AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ಸೀರೆ ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು?

ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್​ಪೋಸ್ಟ್​ ನಿರ್ಮಿಸುವ ಮೂಲಕ ಚುನಾವಣಾ ಅಕ್ರಮವನ್ನ ತಡೆಗಟ್ಟಲಾಗುತ್ತಿದೆ. ಈ ಮಧ್ಯೆ ರಾಜ್ಯದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ‌ ಸಾಗಿಸುತ್ತಿದ್ದ ಹಣ ಹಾಗೂ ಸೀರೆಗಳನ್ನ ಜಪ್ತಿ ಮಾಡಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ಸೀರೆ ಜಪ್ತಿ: ಎಲ್ಲೆಲ್ಲಿ ಎಷ್ಟೆಷ್ಟು?
ಅಕ್ರಮವಾಗಿ ಸಾಗಿಸುತ್ತಿದ್ದ ಸೀರೆ, ಹಣವನ್ನ ಜಪ್ತಿ ಮಾಡಿದ ಪೊಲೀಸರು
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Mar 29, 2023 | 9:52 AM

Share

ಮುಖ್ಯಾಂಶಗಳು

  • ಯಾದಗಿರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ.ಮೌಲ್ಯದ ಟಾವಲ್​ಗಳು ಜಪ್ತಿ
  • ಮುಂಡರಗಿ ರಸ್ತೆಯ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.50 ಲಕ್ಷ ಹಣ ಜಪ್ತಿ
  • ದೇವನಹಳ್ಳಿ ಟೋಲ್​ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 7.5 ಲಕ್ಷ ನಗದು ಹಾಗೂ 531 ಸೀರೆಗಳು ಜಪ್ತಿ

ಬೆಂಗಳೂರು: ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಚೆಕ್​ಪೋಸ್ಟ್​ ನಿರ್ಮಿಸುವ ಮೂಲಕ ಚುನಾವಣಾ ಅಕ್ರಮವನ್ನ ತಡೆಗಟ್ಟಲಾಗುತ್ತಿದೆ. ಈ ಮಧ್ಯೆ ರಾಜ್ಯದ ಪ್ರತ್ಯೇಕ ಮೂರು ಪ್ರಕರಣಗಳಲ್ಲಿ ದಾಖಲೆಗಳಿಲ್ಲದೆ‌ ಸಾಗಿಸುತ್ತಿದ್ದ ಹಣ ಹಾಗೂ ಸೀರೆಗಳನ್ನ ಜಪ್ತಿ ಮಾಡಲಾಗಿದೆ. ಹೌದು ದೇವನಹಳ್ಳಿ ಟೋಲ್​ ಚೆಕ್​ಪೋಸ್ಟ್​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಒಟ್ಟು 7.5 ಲಕ್ಷ ನಗದು ಹಾಗೂ 531 ಸೀರೆಗಳು ಜಪ್ತಿ ಮಾಡಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಸಾಗಿಸಲಾಗುತ್ತಿದ್ದ ವಾಹನವನ್ನ ಚೆಕ್​ಪೋಸ್ಟಗಳಲ್ಲಿ ಪರಿಶೀಲಿಸಿದಾಗ ಅಕ್ರಮ ಬೆಳಕಿಗೆ ಬಂದಿದೆ. ಈ ಕುರಿತು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ ರೂ.ಮೌಲ್ಯದ ಟಾವಲ್​ಗಳು ಜಪ್ತಿ

ಯಾದಗಿರಿ: ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 10 ಲಕ್ಷ ರೂ. ಮೌಲ್ಯದ ಟಾವಲ್​ಗಳನ್ನ ಗುರುಮಠಕಲ್‌ ಪೊಲೀಸರು ಸೀಜ್ ಮಾಡಿದ್ದಾರೆ. ತೆಲಂಗಾಣದಿಂದ ಯಾದಗಿರಿ ಕಡೆ ಸಾಗಿಸಲಾಗುತ್ತಿದ್ದ ವೇಳೆ ಪರಿಶೀಲಿಸಿದಾಗ ಪತ್ತೆಯಾಗಿದೆ. ಈ ಕುರಿತು ರವಿ ಎಂಬ ವ್ಯಕ್ತಿಯನ್ನ ಬಂಧಿಸಲಾಗಿದೆ. ಇನ್ನು ಘಟನೆ ಗುರುಮಠಕಲ್‌ ಪಟ್ಟಣದ ಹೊರ ಭಾಗದಲ್ಲಿ ನಡೆದಿದೆ. ಇದರ ಜೊತೆಗೆ ಗುರುಮಠಕಲ್‌ ತಾಲೂಕಿನ ಚಂಡರಕಿ ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 315 ಲೀಟರ್ ಮದ್ಯವನ್ನ ವಶಕ್ಕೆ ಪಡೆದು, ಆನಂದ ಸೇರಿ ನಾಲ್ಕು ಜನರನ್ನ ಬಂಧಿಸಲಾಗಿದೆ. ಗುರುಮಠಕಲ್‌ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇನ್ನು ಜಿಲ್ಲೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಸುಮಾರು 1 ಲಕ್ಷ ರೂ. ಮೌಲ್ಯದ ಸೀರೆಗಳನ್ನ ಶಹಾಪುರ‌ ತಾಲೂಕಿನ ಮೂಡಬುಳ ಚೆಕ್ ಫೋಸ್ಟ್ ಬಳಿ ಭೀಮರಾಯನಗುಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸೀರೆಗಳನ್ನ ರಾಯಚೂರಿನಿಂದ ಕಲಬುರ್ಗಿಯ ಯಡ್ರಾಮಿಗೆ ಸಾಗಿಸಲಾಗುತ್ತಿದ್ದು, ಭೀಮರಾಯನಗುಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಇದನ್ನೂ ಓದಿ:ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಸುಳ್ಯ PFI ಕಚೇರಿ ಸಂಪೂರ್ಣ ಜಪ್ತಿ ಮಾಡಿದ ಎನ್​ಐಎ

ಮುಂಡರಗಿ ರಸ್ತೆಯ ಚೆಕ್​​ಪೋಸ್ಟ್​​ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.50 ಲಕ್ಷ ಹಣ ಜಪ್ತಿ

ಗದಗ: ಕೊಪ್ಪಳದಿಂದ ಗದಗ ನಗರಕ್ಕೆ ಬರುತ್ತಿದ್ದ 2.50 ಲಕ್ಷ ಹಣವನ್ನ ಮುಂಡರಗಿ ರಸ್ತೆಯ ಚೆಕ್​​ಪೋಸ್ಟ್​​ನಲ್ಲಿ ಸೀಜ್​ ಮಾಡಲಾಗಿದೆ. ಚೆಕ್​​ಪೋಸ್ಟ್​​ನಲ್ಲಿ ಕಾರೊಂದನ್ನ ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು