AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕ ಆಸ್ತಿ ನಾಶಪಡಿಸಿದ್ರೆ ಕಂಡಲ್ಲಿ ಗುಂಡಿಕ್ಕಿ -ಸುರೇಶ್ ಅಂಗಡಿ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಕಿಚ್ಚಿಗೆ ವಾಹನಗಳು ಧಗಧಗಿಸುತ್ತಿವೆ. ಬಸ್, ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಪ್ರತಿಭಟನಾಕಾರರ ಆಕ್ರೋಶಕ್ಕೆ ಸಾರ್ವಜನಿಕ ಆಸ್ತಿ ಬೆಂಕಿಯಲ್ಲಿ ಬೆಂದು ಹೋಗಿದೆ. ‘ಸಾರ್ವಜನಿಕ ಆಸ್ತಿ ನಾಶಪಡಿಸಿದ್ರೆ ಕಂಡಲ್ಲಿ ಗುಂಡಿಕ್ಕಿ’ ಯೆಸ್, ದಿಲ್ಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಪೌರತ್ವದ ಕಿಚ್ಚಿಗೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಗಿದೆ. ಪ್ರತಿಭಟನೆಯ ಹೆಸರಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿರೋ ರೈಲ್ವೆ ಖಾತೆ ರಾಜ್ಯ […]

ಸಾರ್ವಜನಿಕ ಆಸ್ತಿ ನಾಶಪಡಿಸಿದ್ರೆ ಕಂಡಲ್ಲಿ ಗುಂಡಿಕ್ಕಿ -ಸುರೇಶ್ ಅಂಗಡಿ
ಸಾಧು ಶ್ರೀನಾಥ್​
|

Updated on: Dec 18, 2019 | 7:08 AM

Share

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಕಿಚ್ಚಿಗೆ ವಾಹನಗಳು ಧಗಧಗಿಸುತ್ತಿವೆ. ಬಸ್, ಕಾರುಗಳ ಗಾಜು ಪುಡಿ ಪುಡಿಯಾಗಿವೆ. ಪ್ರತಿಭಟನಾಕಾರರ ಆಕ್ರೋಶಕ್ಕೆ ಸಾರ್ವಜನಿಕ ಆಸ್ತಿ ಬೆಂಕಿಯಲ್ಲಿ ಬೆಂದು ಹೋಗಿದೆ.

‘ಸಾರ್ವಜನಿಕ ಆಸ್ತಿ ನಾಶಪಡಿಸಿದ್ರೆ ಕಂಡಲ್ಲಿ ಗುಂಡಿಕ್ಕಿ’ ಯೆಸ್, ದಿಲ್ಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಪೌರತ್ವದ ಕಿಚ್ಚಿಗೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿ ನಾಶವಾಗಿದೆ. ಪ್ರತಿಭಟನೆಯ ಹೆಸರಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕುತ್ತಿದ್ದಾರೆ. ಇದರ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿರೋ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ, ಉರಿಯೋ ಬೆಂಕಿಗೆ ಪೆಟ್ರೋಲ್ ಸುರಿದಿದ್ದಾರೆ. ರೈಲ್ವೆ ಇಲಾಖೆ ಸೇರಿದಂತೆ ಇತರೆ ಸಾರ್ವಜನಿಕ ಆಸ್ತಿಯನ್ನ ನಾಶಪಡಿಸಿದ್ರೆ ಕಂಡಲ್ಲಿ ಗುಂಡಿಕ್ಕಿ ಅಂತ ಅಧಿಕಾರಿಗಳಿಗೆ ಹೇಳಿದ್ದಾರೆ.

‘ಕರ್ನಾಟಕ ಕೂಡ ಹೊತ್ತಿ ಉರಿಯೋದ್ರಲ್ಲಿ ಸಂಶಯವಿಲ್ಲ’ ಇನ್ನು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಸಚಿವ ಯುಟಿ ಖಾದರ್ ಸಿಎಂ ಯಡಿಯೂರಪ್ಪಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲೂ ಕಾಯ್ದೆ ಅನುಷ್ಠಾನ ಮಾಡುತ್ತಾರೆಂಬ ಮಾಹಿತಿ ಸಿಕ್ಕಿದೆ. ಹಾಗೇನಾದ್ರೂ ಆದ್ರೆ ಕರ್ನಾಟಕ ಕೂಡ ಹೊತ್ತಿ ಉರಿಯುವುದರಲ್ಲಿ ಡೌಟೇ ಇಲ್ಲ ಎಂದಿದ್ದಾರೆ.

ಇನ್ನು ಉಡುಪಿಯಲ್ಲಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ದೇಶವನ್ನ ಈಗಾಗಲೇ ಆರ್ಥಿಕವಾಗಿ ನಿರ್ನಾಮ ಮಾಡಲಾಗಿದೆ. ಈಗ ಧರ್ಮದ ವಿಚಾರದಲ್ಲಿ ದೇಶವನ್ನ ಇಬ್ಭಾಗ ಮಾಡುತ್ತಿರೋದು ಸರಿಯಲ್ಲ ಅಂತ ಕಿಡಿಕಾರಿದ್ದಾರೆ. ಒಟ್ನಲ್ಲಿ, ಪೌರತ್ವದ ಕಿಚ್ಚು ರಾಜ್ಯಕ್ಕೂ ನಿಧಾನವಾಗಿ ವ್ಯಾಪಿಸುತ್ತಿದ್ದು, ರಾಜಕೀಯ ನಾಯಕರ ಹೇಳಿಕೆಗಳು ಅದಕ್ಕೆ ಪೆಟ್ರೋಲ್ ಸುರಿದಂತೆ ಕಾಣುತ್ತಿವೆ.

ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ