AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮಾಜಕ್ಕೆ ಏನು ಕೊಟ್ಟಿದ್ದಾರೆ? ಇಬ್ರಾಹಿಂ ಪ್ರಶ್ನೆ

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವಾಗಲೇ ಮುಸ್ಲಿಮರು ಏನಾದ್ರೂ ಮಾಡಿಕೊಳ್ಬೇಕು. ನಂತರ ಮುಸ್ಲಿಮರಿಗೆ ಚೊಂಬೇ ಗತಿ ಎಂದು ಕಾಂಗ್ರೆಸ್​ ನಾಯಕ ಇಕ್ಬಾಳ್ ಅನ್ಸಾರಿ ಹೇಳಿದ್ದು, ಇದೀಗ ಇದಕ್ಕೆ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಪ್ರತಿಕ್ರಿಯಿಸಿ, ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮಾಜಕ್ಕೆ ಏನು ಮಾಡಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮಾಜಕ್ಕೆ ಏನು ಕೊಟ್ಟಿದ್ದಾರೆ? ಇಬ್ರಾಹಿಂ ಪ್ರಶ್ನೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Nov 11, 2024 | 6:31 PM

Share

ವಿಜಯಪುರ (ನವೆಂಬರ್ 11): ಸಿದ್ದರಾಮಯ್ಯ ಮುಸ್ಲಿಮರ ಪರವಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳುವಲ್ಲಿ ಹಿಂದೆಮುಂದೆ ನೋಡುತ್ತಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಒಂದೂವರೆ ವರ್ಷವಾಯಿತು. ಸಿದ್ದರಾಮಯ್ಯ ಮೇಲೆ ನಿರೀಕ್ಷೆ ಇಟ್ಟಿದ್ದು ಆಗಲಿಲ್ಲ ಎಂದು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಬೇಸರ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಇರುವಾಗಲೇ ಮುಸ್ಲಿಮರು ಏನಾದರೂ ಮಾಡಿಕೊಳ್ಳಬೇಕು, ಇಲ್ಲದಿದ್ರೆ ಮುಸ್ಲಿಮರಿಗೆ ಚೊಂಬೇ ಗತಿ ಎಂಬ ಮಾಜಿ ಸಚಿವ ಅನ್ಸಾರಿ ಹೇಳಿಕೆ ವಿಚಾರವಾಗಿ ಇಂದು ವಿಜಯಪುರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಇಬ್ರಾಹಿಂ ಅವರು, ಸಿದ್ದರಾಮಯ್ಯ ಸಿಎಂ ಆಗಿ ಒಂದೂವರೆ ವರ್ಷವಾಯ್ತು. ನಾವು ಸಿದ್ದರಾಮಯ್ಯ ಮೇಲೆ ನಿರೀಕ್ಷೆ ಇಟ್ಟಿಷ್ಟು ಆಗಲಿಲ್ಲ. ಮುಸ್ಲಿಮರಿಗೆ ರಿಸರ್ವೇಶನ್ ಆಗಿಲ್ಲ, ಹಿಜಾಬ್ ಬಗ್ಗೆ ಸುಪ್ರೀಂಕೋರ್ಟ್ ಆದೇಶವಾಗಿದ್ರು ನೋಟಿಫಿಕೇಶನ್ ಮಾಡಿಲ್ಲ. ಸಿದ್ದರಾಮಯ್ಯ ಕೆಲವೊಂದು ನಿರ್ಧಾರ ತೆಗೆದುಕೊಳ್ಳುವಲ್ಲಿ ಹಿಂದೆಮುಂದೆ ನೋಡುತ್ತಿದ್ದಾರೆ. ಅವರಿಗೆ ಏನು ಒತ್ತಡವಿದೆ ಎಂದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಬಳಿಕ ರಾಜ್ಯದ ಮುಸ್ಲಿಮರಿಗೆ ಚೊಂಬು: ಅನ್ಸಾರಿ

ಸಿದ್ದರಾಮಯ್ಯ ಮುಸ್ಲಿಮರನ್ನು ಒಲೈಸಿದ್ದಾರೆ ಎಂಬ ಮಾತು ಹೇಳುತ್ತಿದ್ದಾರೆ. ಎಲ್ಲಿ ಓಲೈಕೆ ಮಾಡಿದ್ದಾರೆ. ಸವಣೂರಿನಲ್ಲಿ 50 ಜನ ಮುಸ್ಲಿಂರನ್ನು ಒದ್ದು ಹೊರಗೆ ಹಾಕಿದ್ದಾರೆ. ಇದು ಓಲೈಕೆನಾ? ಸವಣೂರಿನಲ್ಲಿ ಇಲ್ಲ ಅವರೀಗ ಹಳ್ಳಿಗೆ ಹೋಗಿದ್ದಾರೆ. ಇಷ್ಟೆಲ್ಲ ಆದ್ರೂ ಇದುವರೆಗೆ ಒಂದೂ ಎಫ್‌ಐಆರ್ ಆಗಿಲ್ಲ. ಇದು ಓಲೈಕೆನಾ? ಓಲೈಸಿ ಏನು ಕೊಟ್ಟಿದ್ದಾರೆ ಹೇಳಲಿ ಎಂದು ಕಿಡಿಕಾರಿದರು.

ಏನಾದರೂ ಹೆಚ್ಚುವರಿ ಮುಸ್ಲಿಮರಿಗೆ ಕೊಟ್ಟಿದ್ದಾರಾ? ಬಜೆಟ್ ನಲ್ಲಿ ಮೈನಾರಿಟಿಗೆ ಅನುದಾನ ಕೊಟ್ಟಿದ್ದಾರಾ? ಏನು ಇಲ್ಲ ಓಲೈಕೆ ಅಂತ ನೀವು ಹಿಂಗೆ ಹೇಳ್ತೀರಾ, ಅವರು ಹಂಗೆ ಹೇಳ್ತಾರೆ. ಕಾಂಗ್ರೆಸ್ ಬಿಜೆಪಿ ಪಕ್ಷದವರು ಮುಸ್ಲಿಮರನ್ನು ಕೈಬಿಟ್ಟು ಬಿಡಿ. ನಿಮ್ಮ ಓಲೈಕೆನೂ ಬೇಡ ತೆಗಳಿಕೆಯೂ ಬೇಡ‌. ನಾವು ಸೌತೆಕಾಯಿ, ತೆಂಗಿನಕಾಯಿ ಮಾರಾಟ ಮಾಡಿ ಜೀವನ ಸಾಗಿಸುತ್ತೇವೆ ಎಂದರು.

ಸಿದ್ದರಾಮಯ್ಯ ಒಳ್ಳೆ ಕೆಲ್ಸ ಮಾಡ್ತಿದ್ದಾರೆ, ಮಾಡಿಲ್ಲ ಎಂದು ಹೇಳಲ್ಲ. ಆದರೆ ಒಬ್ಬ ವ್ಯಕ್ತಿಯಿಂದ ಆಗುತ್ತೆ ಅನ್ನೋದು ತಪ್ಪು. ಸಿಎಂ ಇಬ್ರಾಹಿಂ ಸತ್ತರೆ ಸಾಬರಿಗೆ ಯಾರಿದ್ದಾರೆ ಅಂದ್ರೆ ಏನರ್ಥ? ಇನ್ನೊಬ್ಬ ಇಬ್ರಾಹಿಂ ಹುಟ್ಟುತ್ತಾರೆ. ಮುಸ್ಲಿಂ ಸಮಾಜ ತತ್ವ ಸಿದ್ಧಾಂತದ ಮೇಲೆ ನಂಬಿಕೆ ಇಟ್ಟುಕೊಂಡಿದೆ‌. ಯಾರೂ ಅನಿವಾರ್ಯರಲ್ಲ ಎಂದರು.

ಇನ್ನು ಸಿಎಂ ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಲಿದ್ದಾರೆ ಎಂಬ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಕಾಂಗ್ರೆಸ್ ಗೆ ಗೊತ್ತಿರುವುದು, ನನಗೇನು ಗೊತ್ತು? ನಾನು ಕಾಂಗ್ರೆಸ್‌ನಲ್ಲಿಲ್ಲ. ನಾನು ಅದನ್ನು ಹೇಳಲಿಕ್ಕೆ ಹೋದ್ರೆ ವಿವಾದ ಆಗುತ್ತೆ. ಸಿದ್ದರಾಮಯ್ಯ ಈಗ ಸಿಎಂ ಆಗಿದ್ದಾರೆ ಅಷ್ಟೆ. ಅವರ ಮೇಲೆ ಆರೋಪ ಕೇಳಿ ಬಂದಾಗ ಅವರ ಪರವಾಗಿ ಮಾತನಾಡಿದೆ. ಸಿದ್ದರಾಮಯ್ಯ ಮೇಲೆ ಅಪಾದನೆ ಬಂದಿದ್ದು ತಪ್ಪು. ಅವರ ಆ ರೀತಿ ಕೆಲಸ ಮಾಡಿಲ್ಲ. ಸಿದ್ದರಾಮಯ್ಯರ ಮೇಲೆ ಮುಡಾ ಒಂದು ಪ್ರಕರಣವಷ್ಟೇ. ಅದನ್ನ ಈಗ ಬಿಜೆಪಿಯವರು ಎತ್ತಿದ್ದಾರೆ . ಇದರಲ್ಲಿ ಸಿದ್ದರಾಮಯ್ಯರ ಯಾವ ತಪ್ಪು ಇಲ್ಲ ಎಂದು ಹೇಳಿದರು. ಈ ಮೂಲಕ ಸಿದ್ದರಾಮಯ್ಯನವರನ್ನು ಸಮರ್ಥಿಸಿಕೊಂಡರು.

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್