲಿ ಕೆಳಗೆ ಸೂಚಿಸಿರುವ ಅಗ್ನಿ ನಿವಾರಣಾ ಹಾಗೂ ಅಗ್ನಿಶಮನ ವ್ಯವಸ್ಥೆ ಇರಬೇಕು.
  • ಪ್ರತಿಯೊಂದು ಮಳಿಗೆಯಲ್ಲಿ ಒಂದು 9 ಲೀಟರ್ ಸಾಮರ್ಥ್ಯದ ವಾಟರ್ ಪ್ರಜರ್ ಮಾದರಿ ಅಗ್ನಿನಂದಕ ಹಾಗೂ ಎರಡು ಬಕೆಟ್‌ಗಳಲ್ಲಿ ನೀರನ್ನು ಇಟ್ಟಿರಬೇಕು.
  • ಪ್ರತಿಯೊಂದು ಮಳಿಗೆ ಪಕ್ಕದಲ್ಲಿ ಎರಡು ಡ್ರಮ್‌ನಲ್ಲಿ ಕನಿಷ್ಟ 400 ಲೀಟರ್ ನೀರನ್ನು ಶೇಖರಿಸಿಟ್ಟಿರಬೇಕು ಹಾಗೂ ಬೆಂಕಿ ನಂದಿಸಲು ಸಾಕಷ್ಟು ಮರಳನ್ನು ಶೇಖರಿಸಿ ಇಟ್ಟಿರಬೇಕು.
  • ಮಳಿಗೆಯಲ್ಲಿ ಅಡಿಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಸಂಬಂಧಿತ ಸೂಚನಾ ಫಲಕವನ್ನು ಹಾಕಿರಬೇಕು.
  • ಪಟಾಕಿಗಳನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟ ಮಾಡುವುದು.
  • ರಾತ್ರಿ ವೇಳೆ ಮಳಿಗೆಯಲ್ಲಿ ಯಾರು ಮಲಗದಂತೆ ನೋಡಿಕೊಳ್ಳತಕ್ಕದ್ದು.
  • ಮಾರಾಟ ಮಳಿಗೆಗಳಲ್ಲಿ ಸೂಕ್ತ ಎಲೆಕ್ಟ್ರಿಕಲ್​ ವೈರಿಂಗ್ ಮತ್ತು ಫಿಟಿಂಗ್ಸ್ ವ್ಯವಸ್ಥೆ ಮಾಡಿಕೊಳ್ಳುವುದು.
  • ಪರವಾನಿಗೆದಾರರು ಕಚೇರಿಯಿಂದ ನೀಡಿರುವ ಪರವಾನಗಿಯಲ್ಲಿ ನಿಗಧಿಪಡಿಸಿರುವ ದಿನಾಂಕ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಮಳಿಗೆ ಹಾಕಬಾರದು.
  • ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಸೂಚನೆಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್​ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?