Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ಸೀರೆ ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು?

ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್​ಪೋಸ್ಟ್​ ನಿರ್ಮಿಸುವ ಮೂಲಕ ಚುನಾವಣಾ ಅಕ್ರಮವನ್ನ ತಡೆಗಟ್ಟಲಾಗುತ್ತಿದೆ. ಈ ಮಧ್ಯೆ ರಾಜ್ಯದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ‌ ಸಾಗಿಸುತ್ತಿದ್ದ ಹಣ ಹಾಗೂ ಸೀರೆಗಳನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ಸೀರೆ ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು?
ಅಕ್ರಮವಾಗಿ ಸಾಗಿಸುತ್ತಿದ್ದ ಸೀರೆ, ಹಣವನ್ನ ಜಪ್ತಿ ಮಾಡಿದ ಪೊಲೀಸರು
Follow us
ಕಿರಣ್ ಹನುಮಂತ್​ ಮಾದಾರ್
|

Updated on: Mar 29, 2023 | 9:52 AM

ಬೆಂಗಳೂರು: ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್​ಪೋಸ್ಟ್​ ನಿರ್ಮಿಸುವ ಮೂಲಕ ಚುನಾವಣಾ ಅಕ್ರಮವನ್ನ ತಡೆಗಟ್ಟಲಾಗುತ್ತಿದೆ. ಈ ಮಧ್ಯೆ ರಾಜ್ಯದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ‌ ಸಾಗಿಸುತ್ತಿದ್ದ ಹಣ ಹಾಗೂ ಸೀರೆಗಳನ್ನ ಜಪ್ತಿ ಮಾಡಲಾಗಿದೆ. ಹೌದು ದೇವನಹಳ್ಳಿ ಟೋಲ್​ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 7.5 ಲಕ್ಷ ನಗದು ಹಾಗೂ 531 ಸೀರೆಗಳು ಜಪ್ತಿ ಮಾಡಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಸಾಗಿಸಲಾಗುತ್ತಿದ್ದ ವಾಹನವನ್ನ ಚೆಕ್​ಪೋಸ್ಟಗಳಲ್ಲಿ ಪರಿಶೀಲಿಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ.ಮೌಲ್ಯದ ಟಾವಲ್​ಗಳು ಜಪ್ತಿ

ಯಾದಗಿರಿ: ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಟಾವಲ್​ಗಳನ್ನ ಗುರುಮಠಕಲ್‌ ಪೊಲೀಸರು ಸೀಜ್ ಮಾಡಿದ್ದಾರೆ. ತೆಲಂಗಾಣದಿಂದ ಯಾದಗಿರಿ ಕಡೆ ಸಾಗಿಸಲಾಗುತ್ತಿದ್ದ ವೇಳೆ ಪರಿಶೀಲಿಸಿದಾಗ ಪತ್ತೆಯಾಗಿದೆ. ಈ ಕುರಿತು ರವಿ ಎಂಬ ವ್ಯಕ್ತಿಯನ್ನ ಬಂಧಿಸಲಾಗಿದೆ. ಇನ್ನು ಘಟನೆ ಗುರುಮಠಕಲ್‌ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ. ಇದರ ಜೊತೆಗೆ ಗುರುಮಠಕಲ್‌ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 315 ಲೀಟರ್ ಮದ್ಯವನ್ನ ವಶಕ್ಕೆ ಪಡೆದು, ಆನಂದ ಸೇರಿ ನಾಲ್ಕು ಜನರನ್ನ ಬಂಧಿಸಲಾಗಿದೆ. ಗುರುಮಠಕಲ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನು ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಸೀರೆಗಳನ್ನ ಶಹಾಪುರ‌ ತಾಲೂಕಿನ ಮೂಡಬುಳ ಚೆಕ್ ಫೋಸ್ಟ್ ಬಳಿ ಭೀಮರಾಯನಗುಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸೀರೆಗಳನ್ನ ರಾಯಚೂರಿನಿಂದ ಕಲಬುರ್ಗಿಯ ಯಡ್ರಾಮಿಗೆ ಸಾಗಿಸಲಾಗುತ್ತಿದ್ದು, ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ

ಮುಂಡರಗಿ ರಸ್ತೆಯ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.50 ಲಕ್ಷ ಹಣ ಜಪ್ತಿ

ಗದಗ: ಕೊಪ್ಪಳದಿಂದ ಗದಗ ನಗರಕ್ಕೆ ಬರುತ್ತಿದ್ದ 2.50 ಲಕ್ಷ ಹಣವನ್ನ ಮುಂಡರಗಿ ರಸ್ತೆಯ ಚೆಕ್​​ಪೋಸ್ಟ್​​ನಲ್ಲಿ ಸೀಜ್​ ಮಾಡಲಾಗಿದೆ. ಚೆಕ್​​ಪೋಸ್ಟ್​​ನಲ್ಲಿ ಕಾರೊಂದನ್ನ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ