AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಐಪಿ ಸಂಚಾರದ ವೇಳೆ ಸೈರನ್ ಬಳಕೆ ಕಡಿಮೆ ಮಾಡಲು ಕರ್ನಾಟಕ ಪೊಲೀಸರಿಗೆ ಆದೇಶ: ಕಾರಣ ಇಲ್ಲಿದೆ

ಕರ್ನಾಟಕ ಪೊಲೀಸರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂಎ ಸಲೀಂ ಮಹತ್ವದ ಸೂಚನೆ ನೀಡಿದ್ದಾರೆ. ಇನ್ನುಮುಂದೆ ಗಣ್ಯ ವ್ಯಕ್ತಿಗಳ ಸಂಚಾರದ ಸಂದರ್ಭದಲ್ಲಿ ಸೈರನ್​ ಬಳಕೆ ಕಡಿಮೆ ಮಾಡುವಂತೆ ಅವರು ನಿರ್ದೇಶನ ನೀಡಿದ್ದಾರೆ. ಇದಕ್ಕೆ ಅವರು ಕೊಟ್ಟ ಕಾರಣಗಳೇನು? ಯಾವ ವಾಹನಗಳ ಸಂಚಾರದ ವೇಳೆ ಸೈರನ್ ಬಳಕೆಗೆ ಅನುಮತಿ ಇದೆ? ಮಾಹಿತಿ ಇಲ್ಲಿದೆ.

ವಿಐಪಿ ಸಂಚಾರದ ವೇಳೆ ಸೈರನ್ ಬಳಕೆ ಕಡಿಮೆ ಮಾಡಲು ಕರ್ನಾಟಕ ಪೊಲೀಸರಿಗೆ ಆದೇಶ: ಕಾರಣ ಇಲ್ಲಿದೆ
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on: Jul 23, 2025 | 9:21 AM

Share

ಬೆಂಗಳೂರು, ಜುಲೈ 23: ಸಾರ್ವಜನಿಕ ಸ್ಥಳಗಳಲ್ಲಿ ಗಣ್ಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದೊಂದಿಗೆ ಕರ್ನಾಟಕ ಪೋಲಿಸರಿಗೆ (Karnataka Police) ಮಾಹತ್ವದ ಆದೇಶ ಹೊರಡಿಸಲಾಗಿದೆ. ವಿವಿಐಪಿಗಳ ಸಂಚಾರದ ಸಂದರ್ಭದಲ್ಲಿ ಸೈರನ್​ಗಳ ಬಳಕೆಯನ್ನು (Siren Use) ಕಡಿಮೆ ಮಾಡುವಂತೆ ರಾಜ್ಯದ ಎಲ್ಲಾ ಪೊಲೀಸ್ ಘಟಕಗಳಿಗೆ ಪೊಲೀಸ್ ಮಹಾ ನಿರ್ದೇಶಕ ಡಾ. ಎಂಎ ಸಲೀಂ (Dr AM Saleem) ಸೂಚಿಸಿದ್ದಾರೆ.

ಸೈರನ್ ಬಳಕೆ ಕಡಿಮೆ ಮಾಡುವ ಆದೇಶಕ್ಕೆ ಕಾರಣವೇನು?

ಈ ವಿಚಾರವಾಗಿ ಸಲೀಂ ಸುತ್ತೋಲೆ ಹೊರಡಿಸಿದ್ದು, ವಿವಿಐಪಿಗಳ ಸಂಚಾರದ ವೇಳೆ ಅತಿಯಾದ ಸೈರನ್ ಬಳಕೆಯಿಂದ ಅನೇಕ ಸವಾಲುಗಳು ಎದುರಾಗುತ್ತಿವೆ. ಅನಗತ್ಯವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯರು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬ ಕುರಿತು ಅಗತ್ಯವಿಲ್ಲದವರಿಗೆ ಕೂಡ ಮಾಹಿತಿ ರವಾನೆಯಾಗುತ್ತದೆ. ಇದರಿಂದ ವಿಐಪಿಗಳಿಗೆ ಮತ್ತು ಅವರ ಭದ್ರತೆಗೆ ತೊಂದರೆ ಉಂಟಾಗುವ ಅಪಾಯ ಕೂಡ ಇದೆ ಎಂದು ಅವರು ಉಲ್ಲೇಖಿಸಿದ್ದಾರೆ.

‘ದಿಢೀರ್ ಸೈರನ್​ನಿಂದ ಸಂಚಾರ ಗೊಂದಲ’

ಸಾರ್ವಜನಿಕರ ರಸ್ತೆಗಳಲ್ಲಿ ದಿಢೀರಾಗಿ ಸೈರನ್ ಮೊಳಗಿಸುವುದರಿಂದ ಬೇರೆ ವಾಹನಗಳ ಚಾಲಕರಿಗೆ ಗೊಂದಲ ಉಂಟಾಗುವ ಸಾಧ್ಯತೆ ಕೂಡ ಇದೆ. ಇದರಿಂದಾಗಿ ಅವರು ಅಡ್ಡಾದಿಡ್ಡಿ ವಾಹನ ಚಲಾಯಿಸಿ ಸಮಸ್ಯೆ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಅವರು ಸುತ್ತೋಲೆಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ
Image
ಇಂದಿನಿಂದ ಹಾಲು, ಹಾಲಿನ ಉತ್ಪನ್ನ ಮಾರಾಟ ಬಂದ್, 25 ರಂದು ವರ್ತಕರ ಮುಷ್ಕರ
Image
ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ, ಬರಲಿದೆ ಡಿಜಿಟಲ್ ಟೆಲಿಮೆಟ್ರಿ!
Image
ಬಿಕ್ಲು ಶಿವ ಕೊಲೆ ಕೇಸ್: ಹತ್ಯೆಗೆ ಪ್ರಮುಖ ಕಾರಣ ಪತ್ತೆ ಮಾಡಿದ ಪೊಲೀಸರು!
Image
ಅರಣ್ಯಗಳಲ್ಲಿ ಮೇಕೆ-ಕುರಿ, ದನಕರುಗಳನ್ನ ಮೇಯಿಸುವುದು ನಿಷೇಧ!

ಅಷ್ಟೇ ಅಲ್ಲದೆ, ವಿವಿಐಪಿಗಳ ವಾಹನಗಳ ತುರ್ತು ಚಲನೆಗೆ ಸಂಬಂಧಿಸಿದಂತೆ ‘ವಯರ್​ಲೆಸ್ ಕಮ್ಯುನಿಕೇಷನ್ ವ್ಯವಸ್ಥೆ. ಹಾಗೂ ಇತರ ತಂತ್ರಜ್ಞಾನಗಳನ್ನು ಉಪಯೋಗಿಸಿಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಅವರು ಪೊಲೀಸರಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಸಿಸಿಬಿ ಭರ್ಜರಿ ಕಾರ್ಯಚರಣೆ: ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ

ಆ್ಯಬುಬುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ದಳ ವಾಹನಗಳ ಸಂಚಾರದಂಥ ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಸೈರನ್ ಬಳಸಬೇಕು. ಈ ಆದೇಶವನ್ನು ಎಲ್ಲ ಅಧಿಕಾರಿಗಳು, ಸಿಬ್ಬಂದಿ, ಘಟಕ ಅಧಿಕಾರಿಗಳು ಪಾಲಿಸಬೇಕು ಎಂದು ಸಲಿಂ ಸೂಚನೆ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು