
ಇಂದು ಮಧ್ಯಾಹ್ನ 3 ಗಂಟೆಗೆ ರಾಜೀನಾಮೆ ಕೊಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಲೋಕಭವನಕ್ಕೆ ತೆರಳಿ ರಾಜೀನಾಮೆ ನೀಡುತ್ತೇನೆ. ರಾಜ್ಯಪಾಲರು ಇಲ್ಲದೇ ಇದ್ದರೆ ಅವರ ಕಾರ್ಯದರ್ಶಿಗೆ ರಾಜೀನಾಮೆ ನೀಡುವುದಾಗಿ ಸಿಎಂ ಮಾಹಿತಿ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಬ್ರೇಕ್ಫಾಸ್ಟ್ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಆಗಮಿಸಿದರು. ಇದೇ ವೇಳೆ, ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.
ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ಡಿ.ಕೆ.ಶಿವಕುಮಾರ್
ಸದ್ಯ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದೇ ಇರುವುದರಿಂದ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸಾಧ್ಯವೇ? ಅವರ ಮುಂದಿರುವ ಆಯ್ಕೆಗಳೇನು ಎಂಬ ಪ್ರಶ್ನೆಗಳು ಮೂಡಿವೆ. ರಾಜ್ಯಪಾಲರು ಲೋಕಭವನದಲ್ಲಿ ಇಲ್ಲದಿದ್ದರೂ ಗವರ್ನರ್ ವಿಶೇಷ ಕಾರ್ಯದರ್ಶಿ ಬಳಿ ರಾಜೀನಾಮೆ ಪತ್ರ ನೀಡಲು ಮುಖ್ಯಮಂತ್ರಿಗೆ ಸಾಂವಿಧಾನಿಕ ಅವಕಾಶ ಇದೆ. ಆದರೆ ಅಂಗೀಕಾರವಾಗಬೇಕಿದ್ದರೆ ರಾಜ್ಯಪಾಲರು ಬಂದೇ ಆಗಬೇಕು. ಈ ಕುರಿತು ವಿವರವಾದ ಮಾಹಿತಿ ಇಲ್ಲಿದೆ.
ರಾಜ್ಯಪಾಲರ ಅನುಪಸ್ಥಿತಿಯಲ್ಲೂ ಸಿದ್ದರಾಮಯ್ಯ ರಾಜೀನಾಮೆ ನೀಡಬಹುದೇ?#Siddaramaiah #GovernorThawarchandGehlot #KarnatakaPolitics #ResignationRules #Lokabhavanhttps://t.co/dVewUHcHOb
— TV9 Kannada (@tv9kannada) May 28, 2026
ಸಚಿವರ ಜೊತೆ ಸಿಎಂ ಸಿದ್ದರಾಮಯ್ಯರಿಂದ ಬ್ರೇಕ್ಫಾಸ್ಟ್ ಮೀಟಿಂಗ್ ಆರಂಭಗೊಂಡಿದೆ. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ, ಎನ್.ಎಸ್.ಬೋಸರಾಜು, ಡಾ.ಶರಣಪ್ರಕಾಶ್ ಪಾಟೀಲ್, ಎಸ್.ಎಸ್.ಮಲ್ಲಿಕಾರ್ಜುನ್, ಜಾರ್ಜ್, ಭೈರತಿ ಸುರೇಶ್, ಡಾ.ಎಂ.ಸಿ.ಸುಧಾಕರ್, ಎನ್.ಚಲುವರಾಯಸ್ವಾಮಿ, ಮಧುಬಂಗಾರಪ್ಪ, ಶಿವಾನಂದ ಪಾಟೀಲ್, ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಲಕ್ಷ್ಮೀ ಹೆಬ್ಬಾಳ್ಕರ್, H.K.ಪಾಟೀಲ್, ಮಹದೇವಪ್ಪ, ಶಿವರಾಜ ತಂಗಡಗಿ, ದಿನೇಶ್ ಗುಂಡೂರಾವ್, ಶಾಸಕರಾದ ಪೊನ್ನಣ್ಣ, ರಾಯರೆಡ್ಡಿ, ಅಶೋಕ್ ಪಟ್ಟಣ್, ಪುಟ್ಟರಂಗಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದಾರೆ.
ಬೆಂಗಳೂರಿನ ಡಿಸಿಎಂ ಡಿಕೆ ಶಿವಕುಮಾರ್ ಅವರ ಖಾಸಗಿ ನಿವಾಸದ ಬಳಿ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆಯಲ್ಲಿ ಹೆಚ್ಚುವರಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಪೊಲೀಸ್ ಕಬಡ್ಡಿ ಟೀಮ್ ಸೇರಿದಂತೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಕೂಡಾ ನಿಯೋಜಿಸಲಾಗಿದೆ.
ಯಾವುದೇ ರೀತಿಯ ದುಡುಕಿನ ಹೇಳಿಕೆ ಬೇಡ ಎಂದು ಬೆಂಬಲಿಗರಿಗೆ ಡಿಕೆ ಶಿವಕುಮಾರ್ ಖಡಕ್ ಸೂಚನೆ ಕೊಟ್ಟಿದ್ದಾರೆ ಎಂಬುದು ತಿಳಿದುಬಂದಿದೆ. ಹೈಕಮಾಂಡ್ ನಾಯಕರು ನನ್ನ ಜೊತೆಗೆ ಏನೂ ಮಾತನಾಡಿಲ್ಲ, ಎಲ್ಲವನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಮಾತನಾಡಿದ್ದಾರೆ. ಸಿಎಂ ರಾಜೀನಾಮೆ ವಿಷಯವೂ ಗೊತ್ತಿಲ್ಲ ಎಂದು ತಮ್ಮನ್ನು ಭೇಟಿಯಾದ ಸಚಿವರು, ಶಾಸಕರಿಗೆಲ್ಲ ಡಿಕೆಶಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ ಕಾಂಗ್ರೆಸ್ ಅಧಿಕಾರ ಹಂಚಿಕೆ ಬಿಕ್ಕಟ್ಟು ಕೊನೆಗೂ ಬಗೆಹರಿಯುವ ಲಕ್ಷಣಗಳು ಕಾಣಿಸಿವೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಇದನ್ನು ಪುಷ್ಟೀಕರಿಸಿವೆ. ದೆಹಲಿಯಲ್ಲಿ ಪಕ್ಷದ ಹೈಕಮಾಂಡ್ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇತರ ಪ್ರಮುಖ ನಾಯಕರು ಸುಧೀರ್ಘ ಸಭೆ ನಡೆಸಿದ ನಂತರ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿದ್ದವು. ಅದರಂತೆ ಇಂದು ಬ್ರೇಕ್ಫಾಸ್ಟ್ ಮೀಟಿಂಗ್ ನಡೆಸುವ ಸಿದ್ಧರಾಮಯ್ಯ, ರಾಜೀನಾಮೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ. ಮತ್ತೊಂದೆಡೆ ರಾಜ್ಯಪಾಲರ ಬೇಟಿಗೂ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಸಮಯ ಕೇಳಿದ್ದಾರೆ. ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ದಿಢೀರ್ ಆಗಿ ಮುಂಬೈ ಮೂಲಕ ಇಂದೋರ್ಗೆ ತೆರಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅವರು ವಾಪಸ್ ಇಂದೇ ಬರುತ್ತಾರೋ, ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೋ ಎಂಬ ಪ್ರಶ್ನೆಗಳು ಮೂಡಿವೆ. ಕರ್ನಾಟಕ ರಾಜಕಾರಣದ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಅಪ್ಡೇಟ್ ಆಗಲಿದ್ದು, ಲೇಟೆಸ್ಟ್ ಮಾಹಿತಿ ತಿಳಿಯಲು ಈ ಪುಟವನ್ನು ರಿಫ್ರೆಶ್ ಮಾಡುತ್ತಿರಿ.
Published On - 10:05 am, Thu, 28 May 26