AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹೊತ್ತಲ್ಲೇ ಒಂದೂವರೆ ತಿಂಗಳಲ್ಲೇ 7,361 ಪಾತಕಿಗಳಿಗೆ ರೌಡಿಪಟ್ಟಿಯಿಂದ ಮುಕ್ತಿ: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿ ವಿಧಾನಸಭೆ ಎಲೆಕ್ಷನ್​ ಸಮೀಪಿಸುತ್ತಿದ್ದಂತೆಯೇ ಕೆಲ‌ ರೌಡಿ‌‌ಶೀಟರ್ ಗಳು ಫುಲ್ ಆಕ್ಟಿವ್ ಆಗಿದ್ದಾರೆ. ಚುನಾವಣೆ ಅಖಾಡಕ್ಕಿಳಿಯಲು ಕಸರತ್ತು ನಡೆಸಿದ್ದಾರೆ. ಹೀಗಾಗಿ ಕೆಲ ರೌಡಿಗಳು ಲಾಬಿ ನಡೆಸಿ ರೌಡಿ ಪಟ್ಟಿಯಿಂದ ಮುಕ್ತಿ ಪಡೆದುಕೊಂಡಿದ್ದಾರೆ.

ಚುನಾವಣೆ ಹೊತ್ತಲ್ಲೇ ಒಂದೂವರೆ ತಿಂಗಳಲ್ಲೇ 7,361 ಪಾತಕಿಗಳಿಗೆ ರೌಡಿಪಟ್ಟಿಯಿಂದ ಮುಕ್ತಿ: ಯಾವ ಜಿಲ್ಲೆಯಲ್ಲಿ ಎಷ್ಟು?
ಪ್ರಾತಿನಿಧಿಕ ಚಿತ್ರ
ರಮೇಶ್ ಬಿ. ಜವಳಗೇರಾ
|

Updated on:Feb 18, 2023 | 7:47 PM

Share

ಬೆಂಗಳೂರು: ಚುನಾವಣೆಗಳು(Elections) ಬಂದರೆ ಸಾಕು ರೌಡಿಶೀಟರ್​ಗಳನ್ನ ಕಾಯುವುದು ಪೊಲೀಸ್​ ಇಲಾಖೆಗೆ(Police Department) ಒಂದು ದೊಡ್ಡ ಸವಾಲು. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಎಲೆಕ್ಷನ್ ಸಮಯದಲ್ಲಿ ರೌಡಿಶೀಟರ್​ಗಳ ಪರೇಡ್ ನಡೆಸಿ ಎಚ್ಚರಿಕೆ ಕೊಡಲಾಗುತ್ತೆ. ಇನ್ನು ಕೆಲ ಸೂಕ್ಷ್ಮ ಪ್ರದೇಶಗಳಲ್ಲಿ ಚುನಾವಣೆ ಮುಗಿಯುವವರೆಗೆ ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಾರೆ. ಆದ್ರೆ, ಈಗ ಕರ್ನಾಟಕ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪೊಲೀಸ್​ ಇಲಾಖೆ 7,361 ಪಾತಕಿಗಳನ್ನು (criminals) ರೌಡಿಪಟ್ಟಿಯಿಂದ (rowdy sheeter) ಕೈಬಿಟ್ಟಿದೆ.

ಇದನ್ನೂ ಓದಿ: ಚುನಾವಣೆ ಹತ್ತಿರವಾಗುತ್ತಿದ್ದಂತೆ ರೌಡಿಗಳ ಮೇಲೆ ಪೊಲೀಸರ ಹದ್ದಿನಕಣ್ಣು: 35 ರೌಡಿಶೀಟರ್​ಗಳು ಮತ್ತೆ ಜೈಲಿಗೆ

ಹೌದು… 7,361 ಪಾತಕಿಗಳಿಗೆ ರೌಡಿಪಟ್ಟಿಯಿಂದ ಮುಕ್ತಿ ಸಿಕ್ಕಿದೆ. ಪೊಲೀಸ್ ಇಲಾಖೆ ಒಂದೂವರೆ ತಿಂಗಳಲ್ಲೇ(2023ರ ಜನವರಿ ಹಾಗೂ ಫೆಬ್ರವರಿ ತಿಂಗಳು) 7361 ಪಾತಕಿಗಳನ್ನು ರೌಡಿಪಟ್ಟಿಯಿಂದ ತೆಗೆದಿದೆ. ರಾಜ್ಯ ಸರ್ಕಾರವೇ ಒದಗಿಸಿದ ಅಧಿಕೃತ ಮಾಹಿತಿಯಲ್ಲಿ ಬಹಿರಂಗವಾಗಿದೆ.

ರೌಡಿಪಟ್ಟಿಯಿಂದ ಹೆಸರು ಹಿಂತೆಗೆದವರಲ್ಲಿ ಮಂಗಳೂರು, ಮಂಡ್ಯ, ಉತ್ತರ ಕನ್ನಡ ಹಾಗೂ ಬೀದರ್ ಜಿಲ್ಲೆಗಳೇ ಸಿಂಹಪಾಲು. ಮಂಗಳೂರಲ್ಲಿ 781 ಪಾತಕಿಗಳನ್ನು ರೌಡಿಪಟ್ಟಿಯಿಂದ ಕೈಬಿಟ್ಟಿರುವ ಪೊಲೀಸ್ ಇಲಾಖೆ, ಮಂಡ್ಯ ಜಿಲ್ಲೆ 610, ಉತ್ತರ ಕನ್ನಡ ಜಿಲ್ಲೆ 529, ಬೀದರ್ ಜಿಲ್ಲೆ 519, ಬೆಂಗಳೂರಿನಲ್ಲಿ 17 ಮಂದಿಯನ್ನ ರೌಡಿಪಟ್ಟಿಯಿಂದ ಕೈಬಿಡಲಾಗಿದೆ. ಇನ್ನು ಯಾವ-ಯಾವ ಜಿಲ್ಲೆಗಳಲ್ಲಿ ಎಷ್ಟು ಮಂದಿಯನ್ನು ರೌಡಿಪಟ್ಟಿಯಿಂದ ಬಿಡಲಾಗಿದೆ ಎನ್ನುವ ಮಾಹಿತಿ ಈ ಕೆಳಗಿನಂತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು?

ಮಂಗಳೂರು ನಗರ -781 ರೌಡಿಗಳ ಹೆಸರು ರೌಡಿ ಪಟ್ಟಿಯಿಂದ ಹಿಂಪಡೆಯಲಾಗಿದೆ.ಮಂಡ್ಯ – 610, ಉತ್ತರ ಕನ್ನಡ – 529, ಬೀದರ್​ – 519 , ಮೈಸೂರು – 350 , ಹಾಸನ – 350, ಚಿತ್ರದುರ್ಗ – 319, ಉಡುಪಿ – 292, ಹಾವೇರಿ – 266, ವಿಜಯಪುರ – 215, ಶಿವಮೊಗ್ಗ ಜಿಲ್ಲೆಯುಲ್ಲಿ 207 ಮಂದಿಯನ್ನು ರೌಡಿಶೀಟ್​ನಿಂದ ಮುಕ್ತಿಗೊಳಿಸಲಾಗಿದೆ.

ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ರೌಡಿಶೀಟರ್​ಗಳು ಆ್ಯಕ್ಟಿವ್ ಆಗಿದ್ದಾರೆ. ಸಮಾಜ ಸೇವಕ ಎಂದು ಮುಖ ಇಟ್ಟುಕೊಂಡು ಚುನಾವಣೆ ಅಖಾಡಕ್ಕೆ ಇಳಿಯಲು ಮುಂದಾಗಿದ್ದಾರೆ. ಇದಕ್ಕಾಗಿಯೇ ಕೆಲ ಕ್ಷೇತ್ರಗಳಲ್ಲಿ ವರ್ಕೌಟ್ ಶುರು ಮಾಡುತ್ತಿದ್ದಾರೆ. ಇನ್ನು ರೌಡಿ ಹಣೆಪಟ್ಟಿ ಇರುವುದರಿಂದ ಪಕ್ಷಗಳ ಬಿ ಫಾರಂ ಪಡೆದುಕೊಳ್ಳುವುದು ಕಷ್ಟ. ಹೀಗಾಗಿ ಕೆಲ ರೌಡಿಗಳು ರೌಡಿಶೀಟರ್ಸ್ ಗಳು ಲಾಬಿ ನಡೆಸಿ ರೌಡಿ ಪಟ್ಟಿಯಿಂದ ಮುಕ್ತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಈಗಾಗಲೇ ಚಾಮರಾಜಪೇಟೆಯಲ್ಲಿ ರೌಡಿ ಸೈಲೆಂಟ್ ಸುನೀಲ್​ ಓಣಿ ಓಣಿಗಳಲ್ಲಿ ಬ್ಯಾನರ್​ ಹಾಕಿಸಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಒಟ್ಟಿನಲ್ಲಿ ಈ ಬಾರಿ ಚುನಾವಣೆಯಲ್ಲಿ ಸದ್ದಿಲ್ಲದೇ ಕೆಲ ರೌಡಿಶೀಟರ್​ಗಳು ಅಖಾಡಕ್ಕಿಳಿಯಲು ಮುಂದಾಗಿದ್ದು, ಇದಕ್ಕೆ ರಾಜಕೀಯ ಪಕ್ಷಗಳು ಮಣೆ ಹಾಕುತ್ತಾವೆಯೇ ಎನ್ನುವುದನ್ನು ಕಾದುನೋಡಬೇಕಿದೆ.

Published On - 5:58 pm, Sat, 18 February 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ